ಕರಾವಳಿ

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು

(ನ್ಯೂಸ್ ಕಡಬ) newskadaba.com ಸೆ. 28. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ನಡೆದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಸೇರಿದಂತೆ 3 ಪ್ರತ್ಯೇಕ ವಿಭಾಗಗಳಲ್ಲಿ ನಡೆದ ಈ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಹುಮಾನ ವಿಜೇತರಿಗೆ ಅಕ್ಟೋಬರ್ 2ರಂದು ಮಂಗಳೂರು ಪುರಭವನ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆಯುವ  ಗಾಂಧಿ ಜಯಂತಿ […]

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು Read More »

ಕರಾವಳಿ

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 28. 2024-25ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಮೀನುಗಾರರ/ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10ನೇ ತರಗತಿಯವರಿಗೆ (ಹೆಣ್ಣುಮಕ್ಕಳಿಗೆ ಮಾತ್ರ) ಮತ್ತು ಎಸ್.ಎಸ್.ಎಲ್.ಸಿ. ಪೂರ್ಣಗೊಳಿಸಿದ (ಹೆಣ್ಣು/ಗಂಡು ಮಕ್ಕಳು) ಹಾಗೂ ಕರ್ನಾಟಕ ರಾಜ್ಯ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು /ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ ವರೆಗೆ (ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಎ./ಬಿ.ಎಸ್.ಸಿ/ಬಿ.ಕಾಂ.ಇತ್ಯಾದಿ/ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಪಾರ್ಮ್/ನರ್ಸಿಂಗ್/ಎಂ.ಬಿ.ಬಿ.ಎಸ್/ ಬಿ.ಇ./ಬಿ.ಟೆಕ್ ಮತ್ತು ಎಲ್ಲಾ ವೃತ್ತಿಪರ : ಸ್ನಾತಕೋತ್ತರ ಕೋರ್ಸ್‍ಗಳು) ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ಮೀನುಗಾರರ / ಮೀನು ಕೃಷಿಕರ

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ Read More »

ಕರಾವಳಿ

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 27. ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.  

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಸಾಲ ಮರುಪಾವತಿ ವಿಚಾರವಾಗಿ ಉದ್ಯಮಿಯೊಬ್ಬರ ಮನೆಗೆ ಹೋಗಿದ್ದ ರಾಷ್ಟ್ರೀಕೃತ ಬ್ಯಾಂಕ್ ನ ರಿಲೇಶನ್ ಶಿಪ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪ್ರಕರಣದ ಪಿರ್ಯಾದುದಾರರಾದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಹೆಚ್.ಸಿ ನೀಡಿರುವ ದೂರಿನಂತೆ, ‘ಚೈತನ್ಯ ಎಂಬವರು ಪುತ್ತೂರಿನ ಕೋರ್ಟ್ ರಸ್ತೆಯ‍ಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರೇಷನ್ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ ಆರೋಪ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ಕೆಯ್ಯೂರಿನಿಂದ ವರದಿಯಾಗಿದೆ. ಸೆ.27ರ ಶುಕ್ರವಾರದಂದು ಬೆಳಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ ಪಡೆಯಲು ಕೆಯ್ಯೂರು ರೇಷನ್ ಅಂಗಡಿಗೆ ಬಂದಿದ್ದು ಈ ವೇಳೆ ಅಂಗಡಿ ಸಿಬ್ಬಂದಿ ಮಹಿಳೆಯ ಮೇಲೆ ಕೈ ಹಾಕಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಮಹಿಳೆಯು ಸಂಪ್ಯ

ರೇಷನ್ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ ಆರೋಪ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಕಡಬ ತಾಲೂಕಿನ ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕೆಮ್ಮಾರ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಸೇರಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸೆ. 28. ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ನವದೆಹಲಿಯ ವಿಗ್ಯಾನ್‌ ಭವನದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ ಕರ್ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್ ಡಾಕಯ್ಯ

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ Read More »

ಕರಾವಳಿ

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ಆ್ಯಂಟಿ ಪೊಲ್ಯೂಶನ್ ಡ್ರೈವ್ ಫೌಂಡೇಶನ್ (ಎಪಿಡಿಎಫ್) ನೇತೃತ್ವದಲ್ಲಿ ಎಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ನ ಸಹಭಾಗಿತ್ವದಲ್ಲಿ ಮಂಗಳೂರಿನ ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶದ ಆರೋಗ್ಯ ತಪಾಸಣೆಯನ್ನು ಸೆ.29ರಂದು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಡಿಪಿಎಫ್ ನ ಸ್ಥಾಪಕ ಹಾಗೂ ಸಿಇಒ ಅಬ್ದುಲ್ಲಾ ಎ. ರಹ್ಮಾನ್‌, ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಅತೀ ಹೆಚ್ಚಾಗಿ ಬಾಧೆಗೆ ಒಳಗಾಗುವವರು ಟ್ರಾಫಿಕ್ ಪೊಲೀಸರಾಗಿರುವ ಕಾರಣ ಅವರ ಆರೋಗ್ಯದ ತಪಾಸಣೆಗೆ ನಿರ್ಧರಿಸಲಾಗಿದೆ ಎಂದರು.

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ Read More »

ಆರೋಗ್ಯ ಮಾಹಿತಿ, ಕರಾವಳಿ

ಕಡಬ: ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ – ಸಂಘಕ್ಕೆ 3.44 ಲಕ್ಷ ರೂ. ಲಾಭ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ಕೊಯಿಲ ಗ್ರಾಮದ ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆಯು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷೆ ಸುಶೀಲ ಬಿ.ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ 1.13 ಕೋಟಿ ರೂ. ವ್ಯವಹಾರ ನಡೆಸಿ 3.44 ಲಕ್ಷ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.20 ಡಿವಿಡೆಂಡ್ ಹಾಗೂ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 71 ಪೈಸೆ ಬೋನಸ್ ನೀಡಲಾಗುವುದು ಎಂದರು. ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ

ಕಡಬ: ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ – ಸಂಘಕ್ಕೆ 3.44 ಲಕ್ಷ ರೂ. ಲಾಭ Read More »

ಕರಾವಳಿ
Scroll to Top