ಕರಾವಳಿ

’ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ’- ಕೆ.ಎಂ.ಹೆಗ್ಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30. ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದ್ದಾರೆ. ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ರವಿವಾರ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾಪಾರ್ಕ್‌ನಲ್ಲಿ ನಡೆದ ‘ಪಚ್ಚೆ ಸಿರಿ’ ತುಳು […]

’ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ’- ಕೆ.ಎಂ.ಹೆಗ್ಡೆ Read More »

ಕರಾವಳಿ
crime, arrest, suspected

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.30. ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು ಗುರುತಿಸಲಾಗಿದೆ. ಈತ ಕಚೇರಿಯ ಎದುರಿನ ಕಬ್ಬಿಣದ ಶೆಟರ್‌ನ ಬೀಗವನ್ನು ಮುರಿದು ಒಳನುಗ್ಗಿದ್ದು, ಆಫೀಸಿನ ಗೋಡೆಯ ಮೇಲೆ ಇರಿಸಿದ್ದ ಸಿಸಿ ಕ್ಯಾಮರಾವನ್ನು ಒಡೆದು ಹಾಕಿದ್ದಾನೆ. ಬಳಿಕ ಒಳಗೆ ಹೋಗಿ ಕಚೇರಿಯ ಕಬ್ಬಿಣದ ಕಪಾಟಿನ

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.30. ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಸೆ. 27ರಂದು ಮೃತಪಟ್ಟಿದ್ದಾರೆ. ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.30. ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್ ನಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕನನ್ನು  ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಎಂದು ಗುರುತಿಸಲಾಗಿದೆ. ಸೋಹಾನ್ ಹಬೀಬ್ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್ ಹಬೀಬ್ ದಿಢೀರ್ ನಾಪತ್ತೆಯಾಗಿದ್ದಾನೆ. ಈ ವೇಳೆ ಸಂಬಂಧಿಕರು ಮನೆಯೊಳಗೆ ಹಾಗೂ ಪರಿಸರದ ಮನೆಗಳಲ್ಲಿ ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಬಾಲಕ ಪತ್ತೆಯಾಗದ ಹಿನ್ನಲೆಯಲ್ಲಿ ಸಂಬಂಧಿಕರು, ಶೋಧ ನಡೆಸಿದಾಗ ಮನೆ ಸಮೀಪದ 200 ಮೀಟರ್

ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28. ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿವಿಧಾನಸೌಧದ ಮುಂಭಾಗ ನಡೆಯಿತು. ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಸೇರಿದಂತೆ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ 2-3 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಪ್ರತಿಭಟನೆಗಿಂತ ಮೊದಲು ಪ್ರತಿಭಟನಾಕಾರರು ನಗರದ ಬಲ್ಮಠದ ಸಿಎಸ್ಐ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಜಾಥಾ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್

ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಬೃಹತ್ ಪ್ರತಿಭಟನೆ Read More »

ಕರಾವಳಿ

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸೆ. 28. ಕಾಡಾನೆ ದಾಳಿಯಿಂದಾಗಿ ಅಪಾರ ಪ್ರಮಾಣದ ಕೃಷಿ ನಾಶವಾದ ಘಟನೆ ಸುಳ್ಯ ತಾಲೂಕಿನ ಅಡ್ಕಬಳೆ ಎಂಬಲ್ಲಿ ಸಂಭವಿಸಿದೆ. ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ ತೋಟಕ್ಕೆ ದಾಳಿ ನಡೆಸಿದ್ದ ಆನೆಗಳು ಇದೀಗ ಅರಂತೋಡು ಪರಿಸರದಲ್ಲಿ ಕೃಷಿಗೆ ಹಾನಿ ಮಾಡಿದೆ. ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು. ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಎಲ್ಲರೂ ಮೂರೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮರಳು ಮಾಫಿಯಾಗಳೊಂದಿಗೆ ಕೈಜೋಡಿಸುತ್ತಿರುವ ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು. ಈ ಪ್ರತಿಭಟನೆಯ ಬಳಿಕ ಮರಳುಗಾರಿಕೆ ನಿಂತಲ್ಲಿ ಜನಪ್ರತಿನಿಧಿಗಳಿಗೆ ಜೈಕಾರ ಹಾಕುತ್ತೇವೆ. ಇಲ್ಲದಿದ್ದಲ್ಲಿ ಅವರಿಗೂ ಧಿಕ್ಕಾರ ಕೂಗುತ್ತೇವೆ‌. ಅದೇ ರೀತಿ ಕೊಣಾಜೆ, ಉಳ್ಳಾಲ ಸೇರಿದಂತೆ

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿ.ಎ. ಫಾರ್ಮಸಿಯ ಕಾಲೇಜು ವತಿಯಿಂದ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ದೇರಳಕಟ್ಟೆ, ಸೆ. 27. ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ವತಿಯಿಂದ “ವಿಶ್ವ ಔಷಧ ತಜ್ಞರ ದಿನ”ದ ಅಂಗವಾಗಿ ನರಿಂಗಾನ ಗ್ರಾಮದ ಕಲ್ಲೊರ ಕೋಡಿಯಲ್ಲಿರುವ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆಯ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು. ಬಳಿಕ ಸೋಮೇಶ್ವರದಲ್ಲಿರುವ ಪಶ್ಚಿಮ್ ರಿಹಾಬಿಲೇಶನ್ ಸೆಂಟರ್ ಮಾನಸಿಕ ಪುನಶ್ಚೇತನ ಕೇಂದ್ರದಲ್ಲಿರುವ ಆಶ್ರಮ ನಿವಾಸಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿ, ಆರೋಗ್ಯ ಸಂರಕ್ಷಣೆಯ ಮಾಹಿತಿಗಳನ್ನು ನೀಡಿ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು.

ಪಿ.ಎ. ಫಾರ್ಮಸಿಯ ಕಾಲೇಜು ವತಿಯಿಂದ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ವಿತರಣೆ Read More »

ಕರಾವಳಿ

ಅ.02 ರಂದು “ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ” ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 28. ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ನ ಆಶ್ರಯದಲ್ಲಿ “ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ” ಅ. 02 ರಂದು ಲೋಕಾರ್ಪಣೆಗೊಳ್ಳಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸ್ನೇಹಾಲಯದ ಮ್ಯಾನೇಜಿಂಗ್ ಟ್ರಸ್ಟಿ ಜೋಸೆಫ್ ಕ್ರಾಸ್ತಾ ಅವರು, ಅನಿವಾಸಿ ಉದ್ಯಮಿ ಮೈಕಲ್ ಡಿ ಸೋಜ ಅವರು ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರವನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡೊ. ಪೀಟರ್ ಪಾವ್ಲ್ ಸಲ್ದಾನ್ಹಾ ಇವರು ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಅ.02 ರಂದು “ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ” ಲೋಕಾರ್ಪಣೆ Read More »

ಕರಾವಳಿ

ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು

(ನ್ಯೂಸ್ ಕಡಬ) newskadaba.com ಸೆ. 28. ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಹೊತ್ತಿ ಬೆಂಕಿ ಅವಘಾತಕ್ಕೀಡಾಗಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು Read More »

ಕರಾವಳಿ
Scroll to Top