ಕರಾವಳಿ

ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ನ. 09. ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಸ್ವಾಧೀನ ಪಡಿಸಿಕೊಂಡು ಠಾಣಾ ಆವರಣದಲ್ಲಿ ಇರಿಸಲಾದ ವಾರಿಸುದಾರರು ಪತ್ತೆಯಾಗದ ಹಾಗೂ ಪ್ರಕರಣದಲ್ಲಿ ವಾರಿಸುದಾರರು ಈವರೆಗೂ ಬಾರದೇ ಶಿಥಿಲಾವಸ್ಥೆಗೆ ತಲುಪಿದ ಹಳೆಯ ವಾಹನಗಳ ವಿಲೇವಾರಿಗೆ ನ್ಯಾಯಾಲಯ ಹಾಗೂ ಮೇಲಾಧಿಕಾರಿಗಳು ಆದೇಶಿಸಿದ್ದು, ವಾಹನಗಳನ್ನು ನವೆಂಬರ್ 9 ರಂದು ಸಂಜೆ 4 ಗಂಟೆಗೆ ಕೊಣಾಜೆ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಕೊಣಾಜೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಾಹನಗಳ ಬಹಿರಂಗ ಹರಾಜು Read More »

ಕರಾವಳಿ

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ನ. 09. ವೆನ್‍ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ. ತಜ್ಞ ವೈದ್ಯ ಡಾ.ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ.ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ.ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ Read More »

ಕರಾವಳಿ, ಕರ್ನಾಟಕ

ನವೆಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ನ. 09. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ನವೆಂಬರ್ 11ರಂದು ಬೆಳಿಗ್ಗೆ 10.30 ಗಂಟೆಗೆ ಕುದ್ರೋಳಿಯಲ್ಲಿರುವ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರ ಉಪಸ್ಥಿತಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್

ನವೆಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ

ಡಿ.14ರಂದು ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ನ. 09. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು. ಲೋಕ ಅದಾಲತ್‍ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥಪಡಿಸಿಕೊಳ್ಳ ಬಹುದಾದ ಪ್ರಕರಣಗಳು:-

ಡಿ.14ರಂದು ಲೋಕ ಅದಾಲತ್ Read More »

ಕರಾವಳಿ

ಅರೆಕಾಲಿಕ ಶಿಕ್ಷಕರ ನೇಮಕಾತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 09. ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ, ಇಲ್ಲಿಗೆ ಅರೆಕಾಲಿಕ ನೆಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 21ರ ಒಳಗಾಗಿ ಖುದ್ದಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬೊಂದೇಲ್, ಮಂಗಳೂರು ಇಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2485401 ಸಂಪರ್ಕಿಸುವಂತೆ ಸರಕಾರಿ ಬಾಲಕರ ಬಾಲಮಂದಿರ, ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರೆಕಾಲಿಕ ಶಿಕ್ಷಕರ ನೇಮಕಾತಿ- ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ನ. 09. ಜಾಗದ ವಿವಾದಕ್ಕೆ ಸಂಬಂಧಿಸಿ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪೆರ್ಲ ನಿವಾಸಿಯಾಗಿದ್ದ ರಮೇಶ ಗೌಡ(51) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮೃತರ ಸಂಬಂಧಿ ಹರೀಶ್ ಎಂಬಾತ ಎನ್ನಲಾಗಿದೆ. ರಮೇಶ್ ಅವರು ಬೈಕ್ ನಲ್ಲಿ ಬರುತ್ತಿರುವ ವೇಳೆ ಅವರನ್ನು ಅಡ್ಡ ಕಟ್ಟಿ ಕತ್ತಿಯಿಂದ ಕಡಿದು ಕೊಲೆ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನವೆಂಬರ್ 10 ರಿಂದ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಪುನಾರಾವರ್ತಿತ ಹಾಸ್ಯ ಶೈಲಿಗೆ ಹಚ್ಚಿಕೊಂಡಿದ್ದ ಪ್ರೇಕ್ಷಕರಿಗೆ ವಿನೂತನ ಹಾಗೂ ವಿಭಿನ್ನ ಹಾಸ್ಯದ ಮೂಲಕ ಜನಮನಗೆದ್ದ ದೈಜಿವರ್ಲ್ಡ್ ವಾಹಿನಿಯ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿಯು ಭಾನುವಾರ ನವೆಂಬರ್ 10 ರಿಂದ ಆರಂಭವಾಗಲಿದೆ. ಕಲಾವಿದ ಜೋಡಿಗಳಾದ ಅರವಿಂದ ಬೋಳಾರ್ ಹಾಗೂ ವಾಲ್ಟರ್ ನಂದಳಿಕೆ ಜುಗಲ್ ಬಂಧಿಯು ಪ್ರೇಕ್ಷಕರ ಬೇಡಿಕೆಯ ಮೇರೆಗೆ ವಿದೇಶಗಳ ವೇದಿಕೆಯಲ್ಲೂ ಕರಾವಳಿ ಕರ್ನಾಟಕದ ಹೆಸರನ್ನು ರಾರಾಜಿಸುವಂತೆ ಮಾಡಿದ್ದಾರೆ. ಎಳೆ ಮಕ್ಕಳಿದಂದ ಹಿಡಿದು ವಯೋವೃದ್ದರ ತನಕ ಎಲ್ಲರ ಮನಮೆಚ್ಚಿದ

ಮಂಗಳೂರು: ನವೆಂಬರ್ 10 ರಿಂದ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿ ಆರಂಭ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗ ಬಾಧೆಯಿಂದ ತೀವ್ರವಾಗಿ ತತ್ತರಿಸಿ ಹೋಗಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಬಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕ್ಯಾ. ಚೌಟ

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ Read More »

ಕರಾವಳಿ

ನ.12ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

(ನ್ಯೂಸ್ ಕಡಬ) newskadaba.com ನ. 08. ಬಾಲಭವನ ಸೊಸೈಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ ಜಿಲ್ಲೆ, ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಬಾಲಭವನ ಕದ್ರಿಯಲ್ಲಿ ನವೆಂಬರ್ 12ರಂದು ಆಯೋಜಿಸಲಾಗಿದೆ. 1) ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ

ನ.12ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು Read More »

ಕರಾವಳಿ

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ನ. 08. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಹಳೆಯ ವಿಲೇವಾರಿಯಾದ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಮೂರು ಹಳೆಯ ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ನವೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಉತ್ತರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಠಾಣಾಧಿಕಾರಿಗಳು, ಮಂಗಳೂರು ಉತ್ತರ ಪೊಲೀಸ್ ಠಾಣೆ ಬಂದರು, ದೂರವಾಣಿ ಸಂಖ್ಯೆ 0824-2220516 ಅಥವಾ ಪೊಲೀಸ್ ನಿರೀಕ್ಷಕರ ಮೊಬೈಲ್ ಸಂಖ್ಯೆ 9480805338 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು Read More »

ಕರಾವಳಿ
Scroll to Top