ಕರಾವಳಿ

Death, deadbody, Waterfall

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ನ. 05. ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ- ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ.  

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ ‘ಬೇಟಿ ಬಚಾವೋ’ ಪಾದಯಾತ್ರೆ

(ನ್ಯೂಸ್ ಕಡಬ) newskadaba.com ನ. 06. ಹೆಣ್ಣುಮಕ್ಕಳಿಗೆ ರಕ್ಷಣೆ ಮತ್ತು ಭದ್ರತೆ ನೀಡುವಂತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರವೀಣ್ ಮಂಗಳೂರು ಮತ್ತು ಮೂಸಾ ಶರೀಫ್ ರವರ ನಾಯಕತ್ವದಲ್ಲಿ ದಕ್ಷಿಣದಿಂದ ಉತ್ತರಕ್ಕೆ (ಮಂಗಳೂರು- ದೆಹಲಿ) “ಬೇಟಿ ಬಚಾವೋ” ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇಡೀ ವಿಶ್ವಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಒಂದು ಹೆಣ್ಣು ಓದಿನ ವಿಚಾರವಾಗಿಯೋ, ಕೆಲಸದ ವಿಚಾರವಾಗಿಯೋ, ಒಂದು ವ್ಯಾಪಾರದ ವಿಚಾರವಾಗಿಯೋ ಅಥವಾ

ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ ‘ಬೇಟಿ ಬಚಾವೋ’ ಪಾದಯಾತ್ರೆ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ

(ನ್ಯೂಸ್ ಕಡಬ) newskadaba.com ನ. 05. ಇದೇ ಬರುವ ನವೆಂಬರ್ 17 ಮತ್ತು 18ರಂದು ಪಿಲಿಕುಳದಲ್ಲಿ ಕಂಬಳ ನಡೆಯಲಿರುವ  ಹಿನ್ನೆಲೆಯಲ್ಲಿ ಸೋಮವಾರದಂದು ಕಂಬಳ ಕೆರೆಯಲ್ಲಿ ಸಿದ್ಧತೆಗಳ ಪರಿಶೀಲನೆ ನಡೆಯಿತು. ಶಾಸಕರಾದ ಉಮಾನಾಥ ಕೋಟ್ಯಾನ್, ಮಂಜುನಾಥ ಭಂಡಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ನೇತೃತ್ವದಲ್ಲಿ ಪಿಲಿಕುಲ ಕಂಬಳ ಕೆರೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಸೌಲಭ್ಯಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಕಂಬಳದ ಕೆರೆ ಪುನರ್‍ ನವೀಕರಣ ಈಗಾಗಲೇ ಬಹುತೇಕ ಅಂತಿಮಗೊಂಡಿದೆ. ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೆ ಬೇಕಾದ ಸೌಲಭ್ಯಗಳು,

ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ Read More »

ಕರಾವಳಿ, ಕ್ರೀಡಾ ನ್ಯೂಸ್

ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರು ತಿಳಿದಿರಬೇಕು- ಸಿವಿಲ್ ನ್ಯಾಯಾಧೀಶೆ ಬಿ.ಜಿ.ಶೋಭಾ

(ನ್ಯೂಸ್ ಕಡಬ) newskadaba.com ನ. 05. ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ನೀಡಲಾಗುವ ಹಲವಾರು ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರಿಗೆ  ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ಹೇಳಿದರು. ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ,

ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರು ತಿಳಿದಿರಬೇಕು- ಸಿವಿಲ್ ನ್ಯಾಯಾಧೀಶೆ ಬಿ.ಜಿ.ಶೋಭಾ Read More »

ಕರಾವಳಿ, ಕರ್ನಾಟಕ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ; ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 05. 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ  ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಯೋಜನೆಗಳು- ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP)ಯಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‍ ಲೈನ್  ಮೂಲಕ  ಅರ್ಜಿ ಸಲ್ಲಿಸಲು, ವಿದೇಶಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ; ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ Read More »

ಕರಾವಳಿ

ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿ ಸೇವೆ; ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. 2012ರ ಪೋಕ್ಸೋ ಕಾಯಿದೆಯಡಿ ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸಾಮಾಜಿಕ ಕಾರ್ಯ ಅಥವಾ ಮನೋವಿಜ್ಞಾನ ಅಥವಾ ಮಕ್ಕಳ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಮಕ್ಕಳ ಶಿಕ್ಷಣ, ಅಭಿವೃದ್ಧಿ, ರಕ್ಷಣೆ ವಿಷಯದಲ್ಲಿ ಕನಿಷ್ಠ 3 ವರ್ಷ ಅನುಭವವುಳ್ಳ ಪದವೀಧರರು, ಮಕ್ಕಳ ಹಕ್ಕುಗಳು ಅಥವಾ ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಸ್ಥೆಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಯ ಅಧಿಕಾರಿಗಳೂ ಅರ್ಜಿ ಸಲ್ಲಿಸಬಹುದು.

ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿ ಸೇವೆ; ಅರ್ಜಿ ಆಹ್ವಾನ Read More »

ಕರಾವಳಿ

ಸಜಿಪಮೂಡ ಗ್ರಾಮ ಪಂಚಾಯತ್ ಉಪಚುನಾವಣೆ- ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿ

(ನ್ಯೂಸ್ ಕಡಬ) newskadaba.com ನ. 05. ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮ ಪಂಚಾಯತ್ ನ ತೆರವಾಗಿರುವ ಸ್ಥಾನಕ್ಕೆ ಮತದಾನ ನಡೆಯಲಿದ್ದು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇದರ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿಯನ್ನು ಅಯ್ಕೆ ಮಾಡಲಾಯಿತು. ಸೋಮವಾರದಂದು ಕಾರಾಜೆಯಲ್ಲಿ ನಡೆದ ಅಭ್ಯರ್ಥಿ ಘೋಷಣೆ ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿಯಾದ ಖಬೀರ್ ಅಕರಂಗಡಿಯವರು ಘೋಷಣೆ ಮಾಡಿದರು.

ಸಜಿಪಮೂಡ ಗ್ರಾಮ ಪಂಚಾಯತ್ ಉಪಚುನಾವಣೆ- ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿ Read More »

ಕರಾವಳಿ

ಬಿಸ್ಮಿಲ್ಲಾ ಜುಮಾ ಮಸ್ಜಿದ್ ದೂಮಳಿಕೆ, ಕಾವಳಕಟ್ಟೆ; 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 05. ಕಾವಲಕಟ್ಟೆ ಬಿಸ್ಮಿಲ್ಲಾ ಜುಮಾ ಮಸೀದಿಯ ಆಡಳಿತ ಕಮಿಟಿಯ ವಾರ್ಷಿಕ ಮಹಾಸಭೆಯು ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಇವರ ಸಭಾ ಅದ್ಯಕ್ಷತೆಯಲ್ಲಿ ಆದಿತ್ಯವಾರದಂದು ಬಿಸ್ಮಿಲ್ಲಾ ಮದರಸ ದೂಮಳಿಕೆಯಲ್ಲಿ ನಡೆಯಿತು. ಸಭೆಯಲ್ಲಿ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹೈದರ್ ಕಾವಳಕಟ್ಟೆ, ಪ್ರ,ಕಾರ್ಯದರ್ಶಿಯಾಗಿ ಫರಾಝ್ ಬೆಂಗತ್ತೋಡಿ, ಉಪಾಧ್ಯಕ್ಷರಾಗಿ ಹಸೈನಾರ್ ಮದನಿ ದೂಮಳಿಕೆ, ಜೊತೆ ಕಾರ್ಯದರ್ಶಿಯಾಗಿ ಶಿಹಾಬ್ ದೂಮಳಿಕೆ, ವರ್ಕಿಂಗ್ ಕಾರ್ಯದರ್ಶಿಯಾಗಿ ಸಾದಿಕ್ ದೂಮಳಿಕೆ, ಕೋಶಾಧಿಕಾರಿಯಾಗಿ ಯೂಸುಫ್ ಅಲಂಗಾಲ್ ಮತ್ತು ಸದಸ್ಯರುಗಳಾಗಿ

ಬಿಸ್ಮಿಲ್ಲಾ ಜುಮಾ ಮಸ್ಜಿದ್ ದೂಮಳಿಕೆ, ಕಾವಳಕಟ್ಟೆ; 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ನ. 05 ಬಂಟ್ವಾಳ: ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿಯನ್ನು ದೇವಲದ ಬಾಗಿಲು ಮುರಿದು ಖದೀಮರು ಕಳ್ಳತನ  ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಸುಜೀರು ಎಂಬಲ್ಲಿರುವ ಶ್ರೀದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ನಡೆದಿದೆ. ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4 ಗಂಟೆಗೆ ದೇವಸ್ಥಾನದ ಬಾಗಿಲು ಮುರಿದು ನೂರಾರು ವರ್ಷಗಳ ಹಳೆಯದಾದ ಒಂದೂವರೆ ಕೆ.ಜಿ‌.ತೂಕದ ಬೆಳ್ಳಿಯ ದೇವರ ಪೀಠ, ಬಂಗಾರದ ದೇವರ ಮೂಗುತಿ, ದೇವರ ಕೊಡೆ ಸೇರಿ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ

ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ Read More »

ಕರಾವಳಿ

ದೇವಸ್ಥಾನದಲ್ಲಿ ಸುಡುಮದ್ದು ಸ್ಫೋಟ: ಮೃತರ ಸಂಖ್ಯೆ 4ಕ್ಕೆ ಏರಿಕೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 04. ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿಯಾಟ ಮಹೋತ್ಸವದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮೃತಪಟ್ಟವರನ್ನು ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ ಕೆ. ಬಿಜು (37), ಚೆರ್ವತ್ತೂರು ತುರುತ್ತಿಯ ಶೋಬಿನ್ ರಾಜ್ (19), ಕಿನಾವೂರಿನ ಸಂದೀಪ್ (38) ಎಂದು ಗುರುತಿಸಲಾಗಿದೆ. ಕಳೆದ ಸೋಮವಾರ ರಾತ್ರಿ ಘಟನೆ ನಡೆದಿದ್ದು, ಸ್ಫೋಟದಲ್ಲಿ 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿ ಗಂಭೀರ ಸುಟ್ಟ

ದೇವಸ್ಥಾನದಲ್ಲಿ ಸುಡುಮದ್ದು ಸ್ಫೋಟ: ಮೃತರ ಸಂಖ್ಯೆ 4ಕ್ಕೆ ಏರಿಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top