ಕರಾವಳಿ

”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ

(ನ್ಯೂಸ್ ಕಡಬ)newskadaba.com, ಅ.28, ಮಂಗಳೂರು: ಜಾತಿ ವ್ಯವಸ್ಥೆಯನ್ನು ಅನಿಷ್ಠ ಎಂದಿರುವವರೇ ಅದನ್ನು ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ಎಂದು ಹೇಳುವಾಗ ಜಾತಿ ಗಣತಿ ಅಗತ್ಯ ಏನಿದೆ? ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ […]

”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ Read More »

ಕರಾವಳಿ

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.28. ಶಿವಳ್ಳಿ ಸ್ಪಂದನ ಮಂಗಳೂರು ಎಂಬ ಸಂಸ್ಥೆಯ ಹೆಸರಿನಲ್ಲಿ ಸಂಸ್ಥೆಯ ಲೆಟರ್‌ಹೆಡ್ ಮತ್ತು ನಕಲಿ ಸೀಲು ಬಳಸಿ ವಂಚಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂಘದ ಕಾರ್ಯದರ್ಶಿ ಹೆಸರಿನಲ್ಲಿ ಆರೋಪಿ ಭಾಸ್ಕರ್ ಭಟ್ ಎಂಬಾತ ಲೆಟರ್‌ಹೆಡ್ ಮತ್ತು ಸೀಲ್‌ನ್ನು ನಕಲಿ ಮಾಡಿದ್ದು, ಸಂಘಕ್ಕೆ ಸಂಬಂಧಿಸಿದ ದಾಖಲೆಗಳನ್ನು ತನ್ನಲ್ಲಿ ಇರಿಸಿಕೊಂಡಿದ್ದಾನೆ ಎಂದು ಆರೋಪಿಸಿ ಕಾರ್ಯದರ್ಶಿ ಕೃಷ್ಣ ಭಟ್ ಎಂಬವರು ಶನಿವಾರ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.    

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

”ಮನ್ ಕಿ ಬಾತ್” ನಲ್ಲಿ ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿಮೋದಿ ಸಲಹೆ

(ನ್ಯೂಸ್ ಕಡಬ) newskadaba.com ಅ.28, ನವದೆಹಲಿ: ದೂರವಾಣಿ ಮೂಲಕ ಕರೆ ಮಾಡಿ ‘ನಿಮ್ಮನ್ನು ಡಿಜಿಟಲ್‌ ಅರೆಸ್ಟ್‌ ಮಾಡಲಾಗಿದೆ’ ಎಂದು ಹೆದರಿಸಿ ಬ್ಯಾಂಕ್‌ ಖಾತೆಯಲ್ಲಿರುವ ಹಣವನ್ನು ದೋಚುವ ದಂಧೆ ದೇಶಾದ್ಯಂತ ವ್ಯಾಪಿಸಿರುವಾಗಲೇ, ಅದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನಸಾಮಾನ್ಯರು ಎಚ್ಚೆತ್ತುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಈ ರೀತಿಯ ದಂಧೆಗಳಿಂದ ಪಾರಾಗಲು ಪ್ರಧಾನಿಯವರು ದೇಶವಾಸಿಗಳಿಗೆ ಮೂರು ಸಲಹೆಗಳನ್ನು ನೀಡಿದ್ದಾರೆ. ಕೆಲ ತಿಂಗಳ ಹಿಂದೆ ಸೈಬರ್‌ ವಂಚಕರು ವಿಜಯಪುರ ಸಂತೋಷ್‌ ಪಾಟೀಲ್‌ಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು. ಆದರೆ ಅದನ್ನು ಅತ್ಯಂತ

”ಮನ್ ಕಿ ಬಾತ್” ನಲ್ಲಿ ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿಮೋದಿ ಸಲಹೆ Read More »

ಕರಾವಳಿ
crime, arrest, suspected

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.28. ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.    

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಇಂದು (ಅ.28) ‘ಕ್ಯೂ ಮೊಬೈಲ್ಸ್ ಮತ್ತು ಕ್ಯೂ ಮೆನ್ಸ್ ಹಬ್’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.28. ಇಲ್ಲಿನ ಮುಖ್ಯ ಪೇಟೆಯ ಸಂಗೀತಾ ಇಲೆಕ್ಟ್ರಾನಿಕ್ ಸಮೀಪದ ಇಂಪಾಲ ಕಾಂಪ್ಲೆಕ್ಸ್ ನಲ್ಲಿ ‘ಕ್ಯೂ ಮೊಬೈಲ್ಸ್ & ಕ್ಯೂ ಮೆನ್ಸ್ ಹಬ್’ ಇಂದು (ಅಕ್ಟೋಬರ್ 28) ಶುಭಾರಂಭಗೊಳ್ಳಲಿದೆ. ನೂತನ ಮೊಬೈಲ್ ಮಳಿಗೆಯಲ್ಲಿ ವಿವಿಧ ಕಂಪೆನಿಗಳ ಮೊಬೈಲ್ ಮಾರಾಟ, ರಿಪೇರಿ, ಬಿಡಿಭಾಗಗಳು, ವಾಚ್ ಹಾಗೂ ಪರ್ಫ್ಯೂಮ್ ಗಳು ಲಭ್ಯವಿರಲಿದೆ. ಅದೇ ರೀತಿ ನೂತನ ಕ್ಯೂ ಮೆನ್ಸ್ ಹಬ್ ಮಳಿಗೆಯಲ್ಲಿ ಶರ್ಟ್, ಪ್ಯಾಂಟ್, ಟಿಶರ್ಟ್, ಶೂ ಗಳು ದೊರೆಯಲಿದೆ. ಶುಭಾರಂಭದ ಪ್ರಯುಕ್ತ Buy 2

ಕಡಬದಲ್ಲಿ ಇಂದು (ಅ.28) ‘ಕ್ಯೂ ಮೊಬೈಲ್ಸ್ ಮತ್ತು ಕ್ಯೂ ಮೆನ್ಸ್ ಹಬ್’ ಶುಭಾರಂಭ Read More »

ಕರಾವಳಿ
crime, arrest, suspected

ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಅ.26. ಕೆಲ ದಿನಗಳ ಹಿಂದೆ ಸರಕಾರಿ ಆಸ್ಪತ್ರೆಯ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನೋರ್ವನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಈತ​ನನ್ನು ಪೊಲೀಸರು ತಮಿಳುನಾಡಿನಿಂದ ಸೆರೆಹಿಡಿದು ಸುಳ್ಯಕ್ಕೆ ಕರೆ ತಂದು, ಆತನ ಆರೋಗ್ಯ ತಪಾಸಣೆಗೆಂದು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ

ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ

(ನ್ಯೂಸ್ ಕಡಬ) newskadaba.com ಅ.26, ಭಟ್ಕಳ: ಭಟ್ಕಳದ ಹಿರಿಯ ಸಾಮಾಜಿಕ ಹೋರಾಟಗಾರ, ಎಸ್.ಜೆ. ಸೈಯದ್ ಖಾಲಿದ್ ರವರು ಶನಿವಾರ ಪೂರ್ವಾಹ್ನ 11 ಗಂಟೆ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಾರು 28 ವರ್ಷಗಳ ಕಾಲ ಅಬುಧಾಬಿಯಲ್ಲಿ ಉದ್ಯೋಗಿಯಾಗಿದ್ದ ಸೈಯದ್ ಖಾಲಿದ್ ಅಲ್ಲಿ ನವಾಯತ್ ಸಮುದಾಯದ ಮರ್ಕಝಿ ಅನ್ ನವಾಯತ್ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಟ್ಕಳ ಮುಸ್ಲಿಮ್ ಜಮಾಅತೆ ಅಬುಧಾಬಿಯ ಎರಡು ಅವಧಿಯ ಕಾರ್ಯದರ್ಶಿಯಾಗಿ ಹಾಗೂ ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂಜುಮನ್,

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ Read More »

ಕರಾವಳಿ
crime, arrest, suspected

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಅ.26. ಕರ್ತವ್ಯನಿರತ ಸಂಚಾರಿ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್‌ (27) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭ ಆತ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಢಿಕ್ಕಿಯಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಈಜಲು ಹೋದ ಇಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಅ.26, ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಅ.26 ರಂದು ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕನಾಗಿದ್ದು, ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಜಲು ಹೋದ ಇಬ್ಬರು ಸಮುದ್ರಪಾಲು Read More »

ಕರಾವಳಿ

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆ ಸಲ್ಲಿಸಿದ ಪೊಲೀಸ್ ಶ್ವಾನ ‘ಕ್ಯಾಪ್ಟನ್’ ತನ್ನ ಸೇವೆಯಿಂದ ಅ.25ರಂದು ನಿವೃತ್ತಿ ಹೊಂದಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಕ್ಯಾಪ್ಟನ್‌ಗೆ ಪೊಲೀಸ್ ಅಧೀಕ್ಷಕರು ನಿವೃತ್ತಿ ಸನ್ಮಾನ ಮಾಡಿದರು. ಮಾನ್ಯ ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳು, ಐಪಿಎಲ್ ಟೂರ್ನಿ, ವಿಶ್ವಕಪ್, ಏರ್ ಶೋ, ಬೇರೆ ದೇಶಗಳ ಗೌರವಾನ್ವಿತ ಪ್ರಧಾನಿಗಳು ಹೀಗೆ ರಾಜ್ಯ ಹೊರರಾಜ್ಯ ಹೊರ ಜಿಲ್ಲೆಗಳಲ್ಲಿ ಸರಿ ಸುಮಾರು 400 ಕ್ಕೂ ಅಧಿಕ ವಿದ್ವಂಸಕ ಕೃತ್ಯ ತಪಾಸಣಾ

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ Read More »

ಕರಾವಳಿ
Scroll to Top