ಕರಾವಳಿ

ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಅ.19, ಉಡುಪಿ: ಸೀಟಿನ ಕೆಳಗೆ ಶೇಖರಣೆಯಲ್ಲಿದ್ದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಕೂಟರ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಚಿಟ್ಪಾಡಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಸ್ಕೂಟರ್ ಸವಾರ ಪೆಟ್ರೋಲ್ ಪಂಪ್‌ನಿಂದ ಬಾಟಲಿಯಲ್ಲಿ ಪೆಟ್ರೋಲ್ ಖರೀದಿಸಿ ವಾಹನದ ಸೀಟಿನ ಕೆಳಗೆ ಸಂಗ್ರಹಿಸಿದ್ದರು. ಬಳಿಕ ಅವರು ಸ್ಕೂಟರ್ ಅನ್ನು ಕಿಕ್-ಸ್ಟಾರ್ಟ್ ಮಾಡಲು ಪ್ರಯತ್ನಿಸಿದ್ದು, ಇಂಜಿನ್‌ನಿಂದ ಸೋರಿಕೆಯಾದ ಕಿಡಿಯು ಸೀಟ್ ಕೆಳಗೆ ಸೋರಿಕೆಯಾಗಿದ್ದ ಪೆಟ್ರೋಲ್‌ಗೆ ತಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ಬೆಂಕಿಗೆ […]

ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ Read More »

ಕರಾವಳಿ

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ.18,: ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ಸೋನಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈತನು ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಭುಜದ ಮೇಲೆ ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಹೋಗುತ್ತಿದ್ದನು. ಈ ವೇಳೆ ಪೊಲೀಸ್ ಜೀಪ್ ನೋಡಿ ಪರಾರಿಯಾಗಲು ಯತ್ನಿಸಿದ್ದಾನೆ.

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನ; ಆರೋಪಿ ಅರೆಸ್ಟ್ Read More »

ಕರಾವಳಿ

ನಿದ್ದೆಯ ಕನಸಲ್ಲಿ ಇಬ್ಬರು ಮಾತಾಡ್ಬೋದು; ವಿಜ್ಞಾನಿಗಳ ಹೊಸ ಸಂಶೋದನೆ

(ನ್ಯೂಸ್ ಕಡಬ) newskadaba.com ಅ.18,: ಕನಸು ಕಾಣುತ್ತಿರುವಾಗ ಯಾರೊಂದಿಗಾದರೂ ಸಂವಹನ ನಡೆಸಬಹುದು ಎನ್ನುವ ಕುತೂಹಲದ ವಿಷಯವನ್ನು ಸಂಶೋಧನೆ ಮೂಲಕ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಕ್ಯಾಲಿಫೋರ್ನಿಯಾದ ವಿಜ್ಞಾನಿಗಳು ಇಂಥ ಒಂದು ಕುತೂಹಲದ ಸಂಶೋಧನೆ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳು ಗಾಢ ನಿದ್ದೆಯಲ್ಲಿ ಇರುವಾಗ ಸ್ಪಷ್ಟವಾದ ಕನಸಿನ ಮೂಲಕ ಮತ್ತೊಬ್ಬ ವ್ಯಕ್ತಿಯ ಜೊತೆ ಸಂವಹನ ನಡೆಸಬಹುದು. ಇಬ್ಬರ ನಡುವೆ  ದ್ವಿಮುಖ ಸಂವಹನವನ್ನು ಸಾಧಿಸಲಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ. ಇದು ವಿಶ್ವದಲ್ಲೇ ಮೊದಲ ಬಾರಿ ನಡೆದ ಸಂವಹನ ಎಂದು ಅವರು ಹೇಳಿದ್ದಾರೆ. ಇದಕ್ಕಾಗಿ ಇಬ್ಬರು ವ್ಯಕ್ತಿಗಳ

ನಿದ್ದೆಯ ಕನಸಲ್ಲಿ ಇಬ್ಬರು ಮಾತಾಡ್ಬೋದು; ವಿಜ್ಞಾನಿಗಳ ಹೊಸ ಸಂಶೋದನೆ Read More »

ಕರಾವಳಿ
crime, arrest, suspected

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಲಂ 8 20(ಬಿ) (6), ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.  

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ಬೆಂಗಳೂರಿನಲ್ಲಿ ಕರ್ನಾಟಕ vs ಕೇರಳ ರಣಜಿ ಫೈಟ್

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಈ ಬಾರಿ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ‌ ಮೊದಲ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿರುವ ಕರ್ನಾಟಕ ತಂಡ ಶುಕ್ರವಾರದಿಂದ ಕೇರಳ ವಿರುದ್ಧ ಕಣಕ್ಕಿಳಿಯಲಿದೆ. ಪಂದ್ಯಕ್ಕೆ ನಗರದ ಹೊರವಲಯದ ಆಲೂರು ಕೆ‌ಎಸ್‌ಸಿಎ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮಳೆಯಿಂದ ಮೈದಾನ ಕೊಂಚ ಒದ್ದೆಯಾಗಿರುವುದರಿಂದ ಟಾಸ್ ಕೊಂಚ ತಡವಾಗಲಿದೆ. ಕಳೆದ ವಾರ ಇಂದೋರ್‌ನಲ್ಲಿ ನಡೆದಿದ್ದ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಅಗರ್‌ವಾಲ್ ನಾಯಕತ್ವದ ಕರ್ನಾಟಕ ಡ್ರಾಗೆ ತೃಪ್ತಿಪಟ್ಟುಕೊಂಡಿತ್ತು. ಮಳೆಯಿಂದಾಗಿ ಇತ್ತಂಡಗಳ ಮೊದಲ ಇನ್ನಿಂಗ್ಸ್ ಕೂಡ ಮುಗಿದಿರಲಿಲ್ಲ.

ಇಂದಿನಿಂದ ಬೆಂಗಳೂರಿನಲ್ಲಿ ಕರ್ನಾಟಕ vs ಕೇರಳ ರಣಜಿ ಫೈಟ್ Read More »

ಕರಾವಳಿ

ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರು ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಅ.18. ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ ಮೇಲೆ ಮೂವರು ಹೋಗುತ್ತಿದ್ದ ವೇಳೆ ರೋಪ್ ತುಂಡಾಗಿದೆ. ಮೂವರನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.  

ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರು ಗಾಯ Read More »

ಕರಾವಳಿ

ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 87 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,240 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,898 ರೂ. ಇದೆ.   22 ಕ್ಯಾರಟ್‌ ಚಿನ್ನದ ದರಗಳ ವಿವರ

ಚಿನ್ನದ ಬೆಲೆ ಮತ್ತೆ ಏರಿಕೆ Read More »

ಕರಾವಳಿ

ಮೂಡುಬಿದಿರೆ: ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ.18. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ 14ನೇ ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಗುರುವಾರ ಚಾಲನೆ ದೊರೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ

ಮೂಡುಬಿದಿರೆ: ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಚಾಲನೆ Read More »

ಕರಾವಳಿ

ಬೋಟ್ ದುರಂತದಲ್ಲಿ ನಾಪತ್ತೆಯಾದ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.18. ಪಡನ್ನ ಆಯಿತ್ತಲ ಸಮುದ್ರದಲ್ಲಿ ಬೋಟ್ ದುರಂತದಲ್ಲಿ ನಾಪತ್ತೆಯಾದ ಬೆಸ್ತನ ಮೃತದೇಹ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ. ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್, ಎಂ.ರಾಜ ಗೋಪಾಲ್, ಜಿಲ್ಲಾ ಪೊಲೀಸ್ ಮುಖ್ಯಸ್ಥ ಡಿ.ಶಿಲ್ಪಾ ನೇತೃತ್ವ ನೀಡಿದ್ದರು. ದುರಂತದಲ್ಲಿ ಮೃತಪಟ್ಟ ಅಬೂಬಕ್ಕರ್ ರವರ ಮೃತ ದೇಹ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು. ಬುಧವಾರ ಮಧ್ಯಾಹ್ನ ಆಯಿತ್ತಲ ಸಮುದ್ರದಲ್ಲಿ ಫೈಬರ್ ಬೋಟ್ ದುರಂತಕ್ಕೀಡಾಗಿತ್ತು. ದೋಣಿಯಲ್ಲಿದ್ದ 37 ಮಂದಿಯಲ್ಲಿ 35 ಮಂದಿಯನ್ನು ರಕ್ಷಿಸಲಾಗಿತ್ತು. ಓರ್ವ

ಬೋಟ್ ದುರಂತದಲ್ಲಿ ನಾಪತ್ತೆಯಾದ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top