ಕರಾವಳಿ

ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ದ.ಕ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭ (ನ.1) ನೀಡಲಾಗುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದ.ಕ.ಜಿಲ್ಲಾಡಳಿತವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿಯನ್ನು ನೀಡಲಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ಕ್ಷೇತ್ರಗಳಲ್ಲಿ ಸಾಧನೆಗೈದವರು ಅರ್ಜಿಯನ್ನು ಸಂಕ್ಷಿಪ್ತ ದಾಖಲೆ/ ವಿವರಣೆಯೊಂದಿಗೆ ಅ.25ರೊಳಗೆ […]

ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..!

(ನ್ಯೂಸ್ ಕಡಬ) newskadaba.com ಅ. 09. ನಕಲಿ ಆನ್ ಲೈನ್ ಅರ್ನಿಂಗ್ ಆ್ಯಪ್ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ದೂರುದಾರರು ಸೆ.28ರಂದು ಇನ್ಸ್ಟಾಗ್ರಾಂ ಮೂಲಕ ಬಂದ ಆನ್ ಲೈನ್ ಅರ್ನಿಂಗ್ ಎಂಬ ಲಿಂಕ್ ನ್ನು ಕ್ಲಿಕ್ ಮಾಡಿದ್ದು, ಈ ವೇಳೆ 9733674701 ನಂಬರಿನ ವಾಟ್ಸಾಪ್ ಚಾಟ್ ತೆರೆದುಕೊಂಡಿದೆ. ಅದರಲ್ಲಿ ಅಪರಿಚಿತ ವ್ಯಕ್ತಿಯು ತಾವು ಕಳಿಸಿದ ವಿಡಿಯೋಗೆ ಲೈಕ್ ಮಾಡಿದರೆ 123ರಿಂದ 5000 ರೂ.ವರೆಗೆ ಗಳಿಸಬಹುದು ಎಂದು ತಿಳಿಸಿದ್ದು, ನಂಬಿದ ದೂರುದಾರ

ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ

(ನ್ಯೂಸ್ ಕಡಬ)newskadaba.com, ಅ. 09ಕುಂದಾಪುರ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ಇವರ ಪಟಾಕಿ ದಾಸ್ತಾನು ಶೆಡ್ ಸಮೀಪವೇ ಕಾಂಕ್ರೀಟ್ ರಸ್ತೆ ಇದ್ದು, ಕೆಲವು ಸಮಯಗಳ ಹಿಂದೆ ರಸ್ತೆ ಮಧ್ಯೆಯೇ ಕೆಂಪು ಕಲ್ಲಿನ ಕಂಪೌಂಡ್ ನಿರ್ಮಿಸಿದ್ದರು. ಈ ಬಗ್ಗೆ ಸ್ಥಳೀಯರು ಹಾಗೂ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರೂ

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ Read More »

ಕರಾವಳಿ

ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಅ. 09. ತುಳುನಾಡ ಸಂಪ್ರದಾಯಗಳು, ಆಚರಣೆಗಳು ತೆರೆಮರೆಗೆ ಸರಿಯುತ್ತಿದೆ ಎನ್ನುವ ಅಪವಾದದ ಕಾಲಘಟ್ಟದಲ್ಲಿ ತುಳುನಾಡ ಆಚರಣೆಗಳನ್ನು ಸಂಪ್ರದಾಯ ಬದ್ದವಾಗಿ ಕಡಬ ತಾಲೂಕು ಗೋಳಿತೊಟ್ಟು ಗ್ರಾಮದ ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಳುನಾಡಿನ ವಿವಿಧ ಆಚರಣೆಗಳನ್ನು ಆಚರಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಡೆಯುತ್ತಿದೆ. ಅಂತೆಯೇ ಸೋಮವಾರ ಹೊಸ ಅಕ್ಕಿ ಊಟ, ಕೊರಳ ಪರ್ಬವನ್ನು ಗ್ರಾಮೀಣ ಸೊಗಡಿನಲ್ಲಿ ಆಚರಿಸಲಾಗಿದೆ. ಮಕ್ಕಳು ಕೃಷಿ ಪದ್ದತಿಯನ್ನು ಭವಿಷ್ಯದಲ್ಲಿ ಅಳವಡಿಸಿಕೊಳ್ಳುತ್ತಾರೆ ಎನ್ನುವ ಅಚಲ ನಂಬಿಕೆಯಿಂದ ಶಾಲಾಭಿವೃದ್ದಿ ಸಮಿತಿ,

ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ Read More »

ಕರಾವಳಿ

ಉಳಿಯ ದ್ವೀಪ- ಮರಳುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೆ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ. ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ

ಉಳಿಯ ದ್ವೀಪ- ಮರಳುಗಾರಿಕೆ ನಿಷೇಧ Read More »

ಕರಾವಳಿ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವು  ಅಕ್ಟೋಬರ್ 10ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮಂಗಳೂರು ನಗರ ಪೊಲೀಸ್ ಆಯುಕ್ತ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ Read More »

ಕರಾವಳಿ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಅಕ್ಟೋಬರ್ 11ರಂದು ನಡೆಯುವ ಆಯುಧ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ನೆಟ್ಟಣಿಗೆ ಮುಡ್ನೂರು ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ಶೇಂದಿ ಅಂಗಡಿ ಮತ್ತು ಎಲ್ಲಾ ವಿಧದ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ Read More »

ಕರಾವಳಿ

ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ)newskadaba.com, ಅ. 09 ಮಂಗಳೂರು: ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದರ ಧಾವಂತಕ್ಕೆ ಕಾರಣಮಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಅವರು ಬಸ್ಸನ್ನು ಸ್ವಾಧೀನ ಪಡೆದಿದ್ದಾರೆ. ಮಂಗಳೂರು – ಮೂಡಬಿದ್ರೆ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ KA 19 AB 1339 ಸಂಖ್ಯೆಯ ಜೈನ್ ನಾಮಾಂಕಿತದ ಖಾಸಗಿ ಬಸ್ಸನ್ನು ಅದರ ಚಾಲಕ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಾಲಯಿಸಿ ಮತ್ತೊಂದು ಖಾಸಗಿ ಬಸ್ಸನ್ನು

ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು Read More »

ಕರಾವಳಿ

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಸುಮಾರು 200 ವರ್ಷಗಳ ಇತಿಹಾಸವಿರುವ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಎ.ಬಿ  ಜುಮ್ಮಾ ಮಸೀದಿಯ ಆಡಳಿತಕ್ಕೆ ಒಳಪಟ್ಟಿದ್ದು ಇಲ್ಲಿ ಮೂರು  ವರ್ಷಕ್ಕೊಮ್ಮೆ ನಡೆಯುವ ಅದ್ಧೂರಿ  ಉರೂಸ್ ಸಮಾರಂಭ 2025 ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ನ ವಠಾರದಲ್ಲಿ ನಡೆಯಲಿದೆ ಎಂದು ಉರೂಸ್ ಮಾರಂಭದ ವಕ್ತಾರ ಅಬ್ಬಾಸ್ ಕುಂತೂರು ಹೇಳಿದರು. ಅವರು  ಕಡಬದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ಕಡೆ ಊರೂಸ್‌ಗಳನ್ನು

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ Read More »

ಕರಾವಳಿ
Scroll to Top