ಕರಾವಳಿ

ಮನೆಯಲ್ಲೇ ನೇಣಿಗೆ ಶರಣಾದ ಮಹಿಳೆ; ತನಿಖೆ ಆರಂಭಿಸಿದ ಮೂಡುಬಿದಿರೆ ಪೊಲೀಸ್

(ನ್ಯೂಸ್‌ ಕಡಬ) newskadaba.com,  ಜು.18 :  ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿವನಲ್ಲಿರುವ ತನ್ನ ಮನೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಮಿಜಾರ್ ಬಳಿಯ ನಮೈಲೆ ನಿವಾಸಿ ಗುರು ಭಟ್ ಅವರ ಪತ್ನಿ स्नेಹಾ ಎಂದು ಗುರುತಿಸಲಾಗಿದೆ. ಇವರು ಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಬಲವಾದ ಅಥವಾ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ.ಮಾಹಿತಿ ತಿಳಿದ ತಕ್ಷಣ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ […]

ಮನೆಯಲ್ಲೇ ನೇಣಿಗೆ ಶರಣಾದ ಮಹಿಳೆ; ತನಿಖೆ ಆರಂಭಿಸಿದ ಮೂಡುಬಿದಿರೆ ಪೊಲೀಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಂದೇ ಮಾತರಂ ಗೀತೆಗೆ ಕಾನೂನು ರಕ್ಷಣೆ: ಕೇಂದ್ರದಿಂದ ಹೊಸ ಮಸೂದೆ ಸಿದ್ಧತೆ

(ನ್ಯೂಸ್‌ ಕಡಬ) newskadaba.com,  ಜು.18  ನವದೆಹಲಿ: ದೇಶಭಕ್ತಿಯ ಸಂಕೇತವಾಗಿರುವ ‘ವಂದೇ ಮಾತರಂ’ ಗೀತೆಗೆ ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜದ ಮಾದರಿಯಲ್ಲೇ ಸಮಾನ ಕಾನೂನು ಸ್ಥಾನಮಾನ ಹಾಗೂ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಈ ಸಂಬಂಧಿತ ತಿದ್ದುಪಡಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸಲಾಗಿದೆ. ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಗಟ್ಟುವಿಕೆ ಕಾಯ್ದೆ-1971’ಕ್ಕೆ ತಿದ್ದುಪಡಿ ತರಲಾಗುತ್ತಿದ್ದು, ವಂದೇ ಮಾತರಂ ಗೀತೆಗೆ ಅವಮಾನ ಮಾಡಿದರೆ ಅಥವಾ ಹಾಡುವಾಗ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ, ದಂಡ ಅಥವಾ

ವಂದೇ ಮಾತರಂ ಗೀತೆಗೆ ಕಾನೂನು ರಕ್ಷಣೆ: ಕೇಂದ್ರದಿಂದ ಹೊಸ ಮಸೂದೆ ಸಿದ್ಧತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಬಲಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

(ನ್ಯೂಸ್‌ ಕಡಬ) newskadaba.com,  ಜು.18  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿ ತನ್ನ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ  ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ಜೊತೆಗೆ ಬಾಟಾ ಶೋರೂಂನಲ್ಲಿ ಪಾರ್ಟ್‌ ಟೈಂ ಕೆಲಸ ನಿರ್ವಹಿಸುತ್ತಿದ್ದ.ಮನೆಯ ಮೇಲ್ಭಾಗದ ಪ್ರತ್ಯೇಕ ಕೊಠಡಿಯಲ್ಲಿದ್ದ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಬಲಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರದ ಬೆಲೆಯಲ್ಲಿ ಭಾರೀ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಜು.18 22 ಕ್ಯಾರಟ್ ಚಿನ್ನ (ಆಭರಣದ ಚಿನ್ನ): ಪ್ರತಿ 1 ಗ್ರಾಂಗೆ ₹70 ಏರಿಕೆಯಾಗಿ ₹13,135 ತಲುಪಿದೆ.8 ಗ್ರಾಂ (1 ಪವನ್): ₹1,05,080 ,10 ಗ್ರಾಂ: ₹1,31,350 ,100 ಗ್ರಾಂ: ₹13,13,500 24 ಕ್ಯಾರಟ್ ಚಿನ್ನ : ಪ್ರತಿ 1 ಗ್ರಾಂಗೆ ₹76 ಏರಿಕೆಯಾಗಿ ₹14,329 ತಲುಪಿದೆ. 8 ಗ್ರಾಂ: ₹1,14,632 10 ಗ್ರಾಂ: ₹1,43,290 100 ಗ್ರಾಂ: ₹14,32,900

ಬಂಗಾರದ ಬೆಲೆಯಲ್ಲಿ ಭಾರೀ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಜೇಶ್ವರದ ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ ಕಳ್ಳತನ: ತನಿಖೆ ಆರಂಭಿಸಿದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಜು.18 ಮಂಜೇಶ್ವರ: ಇಲ್ಲಿನ ಉದ್ಯಾವರ ಮಾಡ ಶ್ರೀ ಅರಸು ಕೃಪಾ ವೀರ ಮಾರುತಿ ವ್ಯಾಯಾಮ ಶಾಲೆಯ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯಲ್ಲಿದ್ದ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಈ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.ವ್ಯಾಯಾಮ ಶಾಲೆಯಲ್ಲಿ ನಡೆಯಲಿದ್ದ ಪೂಜೆಯ ಸಿದ್ಧತೆಗಳಿಗಾಗಿ ಶನಿವಾರ ಮುಂಜಾನೆ 5 ಗಂಟೆಗೆ ಪದಾಧಿಕಾರಿಯೊಬ್ಬರು ಆಗಮಿಸಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳರು ಕಬ್ಬಿಣದ ರಾಡ್ ಬಳಸಿ ಮುಖ್ಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ.

ಮಂಜೇಶ್ವರದ ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ ಕಳ್ಳತನ: ತನಿಖೆ ಆರಂಭಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಪಾಜೆ: ಕೃಷ್ಣ ಭಕ್ತಿಯ ಬಂಧ; ಅಮೆರಿಕನ್ ಯುವತಿ ಜೊತೆ ಸುಳ್ಯದ ಯುವಕನ ಸಾಂಪ್ರದಾಯಿಕ ವಿವಾಹ

(ನ್ಯೂಸ್‌ ಕಡಬ) newskadaba.com,  ಜು.18 ಸುಳ್ಯ: ಶ್ರೀಕೃಷ್ಣನ ಮೇಲಿನ ಭಕ್ತಿ ಹಾಗೂ ಭಾರತೀಯ ಸಂಸ್ಕೃತಿಯ ಮೇಲಿನ ಒಲವು ಅಮೆರಿಕದ ಯುವತಿ ಮತ್ತು ಸುಳ್ಯದ ಯುವಕನನ್ನು ವೈವಾಹಿಕ ಜೀವನಕ್ಕೆ ಒಪ್ತಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇವರ ಸಾಂಪ್ರದಾಯಿಕ ಹಿಂದೂ ವಿವಾಹ ಸಂಪನ್ನಗೊಂಡಿದೆ. ಸುಳ್ಯ ತಾಲೂಕಿನ ಗೂನಡ್ಕ ಬೀಜದಕಟ್ಟೆಯ ಬಿ.ಕೆ. ಕೇಶವ ಅವರ ಪುತ್ರ ಸಾಯಿ ಸಂಕೇತ್ ಮತ್ತು ಅಮೆರಿಕದ ಚಿಕಾಗೋ ನಗರದ ಡಾ. ಚಾರ್ಲ್ಸ್ ಅವರ ಪುತ್ರಿ ಶಾನೋನ್ ಹಸೆಮಣೆ ಏರಿದ

ಸಂಪಾಜೆ: ಕೃಷ್ಣ ಭಕ್ತಿಯ ಬಂಧ; ಅಮೆರಿಕನ್ ಯುವತಿ ಜೊತೆ ಸುಳ್ಯದ ಯುವಕನ ಸಾಂಪ್ರದಾಯಿಕ ವಿವಾಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೃತಕ ನೆರೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತ; ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಜು. 18. ಕರ್ನಾಟಕದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಾಗಿರುವ ಬೈಕಂಪಾಡಿಯ ಕೈಗಾರಿಕಾ ವಲಯದಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿದ್ದು, ಹಲವು ಕೈಗಾರಿಕಾ ಘಟಕಗಳು ಜಲಾವೃತಗೊಂಡಿವೆ. ಕೈಗಾರಿಕಾ ಘಟಕಗಳೊಳಗೆ ನೀರು ನುಗ್ಗಿದ ಪರಿಣಾಮ ಯಂತ್ರೋಪಕರಣಗಳು ಹಾಗೂ ಕಚ್ಚಾ ವಸ್ತುಗಳು ಹಾನಿಗೊಳಗಾಗಿದ್ದು, ಉದ್ಯಮಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಕೈಗಾರಿಕಾ ಪ್ರದೇಶದ ಸುತ್ತಮುತ್ತಲಿರುವ ಮಳೆನೀರು ಹರಿವಿನ ಚರಂಡಿಗಳ ಅವೈಜ್ಞಾನಿಕ ನಿರ್ಮಾಣ ಹಾಗೂ ಸಮರ್ಪಕ ನಿರ್ವಹಣೆಯ ಕೊರತೆಯೇ ಈ ಕೃತಕ

ಕೃತಕ ನೆರೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತ; ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಜು. 18. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಬಿಎಂಡಬ್ಲ್ಯು ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಈ ಐಷಾರಾಮಿ ಕಾರು ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ತಲುಪಿದಾಗ, ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಬರಲಾರಂಭಿಸಿದೆ. ಇದನ್ನು

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೃತ ಭಾರತ ನಿಲ್ದಾಣ ಯೋಜನೆ ಬಂಟ್ವಾಳ ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜು. 18. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್‌ನ ಜಲಂಧರ್ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬಂಟ್ವಾಳ ಸೇರಿದಂತೆ ರಾಷ್ಟ್ರದ 75 ರೈಲ್ವೇ ನಿಲ್ದಾಣಗಳ ಮರು ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಬಂಟ್ವಾಳ ರೈಲ್ವೇ ನಿಲ್ದಾಣದ ಬೃಹತ್ ಎಲ್.ಇ.ಡಿ ಪರದೆಯ ಮೂಲಕ ನೇರ ಪ್ರಸಾರ ಮಾಡಲಾಯಿತು. ​ ​ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ 26.18 ಕೋಟಿ ರೂ.

ಅಮೃತ ಭಾರತ ನಿಲ್ದಾಣ ಯೋಜನೆ ಬಂಟ್ವಾಳ ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಆತ್ಮಹತ್ಯೆಗೆ ಯತ್ನಿಸಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಕೊನೆಯುಸಿರು: ಪೊಲೀಸರಿಂದ ತನಿಖೆ ಚುರುಕು

(ನ್ಯೂಸ್‌ ಕಡಬ) newskadaba.com,  ಜು.18 ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಪ್ರಜ್ಞಾ (26) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿಯಾದ ಇವರು ಈಶ್ವರಮಂಗಲದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ (CHO) ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ವಿಷ ಸೇವಿಸಿದ್ದ ಪ್ರಜ್ಞಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಕೊನೆಯುಸಿರು: ಪೊಲೀಸರಿಂದ ತನಿಖೆ ಚುರುಕು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top