ಕರಾವಳಿ

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ)newskadaba.com, ಲಕ್ನೋ(ಅ.01) : ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್‍ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್ 29 ರಂದು ರಾನ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್ Read More »

ಕರಾವಳಿ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 01.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024 Read More »

ಕರಾವಳಿ

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 01. ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಧರ್ಮಸ್ಥಳಧ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಕೈಗೊಂಡಿರುವ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅ.2ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶವೊಂದನ್ನು ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ನ ಜಿಲ್ಲಾದ್ಯಕ್ಷ ನವೀನ್‌ಚಂದ್ರ ಶೆಟ್ಟಿ ರಟ್ಟಾಡಿ ತಿಳಿಸಿದ್ದಾರೆ. ಅ.2ರಂದು ಮುಂಜಾನೆ 9:30ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ಜನಜಾಗೃತಿ ಜಾಥಾ ಪ್ರಾರಂಭಗೊಳ್ಳಲಿದ್ದು, 9ರಿಂದ

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ Read More »

ಕರಾವಳಿ

ಸಿಡಿಲು ಬಡಿದು ಮನೆಗೆ ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 01. ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸಿಡಿಲು ಬಡಿದ ಸಂದರ್ಭ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆದುಂಡು ಬರಲು ತೆರಳಿದ್ದರು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ ಎನ್ನಲಾಗಿದೆ.

ಸಿಡಿಲು ಬಡಿದು ಮನೆಗೆ ಅಪಾರ ಹಾನಿ Read More »

ಕರಾವಳಿ

ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ನಗರದ ಹೊರವಲಯದ ಎದುರು ಪದವಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪತ್ತೆಯಾಗಿದೆ. ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿ ದುಡಿಯುತ್ತಿದ್ದ ಅವರ ಆತ್ಯಹತ್ಯೆಗೆ ನಿಖರ ಕಾರಣ ತಿಳಿಯಬೇಕಾಗಿದೆ. ಸ್ಥಳಕ್ಕೆ ಕಾವೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಟೋ ಚಾಲಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಉರ್ವಸ್ಟೋರಿನ ಅನೀಶ್ (19) ಅವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಅನೀಶ್ ಅವರ ಮೃತದೇಹವನ್ನು ಬೆಂಗ್ರೆಯ ಮುಳುಗು ತಜ್ಞರು ಮೇಲೆಕ್ಕೆತ್ತಿದ್ದಾರೆ. ಕೊಟ್ಟಾರ ಚೌಕಿಯ ಸುಮಿತ್ (20) ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಯುವ ವಿದ್ವಾಂಸ ರವೂಫ್ ಇರ್ಫಾನಿ ಅಲ್ ಮಖ್ದೂಮಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಅ.01. ತಾಲೂಕಿನ ಮರ್ಧಾಳ ಚಾಕಟೆಕೆರೆ ನಿವಾಸಿ ಹಮೀದ್ ಮುಸ್ಲಿಯಾರ್ ಎಂಬವರ ಪುತ್ರ ಯುವ ವಿದ್ವಾಂಸ ಅಬ್ದುಲ್ ರವೂಫ್ ಇರ್ಫಾನಿ ಅಲ್ ಮಖ್ದೂಮಿ (30) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಕುಂಬ್ಳೆ, ಫರಂಗಿಪೇಟೆ ಹಾಗೂ ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯಲ್ಲಿ ಸಹಾಯಕ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದ್ದ ಇವರು ತಂದೆ, ತಾಯಿ, ಪತ್ನಿ, ಒಂದೂವರೆ ವರ್ಷದ ಪುಟ್ಟ ಮಗು ಸೇರಿದಂತೆ ಬಂಧು ಬಳಗ ಹಾಗೂ ಅಪಾರ ಶಿಷ್ಯ

ಕಡಬ: ಯುವ ವಿದ್ವಾಂಸ ರವೂಫ್ ಇರ್ಫಾನಿ ಅಲ್ ಮಖ್ದೂಮಿ ನಿಧನ Read More »

ಕರಾವಳಿ

ಮೃತ ವ್ಯಕ್ತಿ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ.30. ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಶೋಕ್ ಜು.13ರಂದು ಮೃತಪಟ್ಟಿದ್ದರೂ ಮೃತರ ಅಣ್ಣ ಮೋಹನ್‌ರವರ ಮಗ ದಿನೇಶ್ ಎಂಬಾತನು 2020ರ ಜು.15ರಿಂದ ಆ.18ರ ಮಧ್ಯಾವಧಿ ಯಲ್ಲಿ ಮೃತ ಅಶೋಕ್ ಅವರಿಗೆ ಸೇರಿದ ವಿವಿಧ ಕಂಪೆನಿಗಳ ಸೇರಿದ ಒಟ್ಟು 4,24,90,548.90ರೂ. ಮೌಲ್ಯದ 14,970 ಪೇರುಗಳನ್ನು ಮೃತರ ಮೊಬೈಲ್ ಸಂಖ್ಯೆ ಮತ್ತು ಈ-ಮೇಲ್ ಐ.ಡಿ ದುರ್ಬಳಕೆ

ಮೃತ ವ್ಯಕ್ತಿ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆಯ ತಪ್ಪಿ ಬಾವಿಗೆ ಬಿದ್ದು  ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ.30. ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯ ತಪ್ಪಿ ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನವೀನ್ ಬೆಳ್ಚಾಡ(48) ಎಂದು ಗುರುತಿಸಲಾಗಿದೆ. ನವೀನ್ ಅವರು ರವಿವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಆವರಣ ಗೋಡೆಯನ್ನು ಸ್ವಚ್ಛಗೊಳಿಸುತ್ತಿದ್ದರು.ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆಯ ತಪ್ಪಿ ಬಾವಿಗೆ ಬಿದ್ದು  ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top