ಕರಾವಳಿ

ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ

(ನ್ಯೂಸ್ ಕಡಬ) news kadaba.com ಅ. 14. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ. ಚಾಲಕ ರೂಪೇಶ್ (40) ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ […]

ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ. 14. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಆರೋಪಿ ಹಮೀದ್ ಯಾನೆ ಜಫಾರ್ ಹಮೀದ್ ಹಾನೆ ಕುಂಞಿಮೋನು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು, ಚಿಕ್ಕಮಗಳೂರು ಜಿಲ್ಲೆ, ಕೊಪ್ಪ, ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ

(ನ್ಯೂಸ್ ಕಡಬ) newskadaba.com ಅ. 12. ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಆಯುಧ ಪೂಜೆ ನೆರವೇರಿತು. ಸಂಸ್ಥೆಯ ಎಲ್ಲಾ ಶಾಲಾ ಬಸ್ ಸೇರಿದಂತೆ ಸಿಬ್ಬಂದಿ ವರ್ಗದವರ ವಾಹನಗಳಿಗೆ ಆಯುಧ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಸಿ ನಾೈಕ್, ಆಡಳಿತ ಮಂಡಳಿ ಟ್ರಸ್ಟಿ ಶ್ರೀಮತಿ ಸಗುಣ ಸಿ. ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ

(ನ್ಯೂಸ್ ಕಡಬ) newskadaba.com ಅ. 12. ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ ಹಾಗೂ ದುರ್ಗಾಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಮತ್ತು ಶ್ರೀದೇವಿ ಭಕ್ತವೃಂದ ಬೊಂದೇಲ್ ಇವರಿಂದ  ಭಜನಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಮುರಲೀ ಮೋಹನ್ ಚೂಂತಾರು, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಎ. ಹಾಗೂ  ಗೃಹರಕ್ಷಕರಾದ ಸುನೀಲ್ ಪಿ, ಸುನೀಲ್ ಪೂಜಾರಿ, ದಿವಾಕರ್, ರಾಜೇಶ್ ಗಟ್ಟಿ, ಚಂದ್ರಶೇಖರ್, ಸಂಜಯ್ ಶೆಣೈ, ಜ್ಞಾನೇಶ್, ಆಶಾಲತಾ, ಮರಿಯಾ ಡಿ’ಸೋಜ, ಸುಲೋಚನ,

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ Read More »

ಕರಾವಳಿ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಇವರಿಬ್ಬರು ರಜೆಯ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ್, ಮೋಹನ್, ಶಿವಪ್ರಸಾದ್ ಅಂಬಿಗ ಎನ್ನುವವರು ಯುವಕರನ್ನು ರಕ್ಷಿಸಿದ್ದಾರೆ.  ಇನ್ನು ರಕ್ಷಿಸಲ್ಪಟ್ಟ ಇನ್ನೊರ್ವ ಪ್ರವಾಸಿಗ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ Read More »

ಕರಾವಳಿ

ಗಾಂಧಿ ಜಯಂತಿ: ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ. 12. ಕಡಬ ಪಟ್ಟಣ ಪಂಚಾಯತ್, ದ.ಕ. ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಕಡಬ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಗಾಂಧೀಜಿ ಹಾಗೂ ಲಾಲ್‍ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಮತ್ತು ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ ಇ. ಕಡಬ ಶ್ರೀ ಗಣೇಶ್ ಬಿಲ್ಡಿಂಗ್ ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ,  ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭ

ಗಾಂಧಿ ಜಯಂತಿ: ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಕೈ ಕಳೆದುಕೊಂಡು ಅಸಾಯಕನಾಗಿರುವ ರವಿಚಂದ್ರ ಸಹಾಯಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಅ. 12. ಸೆಂಟ್ರಿಂಗ್ ಮಿಲ್ಲರ್ ಆಪರೇಟರ್ ಆಗಿ  ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೋರ್ವ ಯಂತ್ರಕ್ಕೆ ಕೈಸಿಲುಕಿ  ಬಲದ  ಕೈಕಳೆದುಕೊಂಡು ಕೂಲಿ ಕೆಲಸ ಮಾಡಲು ಸಾಧ್ಯವಾಗದೆ ಕಂಗಾಲಾಗಿದ್ದು, ಅಸಾಯಕರಾಗಿ ಸಾರ್ವಜನಿಕರಿಂದ ಧನ ಸಹಾಯದ ನಿರೀಕ್ಷೆಯಲಿದ್ದಾರೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ  ಕಲ್ಲೇರಿಯ ನಿವಾಸಿ ಓಮರಾ ಎಂಬವರ ಪುತ್ರ ರವಿಚಂದ್ರ ಈಗ ಸಾರ್ವಜನಿಕರ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಇವರು ಕೂಲಿ ಕಾರ್ಮಿಕನಾಗಿ ಸೆಂಟ್ರಿಂಗ್ ಕೆಲಸದಲ್ಲಿ ಮಿಲ್ಲರ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಮೇ 17ನೇ 2024 ರಂದು

ಕೈ ಕಳೆದುಕೊಂಡು ಅಸಾಯಕನಾಗಿರುವ ರವಿಚಂದ್ರ ಸಹಾಯಕ್ಕೆ ಮನವಿ Read More »

ಕರಾವಳಿ

ಅಕ್ರಮ ಮರಳು ಸಾಗಾಟ- ಸ್ಥಳೀಯರಿಂದ ದೂರು

(ನ್ಯೂಸ್ ಕಡಬ) newskadaba.com ಅ. 12. ಸರ್ಕಾರಿ ಜಾಗದಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡಲಾಗುತ್ತಿದೆ ಎಂದು ನಗರದ ಹೊರವಲಯದ ಬೆಂಗ್ರೆಯ ಸ್ಥಳೀಯ ನಿವಾಸಿಗಳು ದೂರು ನೀಡಿರುವ ಕುರಿತು ವರದಿಯಾಗಿದೆ. ತೋಟಬೆಂಗ್ರೆ ಹಿಂದೂ ರುದ್ರಭೂಮಿಯ ಸಮೀಪ ಸುಮಾರು 6 ಎಕರೆ ಜಾಗವನ್ನು ಮೀನುಗಾರಿಕಾ ಇಲಾಖೆಗೆ ಬಂದರು ಇಲಾಖೆಯಿಂದ ಹಸ್ತಾಂತರಿಸಲಾಗಿತ್ತು. ಜೆಟ್ಟಿ ನಿರ್ಮಾಣ ಮಾಡುವ ಉದ್ದೇಶದಿಂದ ಇದನ್ನು ನೀಡಲಾಗಿದ್ದು, ಬಾಕಿ ಉಳಿದ ಜಾಗದಲ್ಲಿ ಹಾಗೆಯೇ ಎಷ್ಟೋ ವರ್ಷಗಳಿಂದ ಮರಳು ಇದೆ. ಅದನ್ನು ತೆರವು ಮಾಡುವಂತಿಲ್ಲ. ಆದರೆ 3-4 ತಿಂಗಳ

ಅಕ್ರಮ ಮರಳು ಸಾಗಾಟ- ಸ್ಥಳೀಯರಿಂದ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರಿನಿಂದ ಬರುತ್ತಿದ್ದ ರೈಲಿನಲ್ಲಿದ್ದ ಸುಳ್ಯದ ವ್ಯಕ್ತಿಯೋರ್ವರಿಗೆ ಅದೇ ರೈಲಿನಲ್ಲಿ ಬಂದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನು ಕೆಲವೇ ಕ್ಷಣಗಳಲ್ಲಿ ವಶಕ್ಕೆ ಪಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆಂಗಳೂರಿನಿಂದ ಪುತ್ತೂರು ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದ ರೈಲಿನಲ್ಲಿ ಕೆಲವರು ಗಲಾಟೆ ಮಾಡುತ್ತಿರುವುದಾಗಿ ವ್ಯಕ್ತಿಯೊಬ್ಬರು ರೈಲ್ವೇ ಪೊಲೀಸರಿಗೆ ನೀಡಿದ್ದ ಮಾಹಿತಿಯಂತೆ ಪೊಲೀಸರು ನಾಲ್ವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದ ವ್ಯಕ್ತಿಯನ್ನೇ

ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ದಸರಾ: ಮೈಸೂರು-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 12. ನಾಡಹಬ್ಬ ಮೈಸೂರು ದಸರಾದ ಹಿನ್ನೆಲೆಯಲ್ಲಿ ಇಂದು (ಅ. 12) ಮಧ್ಯಾಹ್ನದಿಂದ ಭಾನುವಾರ ಬೆಳಗ್ಗಿನವರೆಗೆ ಮೈಸೂರು ಕಡೆಯಿಂದ  ಮಂಗಳೂರು ಕಡೆಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಿ ಮಡಿಕೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮೈಸೂರಿನಿಂದ ಮಂಗಳೂರು, ಸುಳ್ಯ, ಪುತ್ತೂರು ಕಡೆಗೆ ತೆರಳುವ ವಾಹನ ಸವಾರರು ಬಿಳಿಕೆರೆ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ ತೆರಳಬೇಕು. ಹಾಗೂ ಹುಣಸೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಕಟ್ಟೆಮಳಲವಾಡಿ, ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ

ದಸರಾ: ಮೈಸೂರು-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ
Scroll to Top