ಕರಾವಳಿ

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

(ನ್ಯೂಸ್ ಕಡಬ) newskadaba.com ಅ. 31. ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025ರ ವೇಳಾಪಟ್ಟಿ ಹೊರಡಿಸಿದ್ದು, ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಅಕ್ಟೋಬರ್ 29 ರಿಂದ ನವೆಂಬರ್ 28ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ನವೆಂಬರ್ 9, 10 ಹಾಗೂ 23, 24ರಂದು ವಿಶೇಷ ನೋಂದಣಿ ಅಭಿಯಾನ ಆಯಾ ಮತಗಟ್ಟೆಗಳಲ್ಲಿ ನಡೆಯಲಿದೆ. ಡಿಸೆಂಬರ್ 24ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, ಜನವರಿ 6ರಂದು ಅಂತಿಮ ಮತದಾರರ […]

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ Read More »

ಕರಾವಳಿ, ಕರ್ನಾಟಕ

ಬೈತಡ್ಕ: ಟ್ಯಾಂಕರ್ ಪಲ್ಟಿ- ಡೀಸೆಲ್ ಸೋರಿಕೆ

(ನ್ಯೂಸ್ ಕಡಬ) newskadaba.com ಅ.30. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಒಂದು ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಬುಧವಾರದಂದು ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸೆಲ್ ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆಯಿಂದ ಚಾಲಕನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಬೈತಡ್ಕ: ಟ್ಯಾಂಕರ್ ಪಲ್ಟಿ- ಡೀಸೆಲ್ ಸೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಜ್ವರದಿಂದ ಮಹಿಳೆ ಮೃತ್ಯು- ಡೆಂಗ್ಯೂ ಶಂಕೆ..!

(ನ್ಯೂಸ್ ಕಡಬ) newskadaba.com ಅ. 30. ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮೃತಪಟ್ಟಿದ್ದು, ಇವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.   ಮೃತಪಟ್ಟವರನ್ನು ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಲೀಲಾವತಿ ಅವರಿಗೆ ನಾಲ್ಕೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆರಂಭದಲ್ಲಿ ಉದನೆಯ ಕ್ಲಿನಿಕ್‍ ವೊಂದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಜ್ವರ ಹಿನ್ನೆಲೆ ಅ.25ರಂದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು,

ಜ್ವರದಿಂದ ಮಹಿಳೆ ಮೃತ್ಯು- ಡೆಂಗ್ಯೂ ಶಂಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೊಸ ಸೇತುವೆ ನಿರ್ಮಿಸುವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಸಭೆ..!

(ನ್ಯೂಸ್ ಕಡಬ) newskadaba.com ಅ. 30. ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತಾಗಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿದರು. ಎರಡೂ ಕಡೆ ಸೇತುವೆಯ ಘನ ವಾಹನ ಸಂಚಾರ ಸ್ಥಗಿತದಿಂದ ಸಾರ್ವಜನಿಕ ಬಸ್ ಸಂಚಾರ ಮತ್ತು ಕಾರ್ಮಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಇತ್ತೀಚೆಗೆ ಪೊಳಲಿ ಮತ್ತು ಉಳಾಯಿಬೆಟ್ಟಿನಲ್ಲಿ

ಹೊಸ ಸೇತುವೆ ನಿರ್ಮಿಸುವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಸಭೆ..! Read More »

ಕರಾವಳಿ

ಪಿಲಿಕುಳದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು..!

(ನ್ಯೂಸ್ ಕಡಬ) newskadaba.com ಅ. 30. ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರದಂದು ಮುಂಜಾನೆ ನಡೆದಿದೆ. ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದ್ದು, ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್

ಪಿಲಿಕುಳದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಅ. 30. ನಮ್ಮ ದೈನಂದಿನ ಜೀವನದಲ್ಲಿ ಶಿಸ್ತುರಹಿತ ಆಹಾರ ಸೇವನೆ ಮತ್ತು ಅಸಮರ್ಪಕ ಜೀವನ ಶೈಲಿಯಿಂದಾಗಿ ನಮ್ಮ ಆರೋಗ್ಯ ಇಂದು ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೆನ್‍ ಲಾಕ್ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು

ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು- ಮಮತಾ ಗಟ್ಟಿ Read More »

ಕರಾವಳಿ

ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಿಗಾವಹಿಸಿ- ಶಿಕ್ಷಕರಿಗೆ ಜಿ.ಪಂ ಸಿಇಓ ಕರೆ

(ನ್ಯೂಸ್ ಕಡಬ) newskadaba.com ಅ. 30. ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಬಗ್ಗೆ ತಿಳಿದುಕೊಂಡು ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಮನೋಸ್ಥೈರ್ಯ ತರಬೇತಿ ಕಾರ್ಯಕ್ರಮವನ್ನು ಶಿಕ್ಷಕರಿಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್.ಕೆ ಅವರು ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ

ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಿಗಾವಹಿಸಿ- ಶಿಕ್ಷಕರಿಗೆ ಜಿ.ಪಂ ಸಿಇಓ ಕರೆ Read More »

ಕರಾವಳಿ

ಇಂದು(ಅ.30) ಸಂಸದ ಬ್ರಿಜೇಶ್‌ ಚೌಟ ಸಾರ್ವಜನಿಕ ಭೇಟಿಗೆ ಲಭ್ಯ

(ನ್ಯೂಸ್ ಕಡಬ) newskadaba.com ಅ. 30. ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಇಂದು (ಅ. 30) ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ

ಇಂದು(ಅ.30) ಸಂಸದ ಬ್ರಿಜೇಶ್‌ ಚೌಟ ಸಾರ್ವಜನಿಕ ಭೇಟಿಗೆ ಲಭ್ಯ Read More »

ಕರಾವಳಿ

ಅರಂತೋಡು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿಯವರಿಗೆ ವಿದಾಯ ಸಮಾರಂಭ

(ನ್ಯೂಸ್ ಕಡಬ) newskadaba.com ಅ. 29. ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಮಂಗಳವಾರದಂದು ಅರಂತೋಡಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದರು. ಈ ಸಂದರ್ಭದಲ್ಲಿ ನಿವೃತಗೊಳ್ಳಲಿರುವ ಸರಸ್ವತಿ ಮತ್ತು ಚಿದಾನಂದ ದಂಪತಿ ಕೊಡುಗೆಯಾಗಿ ನೀಡಿದ ದೀಪವನ್ನೂ ಹಸ್ತಾಂತರಿಸಿದರು. ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿಯವರಿಗೆ ವಿದಾಯ ಸಮಾರಂಭ Read More »

ಕರಾವಳಿ

ಕಡಬ: ದೀಪಾವಳಿ ಪ್ರಯುಕ್ತ ಮರ್ಧಾಳದ ‘ಎಲೈಟ್ ಮಂದಿ ಹೋಟೆಲ್’ನಲ್ಲಿ 5 ದಿನಗಳ ಕಾಲ ಭರ್ಜರಿ ಆಫರ್..!

(ನ್ಯೂಸ್ ಕಡಬ) newskadaba.com ಅ. 29. ಇತ್ತೀಚೆಗೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶುಭಾರಂಭಗೊಂಡಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ದೀಪಾವಳಿ ಪ್ರಯುಕ್ತ ಇಂದಿನಿಂದ (ಅ.29) ನ.02ರ ಶನಿವಾರದವರೆಗೆ ಐದು ದಿನಗಳ ಕಾಲ ಭರ್ಜರಿ ಆಫರ್ ನಡೆಯಲಿದೆ. ಫುಲ್ ಅಲ್-ಫಹಮ್ ಮಂದಿ, ಫುಲ್ ಚಿಕನ್ ಲಾಲಿ ಪಾಪ್, ಮಯೋನಿಸ್, ಸಲಾಡ್, 5 ಪರೋಟಾ & ಗ್ರೇವಿ, 1 ltr. Sprite ಕೇವಲ

ಕಡಬ: ದೀಪಾವಳಿ ಪ್ರಯುಕ್ತ ಮರ್ಧಾಳದ ‘ಎಲೈಟ್ ಮಂದಿ ಹೋಟೆಲ್’ನಲ್ಲಿ 5 ದಿನಗಳ ಕಾಲ ಭರ್ಜರಿ ಆಫರ್..! Read More »

ಕರಾವಳಿ
Scroll to Top