ಕರಾವಳಿ

crime, arrest, suspected

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಅ. 11. ಉದ್ಯಮಿ ಮುಮ್ತಾಝ್‌ ಅಲಿ ಪ್ರಕಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ‌ ಹಾಜರುಪಡಿಸಿದ್ದಾರೆ‌. ಪ್ರಕರಣದ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್‌ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಕಾವೂರು ಪೊಲೀಸರು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ‌ ಮೂವರು ಆರೋಪಿಗಳನ್ನು ಅ.09ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ […]

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ

(ನ್ಯೂಸ್ ಕಡಬ) newskadaba.com ಅ. 11. “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಒಂದು ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‍ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ Read More »

ಕರಾವಳಿ

ಪರಸ್ಪರ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು

(ನ್ಯೂಸ್ ಕಡಬ)newskadaba.com, ಅ. 11 ಮಂಗಳೂರು: ಮಂಗಳೂರು ನಗರದ ಬಲ್ಮಠದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳು ರೌಡಿಗಳಂತೆ ಪರಸ್ಪರ ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು- ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಮಾರಾಮಾರಿ ಮಾಡಿಕೊಂಡಿದ್ದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಹಲ್ಲೆ ನಡೆಸಿದ್ದಾರೆ. ಪ್ರಯಾಣಿಕರ ಮೈಮೇಲೆ ಬಿದ್ದು ಪರಸ್ಪರ ಬಡಿದಾಡಿಕೊಂಡು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿ ಮಾಡಿದ್ದಾರೆ.

ಪರಸ್ಪರ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು Read More »

ಕರಾವಳಿ

ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಅ. 11. ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ಅಕ್ಟೋಬರ್ 16ರಂದು ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿಹಿಲ್ ರಾಣಿಪುರ ಉಳ್ಳಿಯ, ಕಾವೂರಿನಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ ಇ, ಬಿ ಟೆಕ್, ಬಿಸಿಎ, ಬಿ ಎಸ್ ಸಿ , ಎಂಸಿಎ, ಎಂ ಎಸ್ ಸಿ, ಡಿಪೆÇ್ಲೀಮೋ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು

ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ Read More »

ಉದ್ಯೋಗ, ಕರಾವಳಿ

ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ

(ನ್ಯೂಸ್ ಕಡಬ) newskadaba.com ಅ. 11. ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು. ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ  ಜುಲೈ 6ರಂದು ಹೊರಡಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.  

ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ Read More »

ಕರಾವಳಿ

ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 11. ಡಾ|| ಬಾಬು ಜಗಜೀವನ ರಾಂ ನಿಗಮ ನಿಯಮಿತ  (ಲಿಡ್‍ಕರ್) 2024-25 ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ, ಸ್ವಯಂ ಉದ್ಯೋಗ ಸೌಲಭ್ಯ, ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ ಹಾಗೂ ಇತರೆ ಯೋಜನೆಗಾಗಿ ಅರ್ಜಿಗಳನ್ನು ನಿಗಮದ ವೆಬ್‍ಸೈಟ್ sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು

ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ- ನ್ಯಾಯಾಧೀಶೆ ಶೋಭಾ ಬಿ.ಜಿ

(ನ್ಯೂಸ್ ಕಡಬ) newskadaba.com ಅ. 11. ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಮಾನಸಿಕ ಅಸ್ವಸ್ಥತೆಗೆ ಒಳಪಡುವವರನ್ನು ಎಲ್ಲರಂತೆ ಕಾಣಬೇಕು. ಅವರ ಮೇಲೆ ದಯೆ ಮತ್ತು ಕರುಣೆ ಇರಲಿ. ಅವರನ್ನು ನಮ್ಮಂತೆ ಉಪಚರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ದ.ಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ತಿಳಿಸಿದರು. ಅವರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,

ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ- ನ್ಯಾಯಾಧೀಶೆ ಶೋಭಾ ಬಿ.ಜಿ Read More »

ಕರಾವಳಿ

ಸುಳ್ಯ: ಕಳ್ಳತನ ಪ್ರಕರಣದ ಆರೋಪ ಸಾಬೀತು; ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

(ನ್ಯೂಸ್ ಕಡಬ)newskadaba.com, ಅ. 11ಬೆಂಗಳೂರು: ಸಂಪಾಜೆಯ ಎರಡು ಮನೆಗಳಲ್ಲಿ ಚಿನ್ನಾಭರಣ ಮತ್ತು ಹಣ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು ಆರೋಪಿಗಳಿಬ್ಬರ ಆರೋಪ ಸಾಬೀತಾದ ಹಿನ್ನೆಲೆ ಇಬ್ಬರಿಗೂ ಸುಳ್ಯ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಅಹ್ಮದ್‌ ಕಬೀರ್‌ ಹಾಗೂ ಸಾಜುದೀನ್‌ ಫಾರೂಖ್‌ ಶಿಕ್ಷೆಗೆ ಒಳಗಾದ ಆರೋಪಿಗಳಾಗಿದ್ದರು.ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು, ದೋಷಿ ಎಂದು ಪರಿಗಣಿಸಲಾಗಿದೆ. ಅವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ಕೋರ್ಟ್‌

ಸುಳ್ಯ: ಕಳ್ಳತನ ಪ್ರಕರಣದ ಆರೋಪ ಸಾಬೀತು; ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ Read More »

ಕರಾವಳಿ

ಬೈಕ್ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ. 11.  ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು

ಬೈಕ್ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಯುಷ್ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ

(ನ್ಯೂಸ್ ಕಡಬ) newskadaba.com ಅ. 11. ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಆಯುಷ್ ಆಸ್ಪತ್ರೆ ವೆನ್‍ಲಾಕ್ ಆವರಣ ಮಂಗಳೂರು ಇಲ್ಲಿ ಪ್ರತೀ ತಿಂಗಳ 3ನೇ ಶುಕ್ರವಾರ ಮೂಲವ್ಯಾಧಿ, Piles Fistula and Fissure ಇನ್ನಿತರ ಗುದಗತ ರೋಗಗಳಿಂದ ಬಳಲುತ್ತಿರುವವರಿಗೆ ಉಚಿತ ಪರಿಣಾಮಕಾರಿ ಆಯುರ್ವೇದ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆಯುರ್ವೇದ ಶಸ್ತ್ರಚಿಕಿತ್ಸಾ ತಜ್ಞರಾದ ಡಾ|| ರವಿಶಂಕರ್ ಪೆರುವಾಜೆ ಇವರು ರೋಗಿಗಳ ತಪಾಸಣೆ ನಡೆಸಿ ಚಿಕಿತ್ಸೆಯನ್ನು ನೀಡುವರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಲು ಕೋರಿದೆ. ಹೆಚ್ಚಿನ ಮಾಹಿತಿಗೆ

ಆಯುಷ್ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ Read More »

ಕರಾವಳಿ
Scroll to Top