ಕರಾವಳಿ

ಕಡಬ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಅ. 11. ಹಲವೆಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕಡಬ ಪೊಲೀಸರು ಪತ್ತೆ ಹಚ್ಚಿ ದಸ್ತಗಿರಿ ಮಾಡಿರುವ ಘಟನೆ ನಡೆದಿದೆ. ಬಂಧಿತನನ್ನು ಕಡಬ ತಾಲೂಕು ಕುಂತೂರು ನಿವಾಸಿ ರಾಝಿಕ್ ಅಲಿಯಾಸ್ ಎರ್ಮಾಳ ರಾಝಿಕ್ ಎಂದು ಗುರುತಿಸಲಾಗಿದೆ. ಈತ ಕಳೆದ ಒಂದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ಅ. 10ರಂದು ತಮಿಳುನಾಡಿನ ಕೊಯಮತ್ತೂರಿನಿಂದ ಪೊಲೀಸರು ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು14 ದಿನಗಳ ನ್ಯಾಯಾಂಗ ಬಂಧನ […]

ಕಡಬ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 11.  ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದ್ದು, ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 10ರೂ.ನಂತೆ ಏರಿಕೆ ಕಂಡಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆಗೆ 350ರೂ. ಇತ್ತು. ಅ.10ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 325 ರೂ. ಇದ್ದರೆ ಹೊರ ಮಾರುಕಟ್ಟೆಯಲ್ಲಿ ಕೆಲವೆಡೆ 355ರಿಂದ 360 ರೂ. ತನಕವೂ ಬೇಡಿಕೆ ಇತ್ತು. ಹೊಸ ಅಡಿಕೆ ಕೊರತೆ

ಪುತ್ತೂರು: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ Read More »

ಕರಾವಳಿ

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ವಿದ್ಯುತ್‌ ಲೈನ್‌ ಕಾಮಗಾರಿ ನಿರ್ವಹಿಸುವ ಹಿರಿಯ ವಿದ್ಯುತ್‌ ಗುತ್ತಿಗೆದಾರರೊಬ್ಬರಿಗೆ ಅಪರಿಚಿತ ವ್ಯಕ್ತಿಯೊರ್ವ ಅ.9ರಂದು ರಾತ್ರಿ ಮೊಬೈಲ್‌ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕಕ್ಕೆ 6,498 ಕೋಟಿ ರೂಪಾಯಿ ಕೊಡಲಾಗಿದೆ. ದಕ್ಷಿಣ

ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ Read More »

ಕರಾವಳಿ

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ

(ನ್ಯೂಸ್ ಕಡಬ)newskadaba.com ಸುರತ್ಕಲ್, ಅ. 11.  ಇಲ್ಲಿನ ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಹೋದರಿಗೆ ಮನೆಯಿಂದ ಊಟ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಯುವಕ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯಲ್ಲಿ

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇತ್ತೀಚೆಗೆ ಸ್ಪರ್ಧಾಕೂಟದ ಸ್ಪರ್ಶ ಲಭಿಸಿದ್ದು, ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಹಲವು ಹುಲಿವೇಷ

ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ Read More »

ಕರಾವಳಿ

ಬಾಂಗ್ಲಾದ ಜೇಶೋರೇಶ್ವರಿ ದೇವಳದ ಕಾಳಿದೇವಿಗೆ ಮೋದಿ ನೀಡಿದ ಕಿರೀಟ ಕಳವು

(ನ್ಯೂಸ್ ಕಡಬ)newskadaba.com, ಅ. 11ಢಾಕಾ: 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ ಚಿನ್ನದ ಕಿರೀಟ ಕಳವಾಗಿದೆ. ಸ್ಥಳೀಯ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ನರೇಂದ್ರ ಮೋದಿ ಜೇಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಚಿನ್ನ ಮತ್ತು ಬೆಳ್ಳಿಯಿಂದ ಮಾಡಿದ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ಅಕ್ಟೋಬರ್‌ 10 ರಂದು ತಡರಾತ್ರಿ ಸುಮಾರು 2 ಗಂಟೆಗೆ ಕಿರೀಟವನ್ನು ಕಳವು

ಬಾಂಗ್ಲಾದ ಜೇಶೋರೇಶ್ವರಿ ದೇವಳದ ಕಾಳಿದೇವಿಗೆ ಮೋದಿ ನೀಡಿದ ಕಿರೀಟ ಕಳವು Read More »

ಕರಾವಳಿ

ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಅ. 11. ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ನಡೆದಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ

ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ಮನೆಮಂದಿ ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವನನ್ನು ವಾಮಂಜೂರು ಸೈಂಟ್ ರೈಮಂಡ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೇಗಿನಪೇಟೆ ನಿವಾಸಿ ಮುಹಮ್ಮದ್ ಯಾಸೀನ್ ಅಫ್ನಾನ್ (16) ಎಂದು ಗುರುತಿಸಲಾಗಿದೆ. ನಿರಂತರವಾಗಿ ಮೊಬೈಲ್ ನೋಡುವ ಚಟ ಹೊಂದಿದ್ದ ಈತ, ಸೆ.25ರಂದು ಮನೆಯಲ್ಲಿದ್ದ ವೇಳೆ ಅವನ ಬಳಿಯಿಂದ ಮೊಬೈಲ್‌ ನ್ನು ಮನೆಯವರು ಕಿತ್ತುಕೊಂಡಿದ್ದರು. ಬಳಿಕ ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು Read More »

ಕರಾವಳಿ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ನಗರದ ಪ್ರತಿಷ್ಠಿತ ಬಿಲ್ಡರ್ ಹಾಗೂ ಬಿಜೆಪಿ ಮುಖಂಡರೊಬ್ಬರ ಮನೆಗೆ ಯುವಕರು ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಿಲ್ಡರ್ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ಇಬ್ಬರು ಯುವಕರು ನುಗ್ಗಿ ದಾಂಧಲೆ ನಡೆಸಿದ್ದು ಅವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನುಶ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆ ಯತ್ನ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top