ಕರಾವಳಿ

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ತುಳಸಿ ಗಿಡದಲ್ಲಿ ದಾಸವಾಳ ಹೂವು ಅರಳುತ್ತಿವೆ ಎಂದರೆ ಅಚ್ಚರಿಯಾಗೋದು ಸಹಜ‌. ಆದರೆ ಇದು ನಿಜ ಎಂದು ಎಂದು ಅಜ್ಜಾವರದ ಶಾಂತಿಮಜಲಿನ ಈ ಮನೆಯವರು ಹೇಳುತ್ತಾರೆ‌. ಅಜ್ಜಾವರ ಗ್ರಾಮದ ಶಾಂತಿಮಜಲಿನ ಭವಾನಿ ಅವರ ಮನೆಯಂಗಳದ ತುಳಸಿ ಗಿಡದಲ್ಲಿ ಅರಳುತ್ತಿರುವುದು ದಾಸವಾಳ ಹೂವು. ಒಂದು ವಾರದಲ್ಲಿ 3ನೇ ಬಾರಿಗೆ ಈ ರೀತಿ ಹೂವು ಅರಳಿ ನಿಂತಿದೆ. ತುಳಸಿ ಗಿಡದಲ್ಲಿ ಇನ್ನೂ ಕೂಡ ಹೂವಿನ ಮೊಗ್ಗು ಇದ್ದು ಇನ್ನಷ್ಟು ದಾಸವಾಳ ಗಿಡಗಳು ಅರಳುವ […]

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..! Read More »

ಕರಾವಳಿ

ಪೊಳಲಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ- ಸ್ಥಳೀಯರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15.  ಪೊಳಲಿಯ (ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆಯಲ್ಲಿ ಘನವಾಹನ ಸಂಚಾರದ ಕುರಿತಂತೆ ಎರಡು ತಿಂಗಳು‌ ಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಮತ್ತು ಪರ್ಯಾಯ ರಸ್ತೆಯ ವ್ಯವಸ್ಥೆಗೆ ಮುಂದಾಗದೆ ನಿರ್ಲಕ್ಷ್ಯತನ ತೋರಿದ ಜಿಲ್ಲಾಡಳಿತದ ವಿರುದ್ದ ಜನಾಕ್ರೋಶ ವ್ಯಕ್ತವಾದ ಬೆನ್ನಲೇ ಎಚ್ಚೆತ್ತ ಜಿಲ್ಲಾಡಳಿತ ಬಂಟ್ವಾಳ ತಹಶೀಲ್ದಾರರ ನೇತೃತ್ವದ ಅಧಿಕಾರಿಗಳ ದಂಡು ಸೋಮವಾರ ಪೊಳಲಿಗೆ ರವಾನಿಸಿ ಗ್ರಾಮಸ್ಥರ ಮನವೊಲಿಸಿದ್ದು, ಕೊನೆಗೂ ಇಂದು ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ಹಿಂತೆಗೆಸುವಲ್ಲಿ ಯಶಸ್ವಿಯಾಗಿದೆ. ಬಂಟ್ವಾಳ

ಪೊಳಲಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ- ಸ್ಥಳೀಯರ ಪ್ರತಿಭಟನೆ Read More »

ಕರಾವಳಿ
Theft, crime, Robbery

ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ.15. ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಹೋಗಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶನಕ್ಕೆ ಅ.11ರಂದು ಹೋದ ವೇಳೆ ಲೀಲಾ ಎಂಬವರ ಕುತ್ತಿಗೆಯಲ್ಲಿದ್ದ 6 ಪವನ್ ತೂಕದ ಸರ ಕಳವುಗೈಯ್ಯಲಾಗಿತ್ತು. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನ್ ತೂಕದ ಚಿನ್ನದ ಸರ

ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ ದಂಪತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ತುಳುನಾಡಿನ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರ್‌ಗೆ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕರಾವಳಿಯಲ್ಲಿ ಹಲವಾರು ಪುಣ್ಯ ಕ್ಷೇತ್ರಗಳಿವೆ. ಆದರೆ ಇಲ್ಲಿಗೆ ಭೇಟಿ ನೀಡಿದಾಗ ಏನೋ ಒಂದು ನೆಮ್ಮದಿ ಸಿಗುತ್ತದೆ. ಕೊರಗಜ್ಜ ದೈವದ ಮೇಲೆ ನಂಬಿಕೆ ಇದೆ. ಜನರು ಕೂಡ ಈ ದೈವದ ಮೇಲೆ ಅಪಾರ ನಂಬಿಕೆ

ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ ದಂಪತಿ Read More »

ಕರಾವಳಿ, ಸಿನಿಮಾ

ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 15. ರಬ್ಬರ್‌ ಆ್ಯಸಿಡ್‌ ಸೇವಿಸಿ ಅಸೌಖ್ಯಕ್ಕೊಳಗಾಗಿದ್ದ ಮರ್ಕಂಜ ಗ್ರಾಮದ ಗೋಳಿಯಡ್ಕ ಶೇಷಪ್ಪ ಗೌಡ ಪಾಲ್ತಾಡು ಎಂಬವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಶೇಷಪ್ಪ ಗೌಡರು ನಾಲ್ಕು ದಿನಗಳ ಹಿಂದೆ ರಬ್ಬರ್‌ ಆ್ಯಸಿಡ್‌ ಸೇವಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಅ. 15. ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಪಚ್ಚನಾಡಿ ಸಂತೋಷ್‌ ನಗರ ಮೈದಾನದ ಬಳಿ ಪತ್ತೆಯಾಗಿದೆ. ಸ್ಥಳೀಯ ವ್ಯಕ್ತಿ ರಿತೇಶ್‌ ಎಂಬವರು ಈ ಪ್ರದೇಶದಲ್ಲಿ ಸಾಗುತ್ತಿದ್ದ ವೇಳೆ ವಾಸನೆ ಬರುತ್ತಿದ್ದುದನ್ನು ಕಂಡು ಪರಿಶೀಲಿಸಿದಾಗ ಸುಮಾರು 35–45 ವರ್ಷದೊಳಗಿನ ಅಪರಿಚಿತ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ಎರಡು ಬೈರಾಸುಗಳನ್ನು ಜೋಡಿಸಿ ಅದರಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ದೇಹದ ಭಾರದಿಂದ ಶವ ಕುಳಿತ ಸ್ಥಿತಿಯಲ್ಲಿತ್ತು. ದೇಹವು ಸಂಪೂರ್ಣವಾಗಿ

ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 15. ಮನೆ ಮಂದಿ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ನಡೆಸಿದ ಪ್ರಕರಣವು ಕಡಬ ತಾಲೂಕಿನ ಸವಣೂರು ಎಂಬಲ್ಲಿ ನಡೆದಿದೆ. ಸವಣೂರು ನಿವಾಸಿ ಸಲೀಂ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸಲೀಂ ಅವರು ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಕಳೆದ ಶುಕ್ರವಾರ ಮನೆಗೆ ಬೀಗ ಹಾಕಿ ಪ್ರವಾಸ ಹೋಗಿದ್ದರು. ಪ್ರವಾಸ ಮುಗಿಸಿಕೊಂಡು ರವಿವಾರ ಮಧ್ಯರಾತ್ರಿ ವೇಳೆ ಮನೆಗೆ ವಾಪಾಸ್ಸು

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಅ. 15. ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್‌ (55) ಎಂದು ಗುರುತಿಸಲಾಗಿದೆ. ಸುಂದರ ನಾಯ್ಕ್‌ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಅ.1 ರಂದು ಬೆಳಿಗ್ಗೆ ಮನೆಯಲ್ಲಿ ಇರುವಾಗ ನಾಳೆ ನಾನು ದಸರಾ ಹಬ್ಬದ ವೇಷ ಹಾಕಲು ಇದೆ ನಾನು ವಿಟ್ಲ

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ. 15. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯು ಬಡವರಿಗೆ ಉಪಯೋಗಕಾರಿಯಾಗಿದ್ದು ಈ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿಯನ್ನು ಮೂಡಿಸುವ ಕೆಲಸವಾಗಬೇಕು, ಜನರಿಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ತಾಲೂಕು ಸಹಾಯಕ ಆಯುಕ್ತ ಹರ್ಷವರ್ಧನ್ ತಿಳಿಸಿದ್ದಾರೆ. ಅವರು ಸೋಮವಾರ ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮವು ಹುಟ್ಟಿನಿಂದ ಮಕ್ಕಳಲ್ಲಿ ಕಂಡು ಬರುವ ನ್ಯೂನತೆ ಪತ್ತೆ ಹಚ್ಚಿ

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಅ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಅಕ್ಟೋಬರ್ 15ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಅಕ್ಟೋಬರ್ 16ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಅಕ್ಟೋಬರ್ 19ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ
Scroll to Top