ಕರಾವಳಿ

crime, arrest, suspected

ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 08. ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ದೂಪದ ಮರದಿಂದ ಸಂಗ್ರಹಿಸಲಾದ ಹಾಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಸಾಗಾಟ ನಡೆಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಬಾಯಬೆ ನಿವಾಸಿ ಉಮ್ಮರ್ ಫಾರೂಕ್ (44), ಪಾಟ್ರಕೋಡಿ ನಿವಾಸಿಗಳಾದ ಆಲಿ ಹೈದರ್ ಎಂ.ಕೆ(24), ಹಸೈನಾರ್(30) ಮತ್ತು ತಾಳಿಪಡ್ಪು ನಿವಾಸಿ ಉಮ್ಮರ್ […]

ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ವೃದ್ಧೆ..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಜಿಲ್ಲೆಯ ಹೆಬ್ರಿ ತಾಲೂಕು ಕಬ್ಬಿನಾಲೆ ವ್ಯಾಪ್ತಿಯ ಬಲ್ಲಾಡಿ ಗುಮ್ಮಗುಂಡಿ ತೋಡು ಹಾಗೂ ಕೆಲಕಿಲ ನದಿಯಲ್ಲಿ ಭಾನುವಾರ ಉಂಟಾದ ಭಾರಿ ಪ್ರವಾಹದಲ್ಲಿ ವೃದ್ದೆಯೊಬ್ಬಳು ಕೊಚ್ಚಿ ಹೋಗಿದ್ದು, ಆಕೆಯ ಮೃತದೇಹ ಸುಮಾರು ಎರಡು ಕಿ.ಮೀ. ದೂರದ ಬಲ್ಲಾಡಿಯ ಅರ್ಧನಾರೀಶ್ವರ ದೇವಸ್ಥಾನದ ಬಳಿ ಸೋಮವಾರ ಪತ್ತೆಯಾಗಿದೆ. ಮೃತರನ್ನು ಬಲ್ಲಾಡಿ ಬೆಂಡುಗುಡ್ಡೆಯ ಚಂದ್ರು ಗೌಡ್ತಿ (91) ಎಂದು ಗುರುತಿಸಲಾಗಿದೆ. ಬಲ್ಲಾಡಿ ಗುಡ್ಡ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ 2.30ಕ್ಕೆ ಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿದಿತ್ತು.

ಭಾರೀ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ವೃದ್ಧೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅರಣ್ಯ ಇಲಾಖೆ ವತಿಯಿಂದ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

(ನ್ಯೂಸ್ ಕಡಬ)newskadaba.com ಕಡಬ, ಅ. 08. ಕರ್ನಾಟಕ ಅರಣ್ಯ ಇಲಾಖೆ ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘ ಮಂಗಳೂರು ವಿಭಾಗ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವನ್ಯಜೀವಿ ಸಪ್ತಹ ಪ್ರಯುಕ್ತ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಆಯ್ಕೆಯ ಸಲುವಾಗಿ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಸೈಂಟ್ ಜೋಕಿಮ್ ಸಭಾಭವನದಲ್ಲಿ ನಡೆಯಿತು. ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ವಲಯ ಶ್ರೀ ವಿಮಲ್ ಬಾಬು ಇವರು ಅಧ್ಯಕ್ಷತೆಯನ್ನು ವಹಿಸಿ ಪರಿಸರ ಸಂರಕ್ಷಣೆಯ ಮತ್ತು ವನ್ಯಜೀವಿಗಳ ಮಹತ್ವದ ಬಗ್ಗೆ

ಅರಣ್ಯ ಇಲಾಖೆ ವತಿಯಿಂದ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ Read More »

ಕರಾವಳಿ

“ಶ್ರೀ ಟೆಕ್ನಾಲಜೀಸ್‌” ಪ್ರಸ್ತುತಪಡಿಸುತ್ತಿದೆ 4ನೇ ವರ್ಷದ ಲಕ್ಕೀ ಸ್ಕೀಮ್; ಕೇವಲ 1 ಸಾವಿರ ಪಾವತಿಸಿ ಸ್ಕೂಟರ್, ಚಿನ್ನ ಮತ್ತು ಫರ್ನಿಚರ್ ನಿಮ್ಮದಾಗಿಸಿ

(ನ್ಯೂಸ್ ಕಡಬ)newskadaba.com ಅ. 09. ಸುಳ್ಯದ ಶ್ರೀ ಟೆಕ್ನಾಲಜಿ ಸೋಲಾರ್ ಆಟೋಮೇಷನ್ ತಂಡದ ನಾಲ್ಕನೇ ವರ್ಷದ ಯಶಸ್ವಿ ಲಕ್ಕಿ ಸ್ಕೀಂ ಗ್ರಾಂಡ್ ಆಗಿ ತಯಾರು ಮಾಡ್ತಿದೆ. ಬಹುಶಃ ಬೇರೆಲ್ಲೂ ಇಂತಹ ಒಂದು ಸುವರ್ಣಾವಕಾಶ ನೀವೆಲ್ಲೂ ಕೇಳಿರಲು ಅಸಾಧ್ಯ. ಇದರ ಇನ್ನೊಂದು ವಿಶೇಷತೆ ಏನೆಂದರೆ ಬಂಪರ್ ಬಹುಮಾನಗಳ ಜೊತೆಗೆ ಪ್ರತೀ ತಿಂಗಳು 5 ಜನರಿಗೆ ಸ್ಪೆಷಲ್ ಗಿಫ್ಟ್ ನ್ನು ಕೂಡಾ ಪಡೆದುಕೊಳ್ಳಬಹುದು. ಇಷ್ಟು ಮಾತ್ರ ಅಲ್ಲದೇ ನಿಮ್ಗೆ ಏನಾದ್ರೂ ಲಕ್ಕಿ ಬಂಪರ್ ವಿನ್ ಆದ್ರೆ ಮುಂದೆ ಹಣ ಕಟ್ಟಬೇಕೆಂದಿಲ್ಲ.  

“ಶ್ರೀ ಟೆಕ್ನಾಲಜೀಸ್‌” ಪ್ರಸ್ತುತಪಡಿಸುತ್ತಿದೆ 4ನೇ ವರ್ಷದ ಲಕ್ಕೀ ಸ್ಕೀಮ್; ಕೇವಲ 1 ಸಾವಿರ ಪಾವತಿಸಿ ಸ್ಕೂಟರ್, ಚಿನ್ನ ಮತ್ತು ಫರ್ನಿಚರ್ ನಿಮ್ಮದಾಗಿಸಿ Read More »

ಕರಾವಳಿ

ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 08. ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ಇದರ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ ಮಾಡಲಾಗಿದೆ. ಕುಂದಾಪುರ ತಾಲೂಕು ಉಡುಪಿ ಜಿಲ್ಲೆ ಇವರನ್ನು ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯಿದಿನ್ ಕುಟ್ಟಿ ಅವರು ಮುಂದಿನ ಅದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ.  

ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ Read More »

ಕರಾವಳಿ

ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 08. ನಾಲ್ಕು ದಿನಗಳ ಹಿಂದೆ ತಾನು ಓಡಿಸುತ್ತಿದ್ದ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನಲೆಯಲ್ಲಿ ಮನನೊಂದು ಚಾಲಕ ವಾಸಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ ( 55) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣ ರಸ್ತೆಯ ಬಾಡಿಗೆ ಕ್ವಾಟರ್ಸ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಸಾಲ ಪಡೆದು ಆಟೋರಿಕ್ಷಾ ಖರೀದಿಸಿದ್ದು , ಬಿಟ್ಟುಕೊಡುವಂತೆ ಹಲವು ಬಾರಿ

ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

(ನ್ಯೂಸ್ ಕಡಬ)newskadaba.com,ಬಂಟ್ವಾಳ ಅ. 08. ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ವಸ್ತು ಸಹಿತ ಅರಣ್ಯ ಇಲಾಖೆ ಅಧಿಕಾರಿಗಳು ಚಂದಳಿಕೆಯಲ್ಲಿ ಬಂಧಿಸಿದ್ದಾರೆ. ಕೆದಿಲ ನಿವಾಸಿಗಳಾದ ಅಲಿ ಹೈದರ್, ಉಮ್ಮರ್ ಫಾರೂಕ್, ಮಹಮ್ಮದ್ ಹಸೈನಾರ್, ಉಮ್ಮರ್ ಫಾರೂಕ್ ಬಂಧಿತರು. ನಾಲ್ವರು ಆರೋಪಿಗಳು ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಕೃತ್ಯ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ನಗರದ ಸಿಸಿಬಿ ಪೊಲೀಸರು ಬೃಹತ್‌ ಡ್ರಗ್‌ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಸುಮಾರು 6 ಕೆ.ಜಿ‌ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ಸೈಬೀರಿಯನ್ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ ಅಲಿ ಎಂಬಾತನನ್ನು ಬಂಧಿಸಲಾಗಿತ್ತು.

ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ Read More »

ಕರಾವಳಿ

ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ

(ನ್ಯೂಸ್ ಕಡಬ)newskadaba.com  ಸುಳ್ಯ, ಅ. 07. ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ತಮಿಳುನಾಡಿನ ಕೋಳಿ ಕರಣ್ ಎಂಬಾತ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಅ. 5ರಂದು ಪೊಲೀಸರು ಬಂಧಿಸಿ ಸುಳ್ಯದ ಕೋರ್ಟ್ ಗೆ

ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಸೇತುವೆಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು- ಯುವಕರ ಸಾಹಸಕ್ಕೆ ಸ್ಥಳೀಯರ ಪ್ರಶಂಸೆ

(ನ್ಯೂಸ್ ಕಡಬ)newskadaba.com ಅ. 07. ಸೇತುವೆಯಿಂದ ಕೆಳಗೆ ಬಿದ್ದು, ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯೋರ್ವರನ್ನು ಮೇಲಕೆತ್ತಿ ರಕ್ಷಿಸಿದ ಘಟನೆ ಅ.6ರಂದು ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಉಮ್ಮರ್ ರವರು ರಕ್ಷಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಹೆಚ್ ಹಾಗೂ ಸುರೇಶ್ ಸಿಎಚ್ ರಕ್ಷಣೆ ಮಾಡಿದ ಯುವಕರು.ಅ.6ರಂದು ಮಧ್ಯಾಹ್ನದ ಬಳಿಕ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿತ್ತು. ವಿಟ್ಲದ  ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಾಯಂಕಾಲದ ವೇಳೆ ಉಮ್ಮರ್

ವಿಟ್ಲ: ಸೇತುವೆಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು- ಯುವಕರ ಸಾಹಸಕ್ಕೆ ಸ್ಥಳೀಯರ ಪ್ರಶಂಸೆ Read More »

ಕರಾವಳಿ
Scroll to Top