ಕರಾವಳಿ

ಮಂಗಳೂರು: ಸಿಎಂ ಗೆ ತಪ್ಪಿನ ಅರಿವಾದಂತಿದೆ-ಸಂಸದ ಚೌಟ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸಿಎಂ ಸಿದ್ದರಾಮಯ್ಯ ಅವರು 14 ಸೈಟ್‌ ವಾಪಸ್‌ ಕೊಟ್ಟಿರುವುದು ಅವರಿಗೆ ಬುದ್ಧಿ ಬಂದ ಹಾಗೆ ಕಾಣುತ್ತದೆ. ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜೀನಾಮೆ ಕೊಡಲಿ ಎಂದು ಸಂಸದ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.  ಸಿಎಂ ಅವರು ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸಂವಿಧಾನದ ಆಶಯಗಳಿಗೆ ಗೌರವ ಕೊಡಲಿ. ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಒಂದಿಂಚು ಅಭಿವೃದ್ಧಿ ಇಲ್ಲದೆ ಜನ ಕಂಗೆಟ್ಟಿದ್ದಾರೆ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ […]

ಮಂಗಳೂರು: ಸಿಎಂ ಗೆ ತಪ್ಪಿನ ಅರಿವಾದಂತಿದೆ-ಸಂಸದ ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮರ್ಧಾಳ ಜೀವನ್ ಜ್ಯೋತಿ ವಿಶೇಷ ಶಾಲೆಯಲ್ಲಿ ಉಚಿತ ಹೋಮಿಯೋಪತಿ, ಫಿಸಿಯೋಥೆರಪಿ, ಸ್ಪೀಚ್ ಥೆರಪಿ ಆರೋಗ್ಯ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಅ.03. ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆ ಮರ್ಧಾಳ, ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ ಹೋಮಿಯೋಪತಿ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ವಿಭಾಗದ ಜಂಟಿ ಆಶ್ರಯದಲ್ಲಿ ಉಚಿತ ಹೋಮಿಯೋಪತಿ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ಆರೋಗ್ಯ ಶಿಬಿರವು ಅಕ್ಟೋಬರ್ 05 ಶನಿವಾರದಂದು ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯಲ್ಲಿ ನಡೆಯಲಿದೆ. ಮಕ್ಕಳ ರೋಗನಿರೋಧಕ ಶಕ್ತಿಯನ್ನು ಸುಧಾರಿಸುವುದು, ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸುವುದು, ಹುಳದ ಸಮಸ್ಯೆಗಳು, ಮಕ್ಕಳ ಅಲರ್ಜಿ, ವಾಂತಿ – ಭೇದಿ,

ಮರ್ಧಾಳ ಜೀವನ್ ಜ್ಯೋತಿ ವಿಶೇಷ ಶಾಲೆಯಲ್ಲಿ ಉಚಿತ ಹೋಮಿಯೋಪತಿ, ಫಿಸಿಯೋಥೆರಪಿ, ಸ್ಪೀಚ್ ಥೆರಪಿ ಆರೋಗ್ಯ ಶಿಬಿರ Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸೈಂಟ್ ಜೋಕಿಮ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜಯಂತಿಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿ’ಸೋಜ  ಅವರು ರಾಷ್ಟ್ರೀಯತೆ ,ತ್ಯಾಗ, ಸತ್ಯ ಹಾಗೂ ಅಹಿಂಸೆಯ ಮಾರ್ಗ ಇಂದಿನ ಯುವ ಪೀಳಿಗೆಗೆ ಅತಿ ಅಗತ್ಯವಾದ ಮೌಲ್ಯಗಳಾಗಿದೆ; ಆದ್ದರಿಂದ ಇಂತಹ ಮಹಾತ್ಮರ ಜಯಂತಿಯ ಆಚರಣೆ ಉದ್ದೇಶವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಅರ್ಥೈಸಿಕೊಂಡು ಅನುಸರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.ಮಹಾತ್ಮ ಗಾಂಧೀಜಿ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ Read More »

ಕರಾವಳಿ

ಅರಂತೋಡು ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಪುರಸ್ಕಾರ

(ನ್ಯೂಸ್ ಕಡಬ) newskadaba.com ಅರಂತೋಡು, ಅ. 02.  ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜನಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಸಚಿವಾಲಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ  ಕಾರ್ಯನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ0ತೋಡು ಗ್ರಾಮ ಪಂಚಾಯತಿನ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲನ್ ಮುಗಿಲನ್ ಅವರು ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ

ಅರಂತೋಡು ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಪುರಸ್ಕಾರ Read More »

ಕರಾವಳಿ

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಎನ್ಎಸ್ಎಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಅ. 02.  ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ  ಎನ್ಎಸ್ಎಸ್ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಗಿಡಕ್ಕೆ ನೀರು ಎರೆಯುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಚಾಲನೆ ನೀಡಿ, ಎನ್ಎಸ್ಎಸ್ ಸ್ಥಾಪನೆಯ ಗುರಿ ಉದ್ದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಎನ್ಎಸ್ಎಸ್ ವಾರ್ಷಿಕ ಶಿಬಿರದ ಆಯೋಜನೆ ಕುರಿತು ಮಾಹಿತಿ ನೀಡಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಎನ್ಎಸ್ಎಸ್ ದಿನಾಚರಣೆ Read More »

ಕರಾವಳಿ

ಪಂಪ್ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್ ಮೌಲಿದ್ ಸಂಗಮ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.02) : ಮಸ್ಜಿದ್ ತಕ್ವಾ ಪಂಪ್‌ವೆಲ್ ಇದರ ಆಶ್ರಯದಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಮಗ್ರಿಬ್ ನಮಾಝ್‌ ನ ಬಳಿಕ ಬೃಹತ್ ಮೌಲಿದ್ ಸಂಗಮ ನಡೆಯಿತು. ಮಸ್ಜಿದ್ ಅಧ್ಯಕ್ಷರಾದ ಡಾ. ಹಾಜಿ ಯೇನಪೋಯ ಅಬ್ದುಲ್ಲ ಕುಞ್ಞಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ‌ಯ್ಯಿದ್ ಅಶ್ರಫ್ ತಂಙಳ್ ಆದೂರು (ಚೇರ್ಮನ್ ಎಜು ಪಾರ್ಕ್ ಮುಡಿಪು) ದುಆ ನೆರವೇರಿಸಿದರು. ಡಾ. ಹಾಜಿ ಎಸ್ಎಂ ರಶೀದ್ ಅವರು ಸ್ವಾಗತ ಕೋರಿದರು. ಯಾಸಿರ್ ಸಖಾಫಿ ಅಲ್ ಅಝ್‌ಹರಿ ಸಂದೇಶ ಭಾಷಣ

ಪಂಪ್ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್ ಮೌಲಿದ್ ಸಂಗಮ Read More »

ಕರಾವಳಿ
crime, arrest, suspected

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 02.  ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24). ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34) ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22), ಮತ್ತು

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02.  ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ನವಾಫ್ ಇಸ್ಮಾಯಿಲ್ (9) ಎಂದು ಗುರುತಿಸಲಾಗಿದ್ದು, ಈ ಪ್ರದೇಶದ ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರ. ಸಂಬಂಧಿಯೊಬ್ಬರು ಅಂಗಳದಲ್ಲಿ ಕಾರನ್ನು ಓಡಿಸುತ್ತಿದ್ದಾಗ ವಾಹನದ ಕ್ಲಚ್ ಜಾಮ್ ಆಗಿದ್ದು ಅದು ನವಾಫ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕನಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 01.  ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಾಸ್ ಇಲ್ಲವೆಂದು ವಿದ್ಯಾರ್ಥಿಯನ್ನು ಅರ್ಧದಲ್ಲೇ ಇಳಿಸಿ ಅವಮಾನಿಸಿದ ನಿರ್ವಾಹಕ: ಆರೋಪ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 01.  ಇಲ್ಲಿನ ಖಾಸಗಿ ವಿದ್ಯಾ ಸಂಸ್ಥೆಯ ಹನ್ನೊಂದರ ಹರೆಯದ ವಿದ್ಯಾರ್ಥಿ ಮನೆಗೆ ತೆರಳುವ ಸಂದರ್ಭದಲ್ಲಿ ಬಸ್ ಪಾಸ್ ಹೊಂದಿರದ ಕಾರಣಕ್ಕೆ ದಾರಿ ಮಧ್ಯದಲ್ಲಿಯೇ ವಿದ್ಯಾರ್ಥಿಯನ್ನು ಬಸ್ಸಿನಿಂದ ಇಳಿಸಿ ಅವಮಾನಿಸಿದ ಘಟನೆ ಬಗ್ಗೆ ಬಾಲಕನ ಹೆತ್ತವರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಉಪ್ಪಿನಂಗಡಿ ಬಸ್ ನಿಲ್ದಾಣದಿಂದ ಹೊರಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕೆ ಎ19 ಎಫ್ 3276 ರನ್ನೇರಿದ್ದ ಈ ವಿದ್ಯಾರ್ಥಿಯು ಬಸ್ ನಿರ್ವಾಹಕ ಬಂದು ಬಸ್ ಪಾಸ್

ಪಾಸ್ ಇಲ್ಲವೆಂದು ವಿದ್ಯಾರ್ಥಿಯನ್ನು ಅರ್ಧದಲ್ಲೇ ಇಳಿಸಿ ಅವಮಾನಿಸಿದ ನಿರ್ವಾಹಕ: ಆರೋಪ Read More »

ಕರಾವಳಿ
Scroll to Top