ಕರಾವಳಿ

ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ

(ನ್ಯೂಸ್ ಕಡಬ)newskadaba.com, ಅ. 09.: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಚಾರಣಕ್ಕೆ ಇದೀಗ ಅರಣ್ಯ ಇಲಾಖೆಯ ಹೊಸ ಮಾರ್ಗ ಸೂಚಿಯೊಂದಿಗೆ ಅವಕಾಶ ನೀಡಲಾಗಿದೆ. ಚಾರಣಿಗರು ಆನ್‌ಲೈನ್‌ ಮೂಲಕ ಬುಕ್‌ ಮಾಡಿದ್ದು, ಮಂಗಳವಾರ ಚಾರಣ ಆರಂಭಿಸಿದ್ದಾರೆ. ಆನ್‌ಲೈನ್‌ ಮೂಲಕ ನೋಂದಾಯಿಸಿದ ಮೊದಲ ತಂಡ ನಿನ್ನೆ ಚಾರಣ ಕೈಗೊಂಡಿದೆ. ಹೊಸ ಮಾರ್ಗಸೂಚಿ ಜಾರಿಯಾದ ಬಳಿಕ ಚಾರಣಿಗರು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆ ಮೂಲಕ ಚಾರಣ ಕೈಗೊಂಡಿದ್ದಾರೆ. ಕಳೆದ ವರ್ಷದವರೆಗೆ ಕುಮಾರಪರ್ವತ ಚಾರಣ ಸುಲಭವಾಗಿತ್ತು. ಕೆಲ ಕಠಿಣ ನಿಯಮಗಳೊಂದಿಗೆ ನೇರವಾಗಿ ಚಾರಣ ಆರಂಭಿಸಬಹುದಿತ್ತು. […]

ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 11 ರವರೆಗೆ ಅವಧಿ ವಿಸ್ತರಿಸಲಾಗಿದೆ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) shp.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ- ಅವಧಿ ವಿಸ್ತರಣೆ Read More »

ಕರಾವಳಿ

ಎನ್ಐಟಿಕೆ- ಎಸ್ಎ.ಐಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಎಸ್‍ಎಇ ಇಂಡಿಯಾ (ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಉದ್ಘಾಟಿಸಲಾಯಿತು. ಈ ಹೊಸ ವಿಭಾಗವು ರಾಜ್ಯದ ಕರಾವಳಿ ಪ್ರದೇಶದಾದ್ಯಂತ ಆಟೋಮೋಟಿವ್ ಮತ್ತು ಏರೋಸ್ಪೇಸ್ ಕ್ಷೇತ್ರಗಳಲ್ಲಿ ನಾವೀನ್ಯತೆ, ಸಹಯೋಗ ಮತ್ತು ತಾಂತ್ರಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಸೈಇಂಡಿಯಾ ಕರಾವಳಿ ಕರ್ನಾಟಕ ವಿಭಾಗವನ್ನು ಸ್ಥಾಪಿಸುವುದು ಆಟೋಮೋಟಿವ್ ಮತ್ತು

ಎನ್ಐಟಿಕೆ- ಎಸ್ಎ.ಐಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ Read More »

ಕರಾವಳಿ
crime, arrest, suspected

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು (ಎ1) ಆಯೇಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಶೋಯೆಬ್ (ಎ5) ಮತ್ತು ಸಿರಾಜ್ ಎಂದು ಗುರುತಿಸಲಾಗಿದೆ. ಅಲಿ ನಾಪತ್ತೆಯಾದ ನಂತರ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿದೆ. ಆಕೆಯನ್ನು ಬಂಟ್ವಾಳದ ಕಲ್ಲಡ್ಕ ಬಳಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ. ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ.ಕಳೆದ ಒಂದು ದಶಕದಿಂದ ಕುಂದಾಪುರ

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ Read More »

ಕರಾವಳಿ

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7 ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ. ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ -169ಎ ರಸ್ತೆಯ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಂಜಿಎಂ ಕಾಲೇಜು ಎದುರು ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹಾದು ಹೋಗಿರುವ ಏಕಮುಖ

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಮಾರಿ ಸೆಲ್ಜಾ: ಹರಿಯಾಣದ ಸಿಎಂ ಸ್ಥಾನಕ್ಕೆನಾನು ಸ್ಪರ್ಧಿ

(ನ್ಯೂಸ್ ಕಡಬ)newskadaba.com, ಅ. 08.ಉಡುಪಿ:  ನಾನು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿ ಎಂದು ಹರಿಯಾನದ ಸಿರ್ಸಾದ ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ತಿಳಿಸಿದ್ದಾರೆ. ಚುನಾವಣಾ ಮತ ಎಣಿಕೆ ನಡೆಯುತ್ತಿರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಸಿಎಂ ಸ್ಥಾನಕ್ಕೆ ನಾನೇ ಸ್ಪರ್ಧಿ. ಆದರೆ ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದೇನೆ ಎಂದಿದ್ದಾರೆ. ಬಿಜೆಪಿ ದುರಾಡಳಿತ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ನಿಶ್ಚಿತ ಎಂದು

ಕುಮಾರಿ ಸೆಲ್ಜಾ: ಹರಿಯಾಣದ ಸಿಎಂ ಸ್ಥಾನಕ್ಕೆನಾನು ಸ್ಪರ್ಧಿ Read More »

ಕರಾವಳಿ

​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಪ್ರತಿಷ್ಠಿತ ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರಾಗಿದ್ದರು. ಎ ಕೆ ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.  

​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಭಾರತೀಯ ಹಜ್ ಕಮಿಟಿ ಮೂಲಕ 2025ರಲ್ಲಿ ಹಜ್ ಯಾತ್ರೆ ಕೈಗೊಳ್ಳಲು ರಾಜ್ಯ ಹಜ್ ಸಮಿತಿ ಮೂಲಕ ಅರ್ಜಿ ಸಲ್ಲಿಸಿದವರ ಪೈಕಿ ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ. ಆಯ್ಕೆಯಾದ ಎಲ್ಲಾ ಯಾತ್ರಿಕರು ಆರಂಭದಲ್ಲಿ ಮುಂಗಡ ಹಜ್ ಮೊತ್ತ ರೂ.1,28,000, ಮರುಪಾವತಿಸಲಾಗದ ಸಂಸ್ಕರಣಾ ಶುಲ್ಕ 300 ರೂ. ಮತ್ತು ಇತರ ವೆಚ್ಚಗಳಿಗೆ 2,000 ರೂ. ಸೇರಿದಂತೆ ಒಟ್ಟು 1,30,300 ರೂ.ಗಳನ್ನು 2024 ಅಕ್ಟೋಬರ್ 8 ರಿಂದ ಅ.21ರೊಳಗಾಗಿ ಪಾವತಿಸಬೇಕಾಗಿದೆ. 1,30,300 ರೂ.

ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ Read More »

ಕರಾವಳಿ

ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್

(ನ್ಯೂಸ್ ಕಡಬ)newskadaba.com, ಅ. 08.ಉಡುಪಿ:  ಅಪರಿಚಿತ ವಾಹನದಿಂದ ರಸ್ತೆಗೆ ತೈಲ ಸೋರಿಕೆಯಾಗಿ ಹಲವಾರು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಸವಾರರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಡುಪಿಯ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ತೈಲ ಸೋರಿಕೆಯಿಂದ ರಸ್ತೆ ಜಾರುತ್ತಿತ್ತು, ಪರಿಣಾಮ ಏಳೆಂಟು ದ್ವಿಚಕ್ರ ವಾಹನ ಸವಾರರು ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ರಸ್ತೆಯಿಂದ ತೈಲವನ್ನು ತೆರವುಗೊಳಿಸಲು ನೀರು ಸಿಂಪಡಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಗ್ನಿಶಾಮಕ ದಳದ ಪದ್ಮನಾಭ ಕಾಂಚನ್, ದಿವಾಕರ್ ಮತ್ತು

ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top