ಕರಾವಳಿ

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 04. ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಡೆಗೋಳಿ ನಿವಾಸಿ ಪ್ರವೀಣ (30) ಎಂದು ಗುರುತಿಸಲಾಗಿದೆ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ […]

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ನ. 02. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ದೀಪಾವಳಿ ಆಚರಿಸಿಕೊಂಡಿದ್ದು, ಸಂಜೆ ಪಣಂಬೂರಿನಲ್ಲಿರುವ ಕರಾವಳಿ ಭದ್ರತಾ ಪಡೆಯ ಮಂಗಳೂರು ಘಟಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಯೋಧರೊಂದಿಗೆ ಸಿಹಿ ಹಂಚಿಕೊಂಡು, ಜವಾನರೊಂದಿಗೆ ಉಭಯ ಕುಶಲೋಪರಿ ನಡೆಸುವ ಮೂಲಕ ದೀಪಾವಳಿಯನ್ನು ಅರ್ಥಪೂರ್ಣವಾಗಿ

ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ Read More »

ಕರಾವಳಿ, ಕರ್ನಾಟಕ

ಕಡಬ: ಮರಬಿದ್ದು ದ್ವಿಚಕ್ರ ವಾಹನ ಸವಾರ ಮೃತ್ಯು – ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 02. ಹಾಲುಮಡ್ಡಿ ಮರವೊಂದು ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿರುವ ಸ್ಥಳೀಯರು ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ದೂಪದ ಮರ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಪಾಯಕಾರಿ ಮರಗಳನ್ನು ಸಂಪೂರ್ಣ

ಕಡಬ: ಮರಬಿದ್ದು ದ್ವಿಚಕ್ರ ವಾಹನ ಸವಾರ ಮೃತ್ಯು – ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹೃದಯಾಘಾತದಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 02. ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಡಬ: ಹೃದಯಾಘಾತದಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ನ. 02. ನೇಪಾಳ ಮೂಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಾಪಿಕಾಡ್ ಬಳಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ (25) ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳಿಂದ ತೊಕ್ಕೊಟ್ಟುವಿನಲ್ಲಿ ಪುಡ್ ಕಾರ್ನರ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಕಾಪಿಕಾಡ್ ನಲ್ಲಿ ಬಾಡಿಗೆ ಕೊಠಡಿ ಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತಿಂಗಳ ಹಿಂದೆ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಬೇಸರಗೊಂಡ ಪತ್ನಿ ಪತಿಯನ್ನು ಬಿಟ್ಟು ಕುವೈತ್ ಗೆ ಹೋಗಿದ್ದರು.‌

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ನ. 01.  ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಸ್ತಾರ ಚಾನಲ್ ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮಣೆ ಅವರು ರಾಷ್ಟ್ರಧ್ವಜ ಮತ್ತು ನಾಡಧ್ವಜವನ್ನು ಆರೋಹಣವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದೀಪವನ್ನು ಹಚ್ಚುವುದರಿಂದ ಕಣ್ಣಿಗೆ ಆನಂದವಾಗುತ್ತದೆ. ಬೆಳಕು ಸಿಗುತ್ತದೆ. ನಮ್ಮ ಮುಖದ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ- ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ನ. 01. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ.ಪ್ರಕಾಶ್ ಪಾವ್ಲ್ ಡಿ’ಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿದರು. ಭಾಷೆ, ಸಂಸ್ಕೃತಿ ಹಾಗೂ ನಮ್ಮ ಭವ್ಯ ಪರಂಪರೆಗಳ ಕುರಿತು ವಿದ್ಯಾರ್ಥಿಗಳು ಅಭಿಮಾನ ಬೆಳೆಸಿಕೊಳ್ಳಬೇಕು. ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಹಿರಿಯರ ಆದರ್ಶಗಳು ಯುವ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸೈಂಟ್ ಅನ್ಸ್ ಆಂಗ್ಲ ಮಾಧ್ಯಮ ಶಾಲಾ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ- ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 01.  ರಾಜ್ಯ ಸರ್ಕಾರದ ಇಂಧನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಮತ್ತು ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕೆಳಹಂತದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೆಪಿಟಿಸಿಲ್‌ ಹಾಗೂ ವಿವಿಧ ಎಸ್ಕಾಂಗಳಲ್ಲಿನ ಬ್ಯಾಕ್‌ ಲಾಗ್ ಹುದ್ದೆಗಳೂ ಸೇರಿ ಕಿರಿಯ ಸ್ಟೇಷನ್ ಪರಿಚಾರಕ (JSA) ಮತ್ತು ಜೂನಿಯರ್ ಪವರ್ ಮ್ಯಾನ್ (JPM) ಎಂಬ ಒಟ್ಟು 2,984 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಕಲ್ಯಾಣ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ
crime, arrest, suspected

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 01. ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯೊಂದನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಬಂಧಿಸಿ 8 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಡೂರು ನಿವಾಸಿ ನಜೀರ್ ಹುಸೈನ್ ಮತ್ತು ಅಫ್ಸಾತ್ (37) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟದ ಖಚಿತ ಮಾಹಿತಿಯನ್ನು ಪಡೆದ  ಪೊಲೀಸ್ ತಂಡವು ದಾಳಿ

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 31.  ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿದ್ದಾಪುರ ವನ್ಯಜೀವಿ ವಲಯ ದ ಸಿಬ್ಬಂದಿಗಳು ಬಂಧಿಸಿದ್ದು ಇಬ್ಬರು ಪರಾರಿಯಾಗಿದ್ದಾರೆ. ಬಂಧಿತ ವ್ಯಕ್ತಿ ಕೊಡ್ಲಾಡಿ ಗ್ರಾಮದ ಜಗದೀಶ್ ಮೇಸ್ತ(49) ನನ್ನು ನವೆಂಬರ್ 8 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ವ್ಯಕ್ತಿಯಿಂದ 23kg ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಕುಂದಾಪುರ ಪ್ರಾದೇಶಿಕ ವಲಯಕ್ಕೆಒಪ್ಪಿಸಲಾಗಿದ್ದು ತನಿಖೆ ಮುಂದುವರೆದಿದೆ.    

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top