ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರದಲ್ಲಿ ನೃತ್ಯ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಅ.18. ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ  ಪ್ರದರ್ಶನ ನೀಡಿ ಮೈಸೂರಿನ ಸಾಂಸ್ಕೃತಿಕ ತಂಡದ ತೀರ್ಪುಗಾರರ ಮೆಚ್ಚುಗೆ ಪಡೆದ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ , ಸಾಂಸ್ಕೃತಿಕ ತಂಡ ಯುವ ದಸರದಲ್ಲಿ ದಕ್ಷಿಣ ಕನ್ನಡ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ಈ ತಂಡ ಸಾವಿರಾರು ಪ್ರೇಕ್ಷಕರ ಗಮನ ಸೆಳೆದರು.   ಕಾಲೇಜಿನ ಪ್ರಾಂಶುಪಾಲರಾದ ಡಾ ದಿನೇಶ್ ಪಿ ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ತಂಡದ ಸಂಯೋಜಕರಾದ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರದಲ್ಲಿ ನೃತ್ಯ ಕಾರ್ಯಕ್ರಮ Read More »

ಕರಾವಳಿ

ಅಸಮರ್ಪಕ ರಸ್ತೆ ವ್ಯವಸ್ಥೆ; ವೃದ್ದರನ್ನು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದ ಯುವಕರು

(ನ್ಯೂಸ್ ಕಡಬ) newskadaba.com ಅ.17. ಸಮರ್ಪಕ ರಸ್ತೆ ಸಂಪರ್ಕವಿಲ್ಲದೇ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಯುವಕರು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದಿರುವ ಘಟನೆ ತಾಲೂಕಿನ ಗುತ್ತಿಗಾರು ಮಡಪ್ಪಾಡಿ ಗ್ರಾಮದ ನಡುಬೆಟ್ಟು ಎಂಬಲ್ಲಿ ನಡೆದಿದೆ.   ಸುಳ್ಯ ತಾಲೂಕಿನ ನಡುಬೆಟ್ಟು ಭಾಗದಲ್ಲಿ ಸುಮಾರು 14 ಮನೆಗಳಿದ್ದು, ಈ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಯಾವುದೇ ವಾಹನಗಳ ಚಾಲಕರು ಈ ಭಾಗದ ಮನೆಗಳಿಗೆ ಬರಲು ನಿರಾಕರಿಸುತ್ತಾರೆ ಎನ್ನಲಾಗಿದೆ. ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು,

ಅಸಮರ್ಪಕ ರಸ್ತೆ ವ್ಯವಸ್ಥೆ; ವೃದ್ದರನ್ನು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದ ಯುವಕರು Read More »

ಕರಾವಳಿ

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 17. ರೆಂಜಾಳ ನಾಯಕ ಮನೆತನದ ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್(76) ಅವರು ಅಕ್ಟೋಬರ್ 16 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಆಸ್ಪತ್ರೆಯ ಕೊರತೆಯಿದ್ದ ಸಮಯದಲ್ಲಿ, ಅವರು ಹಿಂದುಳಿದವರಿಗೆ, ವಿಶೇಷವಾಗಿ ಕಾಮಾಲೆ ಮತ್ತು ಹಾವು ಕಡಿತದಂತಹ ಕಾಯಿಲೆಗಳಿಗೆ ಉಚಿತ ಗಿಡಮೂಲಿಕೆ ಪರಿಹಾರಗಳನ್ನು ಒದಗಿಸಿದರು. ತಮ್ಮ ನೆರೆಹೊರೆಯವರ ಕಲ್ಯಾಣಕ್ಕಾಗಿ ಅವರು ಶ್ರಮಿಸಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಶೈಕ್ಷಣಿಕ ಸೌಲಭ್ಯಗಳ ಕೊರತೆಯನ್ನು ಅರಿತು ಸರ್ಕಾರಿ ಅಂಗನವಾಡಿ ನಿರ್ಮಿಸಲು

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ. 17. ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಶಂಕರ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ವಾರ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲೆ ಮಾಡುವ ಉದ್ದೇಶದಿಂದ ಈ ಕೃತ್ಯ

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಿಶು ಅಭಿವೃದ್ಧಿ ಯೋಜನೆ ಕಚೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಅ. 17. ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಕಚೇರಿಯು ನಗರದ ಉರ್ವ ಮಾರ್ಕೆಟ್ ಕಟ್ಟಡದ 3ನೇ ಮಹಡಿಗೆ ಸ್ಥಳಾಂತರಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಶು ಅಭಿವೃದ್ಧಿ ಯೋಜನೆ ಕಚೇರಿ ಸ್ಥಳಾಂತರ Read More »

ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಅ. 17. ಎರಡು ವಾರಗಳ ಹಿಂದೆಯಷ್ಟೇ ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳಿದ್ದ ಯುವಕನೊಬ್ಬನ ಮೃತದೇಹ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ತೂಮಿನಾಡು ಕುಚ್ಚಿಕ್ಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಕೆ.ಎಚ್. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಅನ್ಸಾರ್ (32) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 11 ರ ಸುಮಾರಿಗೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮುಹಮ್ಮದ್ ಅನ್ಸಾರ್ ಪತ್ತೆಯಾಗಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವವನ್ನು ರಕ್ಷಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಬಂಟ್ರ ಶಾಲಾ ಶಿಕ್ಷಕ ರಾಮಕೃಷ್ಣ ಮಲ್ಲಾರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ, ಶಾಲೆಗೆ ಮಸಿ ಬಳಿಯುವ ಕೆಲಸ- ಶಾಲಾಭಿವೃದ್ದಿ ಸಮಿತಿ ಆರೋಪ

(ನ್ಯೂಸ್ ಕಡಬ) newskadaba.com ಅ.17. ಕಡಬ ತಾಲೂಕಿನ ಬಂಟ್ರ-ಮರ್ದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾಮಾಣಿಕ ಶಿಕ್ಷಕರೋರ್ವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಿ ಶಾಲೆಗೆ ಮಸಿಬಳಿಯುವ ಕೆಲಸವಾಗುತ್ತಿದೆ ಎಂದು ಶಾಲಾ ಎಸ್‌ಡಿಎಂಸಿ ಹಾಗೂ ಹಿರಿಯ ವಿದ್ಯಾರ್ಥಿಗಳು ಹೇಳಿದ್ದಾರೆ. ಈ ಕುರಿತು ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್ ಕೇನ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಲಾ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಮ್ಮ ಶಾಲಾ ಹೆಮ್ಮೆಯ ಶಿಕ್ಷಕ ರಾಮಕೃಷ್ಣ ಮಲ್ಲಾರ ಅವರ ವಿರುದ್ದ ಮೊಹಿದ್ದೀನ್ ಕುಟ್ಟಿ ಹಾಗೂ ಸಾಜಸ್ ಎಂಬವರು ಇಲ್ಲ ಸಲ್ಲದ ಆರೋಪಗಳನ್ನು ಮಾಡಿ

ಕಡಬ: ಬಂಟ್ರ ಶಾಲಾ ಶಿಕ್ಷಕ ರಾಮಕೃಷ್ಣ ಮಲ್ಲಾರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ, ಶಾಲೆಗೆ ಮಸಿ ಬಳಿಯುವ ಕೆಲಸ- ಶಾಲಾಭಿವೃದ್ದಿ ಸಮಿತಿ ಆರೋಪ Read More »

ಕರಾವಳಿ

ಅ.20ರಂದು ಸೂರಿಕುಮೇರು ಮೈದಾನದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ- ನೂರಾರು ಪ್ರತಿಭೆಗಳ ಕಲರವ

(ನ್ಯೂಸ್ ಕಡಬ) newskadaba.com ಮಾಣಿ, ಅ. 17. ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ “ನಿರೀಕ್ಷೆಗಳ ನೀಲ ನಕ್ಷೆ” ಎಂಬ ಸ್ಲೋಗನ್ ನೊಂದಿಗೆ ಸಾಹಿತ್ಯೋತ್ಸವ ಕಾರ್ಯಕ್ರಮವು ಅಕ್ಟೋಬರ್ 20ರಂದು ಭಾನುವಾರ ಸೂರಿಕುಮೇರು ಮಸೀದಿ ಬಳಿಯ ಆಟದ ಮೈದಾನದಲ್ಲಿ ನಡೆಯಲಿದೆ. ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ದುಆ ನಡೆಸಿಕೊಡುವರು. ಬಂಡಾಡಿ ಮುಹಮ್ಮದ್ ಹಾಜಿ ಸೂರಿಕುಮೇರು, ಧ್ವಜಾರೋಹಣಗೈಯಲಿರುವರು. ಪತ್ರಕರ್ತ ಅಬ್ದುಲ್ ಲತೀಫ್ ನೇರಳಕಟ್ಟೆ ಸಹಿತ ಆರು ಯುನಿಟ್ ವ್ಯಾಪ್ತಿಯ ಎಲ್ಲಾ

ಅ.20ರಂದು ಸೂರಿಕುಮೇರು ಮೈದಾನದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ- ನೂರಾರು ಪ್ರತಿಭೆಗಳ ಕಲರವ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 17. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ಕೋರ್ಸ್ ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ 1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಆಯೋಜನೆಯಲ್ಲಿ ‘ರೋಟರಿ ಕಂಬಳ’

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 17. ತುಳುನಾಡಿನ ಜನಪದ ಕ್ರೀಡೆಗಳಲ್ಲಿ ಕಂಬಳವೂ ಒಂದು, ಕರಾವಳಿಯಲ್ಲಿ ಪ್ರತೀವರ್ಷ ವಿವಿಧ ಕಂಬಳಸಮಿತಿಗಳು ಕಂಬಳ ವನ್ನು ಆಯೋಜಿಸುತ್ತಿದ್ದು, ಕಳೆದ ವರ್ಷ ಬೆಂಗಳೂರಿನಲ್ಲಿಯೂ ಕಂಬಳ ಆಯೋಜನೆಯಾಗಿ ದೇಶದ ಗಮನ ಸೆಳೆದಿತ್ತು. ಇದೀಗ ಬಂಟ್ವಾಳ ತಾಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ತನ್ನ ಪಬ್ಲಿಕ್ ಇಮೇಜ್ ಕಾರ್ಯಕ್ರಮವಾಗಿ ಮರಿಕೋಣಗಳಿಗಾಗಿ “ರೋಟರಿ ಕಂಬಳ”ವನ್ನು ಆಯೋಜಿಸುವ ಮೂಲಕ ಗಮನ ಸೆಳೆದಿದ್ದು, ಅ.19 ರ ಶನಿವಾರದಂದು ಸಿದ್ಧಕಟ್ಟೆ ಕೊಡಂಗೆಯ ವೀರವಿಕ್ರಮ ಕಂಬಳ ಸಮಿತಿ ಪ್ರತೀವರ್ಷ ಆಯೋಜಿಸುವ ಕಂಬಳ

ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಆಯೋಜನೆಯಲ್ಲಿ ‘ರೋಟರಿ ಕಂಬಳ’ Read More »

ಕರಾವಳಿ
Scroll to Top