ಕರಾವಳಿ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ

(ನ್ಯೂಸ್ ಕಡಬ)newskadaba.com ಅ. 07. ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ  ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು. ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶರತ್ ತೊಡಿಕ್ಕಾನ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ ಬಿ […]

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ Read More »

ಕರಾವಳಿ

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 07. ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ಯುವಕ ಕಾಣೆಯಾಗಿರುವುದಾಗಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನೆಹರು ನಗರದ ಗಣೇಶ್ ಬಾಗ್ ನ ಲಕ್ಷ್ಮೀ ಪ್ರಸಾದ್ ಕಂಪೌಂಡ್ ನಿವಾಸಿ ದಿ.ಕೇಶವ ಮೂರ್ತಿ ಎಂಬುವರ ಪುತ್ರ 20 ವರ್ಷ ಪ್ರಾಯದ ಮನೋಜ್ ಕೆ. ಕಾಣೆಯಾದ ಯುವಕನಾಗಿದ್ದಾನೆ. ಪುತ್ತೂರಿನ ಸಂತ ಫಲೋಮಿನಾ ಕಾಲೇಜಿನಲ್ಲಿ 2ನೆ ವರ್ಷದ ಬಿಎಸ್ಸಿ ಪದವಿಗೆ ಕಲಿಯುತ್ತಿದ್ದ ಮನೋಜ್ ಅ.5ರಂದು ಬೆಳಿಗ್ಗೆ ಸ್ನೇಹಿತನ ಮನೆಗೆ ಹೋಗಿ

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಬರ್ ವಂಚಕರಿಂದ ಎಚ್ಚರ ವಹಿಸಿ- ಪಿಎಸೈ ಹರೀಶ್ ಆರ್

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 07. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರು, ವೃತ್ತಿಪರರೇ ಹೆಚ್ಚಾಗಿ ವಂಚನೆಗೆ ಒಳಗಾಗುತ್ತಿದ್ದು ಸೈಬರ್ ಅಥವಾ ಆನ್ ಲೈನ್ ನಲ್ಲಿ ವ್ಯವಹರಿಸುವಾಗ ಹೆಚ್ಚು ಎಚ್ಚರದಿಂದ ಇರಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಹರೀಶ್ ಆರ್ ಅವರು ಸಲಹೆ ನೀಡಿದರು. ಅವರು ಭಾನುವಾರ ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಚರ್ಚ್ ಇದರ ಕಥೊಲಿಕ್ ಸಭಾ ಘಟಕ, ಮಾಧ್ಯಮ ಆಯೋಗ ಜಂಟಿಯಾಗಿ ಆಯೋಜಿಸಿದ್ದ ಸೈಬರ್ ಕ್ರೈ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ವಂಚನೆಗೆ ಒಳಗಾಗಿರುವುದು

ಸೈಬರ್ ವಂಚಕರಿಂದ ಎಚ್ಚರ ವಹಿಸಿ- ಪಿಎಸೈ ಹರೀಶ್ ಆರ್ Read More »

ಕರಾವಳಿ

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪವೇ ಸ್ವಲ್ಪ ಇಳಿಕೆಯಾಗಿದೆ. ಸೋಮವಾರ ರಾಜ್ಯ ರಾಜಧಾನಿ ರಾಜ್ಯ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,119 ರೂ. ಮತ್ತು

ಚಿನ್ನದ ದರದಲ್ಲಿ ತುಸು ಇಳಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಯತಪ್ಪಿ ನದಿಗೆ ಬಿದ್ದ ವೃದ್ಧ ವ್ಯಕ್ತಿ: ಸ್ಥಳೀಯ ಯುವಕರಿಂದ ರಕ್ಷಣೆ

(ನ್ಯೂಸ್ ಕಡಬ)newskadaba.com ವಿಟ್ಲ, ಅ. 07. ಉಕ್ಕಿ ಹರಿಯುತ್ತಿದ್ದ ನದಿಗೆ ಆಯತಪ್ಪಿ ಬಿದ್ದ ವೃದ್ಧ ವ್ಯಕ್ತಿಯನ್ನು ಯುವಕರಿಬ್ಬರು ರಕ್ಷಿಸಿರುವ ಘಟನೆ ರವಿವಾರ ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ. ಉಮ್ಮರ್ (70) ರಕ್ಷಿಸಲ್ಪಟ್ಟ ವ್ಯಕ್ತಿ. ವಿಟ್ಲ ಭಾಗದಲ್ಲಿ ರವಿವಾರ ವ್ಯಾಪಕ ಮಳೆಯಾಗಿದ್ದು, ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ದಾರಿಯಾಗಿ ಸಂಜೆ ವೇಳೆ ಉಮರ್ ಅವರು ಹೋಗುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಸೇತುವೆಗೆ ಯಾವುದೇ ರೀತಿಯ ತಡೆ ಇಲ್ಲದೆ ಇರುವುದು ಇದಕ್ಕೆ‌ ಕಾರಣವೆನ್ನಲಾಗಿದೆ. ಯುವಕರ ಸಮಯಪ್ರಜ್ಞೆ

ಆಯತಪ್ಪಿ ನದಿಗೆ ಬಿದ್ದ ವೃದ್ಧ ವ್ಯಕ್ತಿ: ಸ್ಥಳೀಯ ಯುವಕರಿಂದ ರಕ್ಷಣೆ Read More »

ಕರಾವಳಿ

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಮಮ್ತಾಜ್‌ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್‌, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಹಿಂದೂ ದೇವಾಲಯಗಳಿಗೆ ಅದರದ್ದೇ ಆದ ನಿಯಮಗಳಿವೆ ಆದ್ದರಿಂದ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜವೇ ನಿರ್ವಹಿಸಬೇಕಾಗಿದ್ದು ಎಲ್ಲಾ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಬೇಕೆಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಇತರ ಧರ್ಮಿಯರಲ್ಲಿ ಅವರ ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಜವಾಬ್ದಾರಿಯನ್ನು ಅವರ ಸಮುದಾಯಕ್ಕೆ ನೀಡಲಾಗಿದೆ. ನಮ್ಮ ದೇಶದಲ್ಲಿ ಹಿಂದೂ ದೇವಾಲಯಗಳು ಮಾತ್ರ ಸರ್ಕಾರದ ಕಪಿಮುಷ್ಠಿಯಲ್ಲಿವೆ. ಹಿಂದೂಗಳಿಗೆ ಅವರದ್ದೇ

ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹವು ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರದಂದು ಬೆಳಗ್ಗೆ ಪತ್ತೆಯಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೇ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು

ನಾಪತ್ತೆಯಾಗಿದ್ದ ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 07. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಅವರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ.

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ Read More »

ಕರಾವಳಿ
crime, arrest, suspected

ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 07. ಮಾದಕ ವಸ್ತು ಎಲ್‌ಎಸ್‌ಡಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮೂಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್ ಮತ್ತು ಮಹಮ್ಮದ್ ನಿಹಾಲ್ ಎಂದು ಗುರುತಿಸಲಾಗಿದೆ. ಬಂಧಿತರು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ ಕಾರು ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.  

ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..! Read More »

ಕರಾವಳಿ
Scroll to Top