ಕರಾವಳಿ

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಪಿಆರ್‍ಓ ಮತ್ತು ಎಪಿಆರ್‍ಓ ಗಳಿಗೆ ಮೈಕ್ರೋ ವೀಕ್ಷಕರ ತರಬೇತಿ ಕಾರ್ಯಕ್ರಮ ಅಕ್ಟೋಬರ್ 18ರಂದು ನಡೆಯಲಿದೆ. ಮೈಕ್ರೋ ವೀಕ್ಷಕರುಗಳಿಗೆ ತರಬೇತಿ ನೀಡುವ ಸಮಯ ಮತ್ತು ಸ್ಥಳ ಅಕ್ಟೋಬರ್ 18ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಜಿಲ್ಲೆಯ ಎಲ್ಲಾ ಮೈಕ್ರೋ ವೀಕ್ಷಕರುಗಳಿಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ. […]

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ Read More »

ಕರಾವಳಿ

ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು – ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ನಗರದಲ್ಲಿ ಖಾಸಗಿ ಬಸ್ಸೆಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಚಾಲಕನ ಓವರ್ ಟೇಕ್ ಅಟ್ಟಹಾಸ! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ಸುರಕ್ಷತೆಯನ್ನು ಲೆಕ್ಕಿಸದೆ ನಿರ್ಲಕ್ಷ್ಯತನದಿಂದ ಎದೆ ಝಲ್ಲೆನಿಸುವಂತೆ ಮಾಡಿದ್ದ ಬಸ್ ನ ಓವರ್ ಸ್ಪೀಡ್ ವಿಡಿಯೋಗಳು ಇದೀಗ ವೈರಲ್ ಆಗಿದೆ. ಮಂಗಳೂರು -ಮೂಡಬಿದ್ರೆ ರೂಟ್ ನಲ್ಲಿ ಸಂಚಾರಿಸುತ್ತಿದ್ದ ಜೈನ್ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಾಯಕಾರಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಿನ್ನಿಸ್ ದಾಖಲೆಯ ವೀರ ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. 25ನೇ ಸ್ಟೇಟ್ ಮಾಸ್ಟರ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾಣ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು 400ಮೀ ಫ್ರೀಸ್ಟೈಲ್ ಚಿನ್ನದ ಪದಕ, 50ಮೀ ಬಟರ್ ಫ್ಲೈ ಚಿನ್ನದ ಪದಕ, 200ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 100ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 4×50 ಫ್ರೀಸ್ಟೈಲ್ ರಿಲೇ ಬೆಳ್ಳಿ

ಗಿನ್ನಿಸ್ ದಾಖಲೆಯ ವೀರ ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 09. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಕುಂತೂರು ಪದವು ಸಂತಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನ.30ರಂದು ನಡೆಯಲಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬರಹಗಾರ, ಸಾಮಾಜಿಕ ಮುಂದಾಳು ಎನ್.ಕರುಣಾಕರ ಗೋಗಟೆ ಹೊಸಮಠ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ಹಳ್ಳಿ ಬದುಕಿನ ಚಿತ್ರಣ ನೀಡುವ ಕೃತಿ ‘ಒಂದು ಸೇತುವೆಯ

ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ Read More »

ಕರಾವಳಿ

ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com, ಅ. ನವದೆಹಲಿ 09: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ ಅ.10ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ

ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್- ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 09. ಬೈಕ್ ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪೊಯಿನಾಚಿಯ ಮಣಿಕಂಠ (24) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಮೈಲಾಟಿಯ ಪ್ರಜ್ವಲ್ (23) ಗಾಯಗೊಂಡಿದ್ದು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಕಲದ ಜ್ಯೂಸ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮಣಿಕಂಠ ತೆರಳುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ.  

ಬೈಕ್- ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನ ಪರಿಷತ್ ಚುನಾವಣೆ ಸಿದ್ಧತೆ- ವೀಕ್ಷಕರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗಳ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕರಾದ ಪಂಕಜ್ ಕುಮಾರ್ ಪಾಂಡೆ ಅವರು ಪರಿಶೀಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ ಪಡೆದರು. ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅವರು

ವಿಧಾನ ಪರಿಷತ್ ಚುನಾವಣೆ ಸಿದ್ಧತೆ- ವೀಕ್ಷಕರಿಂದ ಪರಿಶೀಲನೆ Read More »

ಕರಾವಳಿ

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್‌ ಡ್ರಗ್ಸ್‌ ಪೆಡ್ಲರ್‌ ನನ್ನು ಬಂಧಿಸಿರುವುದರ ಹಿನ್ನೆಲೆ ಪ್ರತಿಕ್ರಿಯಿಸಿರುವ ಕ್ಯಾ.

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ Read More »

ಕರಾವಳಿ

ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿ ಶಿಬಿರ – (20 ದಿನಗಳು), ಅಕ್ಟೋಬರ್ 7ರಿಂದ 26ರ ವರೆಗೆ ನಡೆಯಲಿದ್ದು, ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ.(ಪಾಸ್/ಫೇಲ್) 18 ರಿಂದ 40ವರ್ಷ ವಯಸ್ಸಾಗಿರಬೇಕು. ವಿಡಿಯೋಗ್ರಾಫಿ ತರಬೇತಿ ಶಿಬಿರ – (12 ದಿನಗಳು) ನವೆಂಬರ್ 15ರಿಂದ 26ರ

ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ Read More »

ಕರಾವಳಿ
Scroll to Top