ಕರಾವಳಿ

crime, arrest, suspected

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.23. ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಕಳ್ಳಬಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ನಡೆದಿದೆ. ದಾಳಿಯ ವೇಳೆ ಪ್ರವೀಣ್ ರೋಡ್ರಿಗಸ್ ಎಂಬಾತ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್‍ ಕ್ಯಾನ್ ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್ ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ […]

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾತಿಗಣತಿ ವರದಿಯನ್ನು ಜನರ ಮುಂದುಡುವ ಅಗತ್ಯವಿದೆ: ಡಾ. ಜಿ. ಪರಮೇಶ್ವರ್

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು. ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಈ ವರ್ಷದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲಾಗಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ವರದಿಯ ಬಗ್ಗೆ ಚರ್ಚಿಸಬೇಕು, ಅದರಲ್ಲಿ ಏನಿದೆ ಎಂಬುದು ಜನರಿಗೆ ತಿಳಿಯಬೇಕಾಗಿದೆ. ಇದಕ್ಕಾಗಿ ಸರ್ಕಾರ 160 ಕೋಟಿ

ಜಾತಿಗಣತಿ ವರದಿಯನ್ನು ಜನರ ಮುಂದುಡುವ ಅಗತ್ಯವಿದೆ: ಡಾ. ಜಿ. ಪರಮೇಶ್ವರ್ Read More »

ಕರಾವಳಿ

ಹಳೆಯ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಅ.23. ವಾರೀಸುದಾರರಿಲ್ಲದ ಮತ್ತು ವಾರೀಸುದಾರರ ಸ್ವೀಕರಿಸಲು ನಿರಾಕರಿಸಿದ 5 ಹಳೆಯ ದ್ವಿಚಕ್ರ ವಾಹನಗಳನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವಠಾರದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10ಗಂಟೆಗೆ ಬಹಿರಂಗ ಹರಾಜು ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರ (ದೂರವಾಣಿ ಸಂಖ್ಯೆ 0824-2220518) ಪೊಲೀಸ್ ನಿರೀಕ್ಷಕರು ಮಂಗಳೂರು ದಕ್ಷಿಣ ಠಾಣೆ (ಮೊಬೈಲ್ ಸಂಖ್ಯೆ 9480805339) ಸಂಪರ್ಕಿಸುವಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪ್ರಕಟಣೆ ತಿಳಿಸಿದೆ.

ಹಳೆಯ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು Read More »

ಕರಾವಳಿ

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ನಗರದ ಹಲವೆಡೆ ಹೆಲ್ಮೆಟ್‌ ಕಳವು ಮಾಡಲಾಗುತ್ತಿದ್ದು, ಓರ್ವ ಹೆಲ್ಮೆಟ್‌ ಕಳ್ಳನ ಕೈ ಚಳಕದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ನಗರದ ವಾಣಿಜ್ಯ ಕಟ್ಟಡವೊಂದರ ಸಮೀಪ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೊಸ ಹೆಲ್ಮೆಟನ್ನು ಕಳ್ಳ ಕಳವು ಮಾಡಿದ್ದು, ಆತನ ಬಳಿ ಇದ್ದ ಹಳೆಯ ಹೆಲ್ಮೆಟನ್ನು ಬೈಕ್‌ನ ಮೇಲಿಟ್ಟು ಹೋಗಿದ್ದಾನೆ. ಬಳಿಕ ತಾನು ಬಂದಿದ್ದ ಸ್ಕೂಟರ್‌ನಲ್ಲಿ ಮರಳಿದ್ದಾನೆ. ಈತ ಇದೇ ರೀತಿ ಹಲವೆಡೆ ಹೆಲ್ಮೆಟ್‌ ಕದ್ದಿರುವ ಶಂಕೆ ವ್ಯಕ್ತವಾಗಿದೆ.  

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಯುಷ್ ಆಸ್ಪತ್ರೆ: ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಮೂಲವ್ಯಾಧಿ, Piles, Fistula and Fissure ಇನ್ನಿತರ ಗುದಗತ ರೋಗಗಳಿಂದ ಬಳಲುತ್ತಿರುವಂತಹ ರೋಗಿಗಳ ಉಪಯೋಗಕ್ಕಾಗಿ ಆಯುರ್ವೇದದ ಯಶಸ್ವಿ ಶಸ್ತ್ರಚಿಕಿತ್ಸಾ ವಿಧಾನವಾದ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನವನ್ನು ಜಿಲ್ಲೆಯ ಹೆಸರಾಂತ ಆಯುರ್ವೇದ ಶಸ್ತ್ರಚಿಕಿತ್ಸಕ ಡಾ.ರವಿಶಂಕರ್ ಪೆರುವಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್, ಬಡರೋಗಿಗಳಿಗೆ ಆಯುರ್ವೇದ ಚಿಕಿತ್ಸೆಗಳ ಉಪಯೋಗವನ್ನು ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು

ಆಯುಷ್ ಆಸ್ಪತ್ರೆ: ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ ಉದ್ಘಾಟನೆ Read More »

ಕರಾವಳಿ

ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ- ಜಿ.ಪಂ ಸಿಇಓ ಡಾ. ಆನಂದ್ ಕೆ

(ನ್ಯೂಸ್ ಕಡಬ) newskadaba.com ಅ.23.  ರಾಜ್ಯ ವಿಪತ್ತು ತಗ್ಗಿಸುವಿಕೆ ಅನುದಾನದಿಂದ ಜಿಲ್ಲೆಯಲ್ಲಿ ಪದೇ ಪದೇ ಸಂಭವಿಸುವ ಪ್ರಾಕೃತಿಕ ವಿಕೋಪ ಅನಾಹುತಗಳನ್ನು ಗುರುತಿಸಿ ಅವುಗಳ ಅಪಾಯ ತಗ್ಗಿಸಲು ಅಗತ್ಯ ಯೋಜನೆಗಳನ್ನು ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಿಟಿಗೇಶನ್ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಹಾಗೂ ಕಡಲತೀರದ ನಿರ್ವಹಣಾ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ- ಜಿ.ಪಂ ಸಿಇಓ ಡಾ. ಆನಂದ್ ಕೆ Read More »

ಕರಾವಳಿ

ಅ. 31 ರಂದು ದೀಪಾವಳಿಯ ಪ್ರಯುಕ್ತ ಸದಾ ಸಿದ್ದಿ ಬಳಗದ ಆಶಯದಲ್ಲಿ ಸಾಂಸ್ಕೃತಿಕ ಸಂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ದೀಪಾವಳಿ ಹಬ್ಬದ ಪ್ರಯುಕ್ತ ಸದಾ ಸಿದ್ದಿ ಮಿತ್ರ ಬಳಗದ ಅಶಯದಲ್ಲಿ ಅ. 31 ರಂದು ಸಂಜೆ 9 ಕ್ಕೆ ಕಡಬ ತಾಲೂಕಿನ ಬಳ್ಪ ಗ್ರಾಮದ ಬೀದಿಗುಡ್ಡೆ ವಥಾರದಲ್ಲಿ  21ನೇ ಸದಾ ಸಿದ್ದಿ ಸಾಂಸ್ಕೃತಿಕ ಸಂಜೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಶಾಲಾ ಮಕ್ಕಳಿಂದ ವೈವಿಧ್ಯಮಯ ನೃತ್ಯಗಳು ನಡೆಯಲಿದೆ. ರಾತ್ರಿ 9ಕ್ಕೆ ‘ಕುಸಾಲ್ದ ಗುರಿಕಾರೆ ‘ ದಿನೇಶ್‌ ಕೊಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹ್ಯಾಸಕಲಾವಿದರ ಸಮಾಗಮದೊಂದಿಗೆ ‘ಯಕ್ಷ ತೆಲಿಕೆ’ ಮನರಂಜಿಸಲಿದೆ.  

ಅ. 31 ರಂದು ದೀಪಾವಳಿಯ ಪ್ರಯುಕ್ತ ಸದಾ ಸಿದ್ದಿ ಬಳಗದ ಆಶಯದಲ್ಲಿ ಸಾಂಸ್ಕೃತಿಕ ಸಂಜೆ Read More »

ಕರಾವಳಿ

ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಅ.23.  ಬಾಯಿ ಎನ್ನುವುದು ನಮ್ಮ ದೇಹದ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಕೇಂದ್ರವಾಗಿರುತ್ತದೆ. ಹಲ್ಲು ನೋವಿನ ಹೊರತಾದ ಹತ್ತಾರು ರೋಗಗಳು ಪ್ರಕಟಗೊಳ್ಳುತ್ತದೆ. ರಕ್ತಹೀನತೆ, ವಿಟಮಿನ್ ಕೊರತೆ, ಲಿವರ್ ಸಮಸ್ಯೆ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹಿಡಿದು ರಕ್ತದ ಕ್ಯಾನ್ಸರ್ ವರೆಗಿನ ಎಲ್ಲ ಮಾಹಿತಿಗಳು ಆರಂಭಿಕ ಹಂತದಲ್ಲಿಯೇ ಬಾಯಿಯಲ್ಲಿ ಕಂಡು ಬರುತ್ತದೆ. ದಂತ ವೈದ್ಯರು ಇದನ್ನು ಗುರುತಿಸಿ ತಿಳಿಹೇಳಿ ರೋಗಿಯನ್ನು ಜಾಗೃತಿಗೊಳಿಸುವ ಬಹುದೊಡ್ಡ ಜವಾಬ್ದಾರಿ ಹೊಂದಿರುತ್ತದೆ. ಈ ಸಾಮಾಜಿಕ  ಹೊಣೆಗಾರಿಕೆಯನ್ನು ಅರಿತು ನಿಭಾಯಿಸಿದಲ್ಲಿ ಸುಂದರ ಸಮೃದ್ಧ, ಸುದೃಢ

ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ- ಡಾ. ಚೂಂತಾರು Read More »

ಕರಾವಳಿ

ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..!

(ನ್ಯೂಸ್ ಕಡಬ) newskadaba.com ಅ.23. ಕಾಡಾನೆಗಳ ಹಿಂಡೊಂದು ಕೃಷಿ ಭೂಮಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ ಕಾಡಾನೆಗಳು ಕೋಡಿ ಶೀನಪ್ಪ ಗೌಡ ಎಂಬವರ ಬಾಳೆ ಗಿಡ ಮತ್ತು ಗದ್ದೆಗಳಿಗೆ ದಾಳಿ ನಡೆಸಿ ಹಾನಿ ಉಂಟು ಮಾಡಿವೆ. ಹಿಂಡಿನಲ್ಲಿ ಎರಡಕ್ಕಿಂತ ಅಧಿಕ ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು, ಸೋಮವಾರ ರಾತ್ರಿ ಸಮೀಪದ

ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಅ.22. ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಕ್ಲಸ್ಟರ್ ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರಗಿದ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಸುಬ್ರಹ್ಮಣ್ಯ ಇದರ ಕಾರ್ಯದರ್ಶಿಗಳಾದ ಶ್ರೀಕೃಷ್ಣ ಶರ್ಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top