ಕರಾವಳಿ

ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ

(ನ್ಯೂಸ್ ಕಡಬ) newskadaba.com ಅ. 21. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ಎಂಎಲ್‌ಸಿ ಸ್ಥಾನಕ್ಕೆ ಸ್ಪೀಕರ್ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಮತದಾನ ಮಾಡಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಅವರು ಉಳ್ಳಾಲ ನಗರಸಭೆಯಲ್ಲಿ ಮತದಾನ ಮಾಡಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಸಂಸದ ಬ್ರಿಜೇಶ್, ಶಾಸಕ ಭರತ್ ಶೆಟ್ಟಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಮತ ಚಲಾಯಿಸಿದ್ದಾರೆ. ಇನ್ನು ವಿಧಾನ ಪರಿಷತ್ […]

ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ Read More »

ಕರಾವಳಿ, ಕರ್ನಾಟಕ
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಅ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ-ನಗದು ಕದ್ದೊಯ್ದ ಘಟನೆ ಸುಬ್ರಹ್ಮಣ್ಯ ವ್ಯಾಪ್ತಿಯ ಬಳ್ಪ ಗ್ರಾಮದಲ್ಲಿ ನಡೆದಿದೆ. ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ಹೋಗಿ ನೋಡಿದಾಗ

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ. 21. ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿ ವಾಟ್ಸ್‌ ಆ್ಯಪ್‌ ನಲ್ಲಿ ಮೆಸೇಜ್ ಮಾಡಿದ್ದಕ್ಕಾಗಿ ಮೆಡಿಕಲ್ ಮಾಲೀಕನಿಗೆ ತಂಡವೊಂದು ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ದೇರಳಕಟ್ಟೆಯಲ್ಲಿ ರವಿವಾರ ನಡೆದಿರುವುದು ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದವರನ್ನು ದೇರಳಕಟ್ಟೆಯ ಮೆಡಿಕಲ್ ಶಾಪ್‌ ಮಾಲಕ ಅಬ್ದುಲ್ ಜಲೀಲ್ ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಯುವಕನೊಬ್ಬ ಇತ್ತೀಚೆಗೆ ಮಂಗಳೂರಿನ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೈದಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ಅಬ್ದುಲ್ ಜಲೀಲ್ ವಾಟ್ಸ್‌ ಆ್ಯಪ್ ಮೂಲಕ ವೈಯಕ್ತಿಕವಾಗಿ

ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಎಸ್ಎಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ ಪ್ರೌಢ ಸಮಾಪ್ತಿ- ಸತತ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ ಪಾಟ್ರಕೋಡಿ ಯುನಿಟ್..!

(ನ್ಯೂಸ್ ಕಡಬ) newskadaba.com ಅ.21. ಕರ್ನಾಟಕ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ -2024 ಕಾರ್ಯಕ್ರಮವು ಸೂರಿಕುಮೇರು ಆಟದ ಮೈದಾನದಲ್ಲಿ ಭಾನುವಾರದಂದು ಅದ್ದೂರಿಯಾಗಿ ನಡೆಯಿತು. ಪಾಟ್ರಕೋಡಿ ಯುನಿಟ್ ಅತ್ಯಧಿಕ ಅಂಕಗಳೊಂದಗೆ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟ ಅಲಂಕರಿಸಿತು. ದ್ವಿತೀಯ ಸ್ಥಾನವನ್ನು ಸೂರಿಕುಮೇರು ಯುನಿಟ್ ಪಡೆಯಿತು. ದಾರುಲ್ ಇರ್ಶಾದ್ ಶಿಲ್ಪಿ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದರು ಧ್ವಜಾರೋಹಣ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಅಧ್ಯಕ್ಷರಾದ ಕೆ.ಪಿ.ಸಾಬಿತ್ ಪಾಟ್ರಕೋಡಿರವರ

ಎಸ್ಎಸ್ಎಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ ಪ್ರೌಢ ಸಮಾಪ್ತಿ- ಸತತ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ ಪಾಟ್ರಕೋಡಿ ಯುನಿಟ್..! Read More »

ಕರಾವಳಿ

ವಾಣಿಜ್ಯ ಸಂಕೀರ್ಣ, ಅಪಾರ್ಟ್ ಮೆಂಟ್‍ ಗಳಿಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

(ನ್ಯೂಸ್ ಕಡಬ) newskadaba.com ಅ. 21. ಕೈಗಾರಿಕೆಗಳು, ಉದ್ದಿಮೆಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಕ್ಲಿನಿಕ್‍ ಗಳು, ಮಿಲ್‍ಗಳು, ವಾಣಿಜ್ಯ ಸಂಕಿರ್ಣಗಳು, ವಸತಿ ಸಮುಚ್ಚಯಗಳು (ಅಪಾರ್ಟ್‍ಮೆಂಟ್‍ಗಳು), ಸಮುದಾಯ ಭವನಗಳು, ಕಲ್ಯಾಣ ಮಂಟಪಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆದು ನವೀಕರಣಗೊಳಿಸದೇ ಹಾಗೂ ಪಡೆಯದೆ ಕಾರ್ಯನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಪತ್ರ ಪಡೆದು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ

ವಾಣಿಜ್ಯ ಸಂಕೀರ್ಣ, ಅಪಾರ್ಟ್ ಮೆಂಟ್‍ ಗಳಿಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ Read More »

ಕರಾವಳಿ

ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ಪದುವಾ ಪ್ರೌಢಶಾಲೆ ನಂತೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಕಾರ್ಯಕ್ರಮವನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಪದುವಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಉದ್ಘಾಟಿಸಲಿದ್ದು, ಪದುವಾ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ

ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ Read More »

ಕರಾವಳಿ

ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ. 21. ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್.ಜಿ ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನವೆಂಬರ್ 1ರಂದು ನೆಹರೂ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಎಲ್ಲ ಇಲಾಖೆಗಳು

ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಅ. 21. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಈಗಾಗಲೇ ಆಯಾ ಗ್ರಾಮ ಪಂಚಾಯತ್‍ ಗಳಲ್ಲಿ ಹಾಗೂ ನಗರ ಸ್ಥಳೀಯ

ವಿಧಾನ ಪರಿಷತ್ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ

ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಬಯಲು- ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಅ. 21. ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮುಡಾ ಭೂಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹಲವೆಡೆ ಇಡಿ ನಡೆಸಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ಈ ಮುಡಾ ನಿವೇಶನ ಹಂಚಿಕೆ ಭೂಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯ ಸರ್ಕಾರದ ಅಧೀನದಲ್ಲಿರುವ ಯಾವುದೇ ತನಿಖಾ ಸಂಸ್ಥೆಯು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ.ಈ ಮೂಲಕ ತನ್ನ ಉತ್ತರದಾಯಿತ್ವವನ್ನು ಮರೆಮಾಚಿ

ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಬಯಲು- ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ, ಕರ್ನಾಟಕ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಮಂಗಳೂರಿನ ಏರ್ ಇಂಡಿಯಾ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top