ಕರಾವಳಿ

ಪುತ್ತೂರು: ಶಾಲಾ ಮಕ್ಕಳ ಹಾಜರಾತಿಗಾಗಿ ಹಳೆ ವಿದ್ಯಾರ್ಥಿಯಿಂದ ಅತ್ಯಾಧುನಿಕ ‘ಸೂಪರ್ ಬಯೋಮೆಟ್ರಿಕ್’ ವ್ಯವಸ್ಥೆ ಅಭಿವೃದ್ಧಿ

(ನ್ಯೂಸ್‌ ಕಡಬ) newskadaba.com,  ಜು.18 ಪುತ್ತೂರು: ಶಾಲಾ ಮಕ್ಕಳ ಸುರಕ್ಷತೆಯನ್ನು ಬಲಪಡಿಸುವ ಮತ್ತು ವಿದ್ಯಾರ್ಥಿಗಳು ತರಗತಿ ತಪ್ಪಿಸುವುದನ್ನು ತಡೆಯುವ ಉದ್ದೇಶದಿಂದ, ಕೊಂಬೆಟ್ಟು ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಅರುಣ್ ಕುಮಾರ್ ಅತ್ಯಾಧುನಿಕ ‘ಸೂಪರ್ ಬಯೋಮೆಟ್ರಿಕ್’ ಹಾಜರಾತಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಲಾ ಆವರಣಕ್ಕೆ ಆಗಮಿಸಿ, ಕ್ಯಾಮೆರಾ ಮತ್ತು ಬಯೋಮೆಟ್ರಿಕ್ ಮೂಲಕ ಹಾಜರಾತಿ ದಾಖಲಿಸುತ್ತಿದ್ದಂತೆಯೇ ಅವರ ಪೋಷಕರ ಮೊಬೈಲ್‌ಗೆ ಸ್ವಯಂಚಾಲಿತವಾಗಿ ಸಂದೇಶ (SMS) ರವಾನೆಯಾಗುತ್ತದೆ. ಅಟಲ್ ಟಿಂಕರಿಂಗ್ ಲ್ಯಾಬ್ ನೆರವಿನೊಂದಿಗೆ, ರಾಸ್ಪ್‌ಬೆರಿ ಪೈ 5 ಪ್ರೊಸೆಸರ್ ಬಳಸಿ ಸುಮಾರು […]

ಪುತ್ತೂರು: ಶಾಲಾ ಮಕ್ಕಳ ಹಾಜರಾತಿಗಾಗಿ ಹಳೆ ವಿದ್ಯಾರ್ಥಿಯಿಂದ ಅತ್ಯಾಧುನಿಕ ‘ಸೂಪರ್ ಬಯೋಮೆಟ್ರಿಕ್’ ವ್ಯವಸ್ಥೆ ಅಭಿವೃದ್ಧಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜು. 18) ದಕ್ಷಿಣ ಕನ್ನಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 17. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (12ನೇ ತರಗತಿ ವರೆಗೆ) ಜುಲೈ18 ಶನಿವಾರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ನಾಳೆ (ಜು. 18) ದಕ್ಷಿಣ ಕನ್ನಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸುಳ್ಯ: ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಉಪತಹಶೀಲ್ದಾರ್ ಆಗಿ ಬಡ್ತಿ

(ನ್ಯೂಸ್ ಕಡಬ) newskadaba.com ಜು. 17. ಸುಳ್ಯ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವಿನ್ ರಂಗತ್ತಮಲೆ ಅವರು ಉಪತಹಶೀಲ್ದಾರ್ ಆಗಿ ಬಡ್ತಿ ಹೊಂದಿದ್ದು, ಸುಳ್ಯದಲ್ಲಿಯೇ ತಮ್ಮ ಸೇವೆಯನ್ನು ಮುಂದುವರಿಸಲಿದ್ದಾರೆ. ಬೆಳ್ತಂಗಡಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರ್ಕಾರಿ ಸೇವೆಯನ್ನು ಆರಂಭಿಸಿದ್ದ ಇವರು, ಗ್ರಾಮ ಆಡಳಿತಾಧಿಕಾರಿಯಾಗಿ ಮರ್ಕಂಜ ಗ್ರಾಮಕ್ಕೆ ನೇಮಕಗೊಂಡ ಬಳಿಕ ಅಜ್ಜಾವರ, ಮಂಡೆಕೋಲು, ಉಬರಡ್ಕ ಮಿತ್ತೂರು ಹಾಗೂ ಜಾಲ್ಸೂರು ಗ್ರಾಮಗಳಲ್ಲಿ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2014ರಲ್ಲಿ ಕಂದಾಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ಅವರು, ಪ್ರಸ್ತುತ

ಸುಳ್ಯ: ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಉಪತಹಶೀಲ್ದಾರ್ ಆಗಿ ಬಡ್ತಿ Read More »

ಕರಾವಳಿ

ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ

(ನ್ಯೂಸ್ ಕಡಬ) newskadaba.com ಕಡಬ, ಜು. 17. ಜುಲೈ 16ರ ಗುರುವಾರದಂದು ಸಂಜೆ 4:30ಕ್ಕೆ ಕಡಬದಿಂದ ಪಂಜ ಮಾರ್ಗವಾಗಿ ಸುಳ್ಯಕ್ಕೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ಸುಮಾರು ನಾಲ್ಕು ಪವನ್ ಚಿನ್ನದ ಕರಿಮಣಿ ಸರ ಕಳೆದುಹೋಗಿರುತ್ತದೆ.                                               ​   ಬಸ್ಸಿನಲ್ಲಿ ಅಥವಾ ಬಸ್ ನಿಲ್ದಾಣದ ಪರಿಸರದಲ್ಲಿ ಈ ಸರವು ಯಾರಿಗಾದರೂ ದೊರೆತಿದ್ದಲ್ಲಿ, ದಯವಿಟ್ಟು ಮಾನವೀಯತೆಯ ದೃಷ್ಟಿಯಿಂದ ಈ ಕೆಳಗಿನ 7349319974, 9164192010 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ವಿನಂತಿ. ಸರವನ್ನು ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನವನ್ನು

ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ವಲಯಾರಣ್ಯಾಧಿಕಾರಿ ಎನ್. ಮಂಜುನಾಥ್ ಅವರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ರಾಜ್ಯ ಅರಣ್ಯ ಇಲಾಖೆಯಲ್ಲಿ ನಡೆದ  40 ವಲಯ ಅರಣ್ಯಾಧಿಕಾರಿಗಳ (RFO) ವರ್ಗಾವಣೆಗೆ ಸಂಬಂಧಿಸಿದ ಆದೇಶ ಹೊರಡಿಸಲಾಗಿದೆ.   ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಅವರನ್ನು ಕುಶಾಲನಗರದ ವಲಯ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ಸುಳ್ಯ ಹಾಗೂ ಪಂಜ ವಲಯ ಅರಣ್ಯಾಧಿಕಾರಿಯಾಗಿದ್ದ ಮಂಜುನಾಥ್ ಅವರು ದಕ್ಷ ಹಾಗು ಜನಪ್ರಿಯ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರನ್ನು ಕುಶಾಲನಗರದ ವಲಯ ಅರಣ್ಯ

ಸುಳ್ಯ ವಲಯಾರಣ್ಯಾಧಿಕಾರಿ ಎನ್. ಮಂಜುನಾಥ್ ಅವರಿಗೆ ವರ್ಗಾವಣೆ Read More »

ಕರಾವಳಿ

ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಎಸ್.ಐ.ಆರ್‍ ನಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರು ಹಕ್ಕನ್ನು ಚಲಾಯಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತಿ ಸ್ವೀಪ್ ಸಂಯೋಜಕಿ ಸುಮಂಗಲ ನಾಯಕ್ ಹೇಳಿದ್ದಾರೆ. ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವಿಶೇಷ ಸಮಗ್ರ ಪರಿಷ್ಕರಣೆ 2026 (SIR) ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಅರ್ಹ ಮತದಾರರು ಹಿಂದುಳಿಯದಂತೆ ನೋಡಿಕೊಳ್ಳುವುದು ನಮ್ಮ

ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ Read More »

ಕರಾವಳಿ

ತ್ಯಾಜ್ಯ ಎಸೆತ: ದಂಡ ಪಾವತಿಸದವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 17. ತಾಲೂಕಿನ  ಕನ್ಯಾನ ಗ್ರಾಮದ ಕಳಂಜಿಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ  ಮೂವರು ವ್ಯಕ್ತಿಗಳಿಗೆ ದಂಡ ವಿಧಿಸಿದರೂ ದಂಡ ಪಾವತಿಸದೇ ಇರುವುದರಿಂದ ಅವರ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಕನ್ಯಾನ  ಗ್ರಾಮ ಪಂಚಾಯತ್ ಪಿಡಿಒ  ದೂರು ನೀಡಿದ್ದಾರೆ.

ತ್ಯಾಜ್ಯ ಎಸೆತ: ದಂಡ ಪಾವತಿಸದವರ ವಿರುದ್ಧ ದೂರು ದಾಖಲು Read More »

ಕರಾವಳಿ

ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್ಡಿಪಿಐ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 17. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ನಡೆದ ಅಮಾನುಷ ಹಲ್ಲೆ ಹಾಗೂ ಹತ್ಯೆ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಯುವತಿಯ ಜೀವವನ್ನು ಬಲಿ ಪಡೆದಿರುವ ಈ ಘಟನೆ ಸಮಾಜದ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿಯಾದ ಅಕ್ಬರ್ ಅಲಿ ಪೊನ್ನೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್ಡಿಪಿಐ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಐಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 15 ರ ವರೆಗೆ  17,91,980 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 5,41,529 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-66685, ಮೂಡಬಿದ್ರೆ-59167, ಮಂಗಳೂರು ನಗರ ಉತ್ತರ-58682, ಮಂಗಳೂರು ನಗರ ದಕ್ಷಿಣ-67721, ಮಂಗಳೂರು-86607, ಬಂಟ್ವಾಳ-63770, ಪುತ್ತೂರು-59684, ಸುಳ್ಯ-79213.

ಎಸ್ಐಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಸಿಎಸ್ಐಆರ್ ಯುಜಿಸಿ ನೆಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಜುಲೈ 17 ಮತ್ತು 18ರ ವರೆಗೆ ಮಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಸಿ.ಎಸ್.ಐ.ಆರ್ ಯುಜಿಸಿ ನೆಟ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ, ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ

ಸಿಎಸ್ಐಆರ್ ಯುಜಿಸಿ ನೆಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ
Scroll to Top