ಕರಾವಳಿ

ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಸೆ. 26. ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್(75) ಇಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸೆ.4ರಂದು ರಾಷ್ಟ್ರೀಯ ಹೆದ್ದಾರಿಯ ನೀಲೇಶ್ವರ ಕರುವೆಚ್ಚರಿ ಪೆಟ್ರೋಲ್ ಬಂಕ್ ಸಮೀಪ ಕುಂಞಿಕಣ್ಣನ್ ಸಂಚರಿಸುತ್ತಿದ್ದ ಕಾರು ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿತ್ತು. ಈ ವೇಳೆ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ […]

ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ನೂತನ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ (CASK) ಇದರ ನೂತನ ಅಧ್ಯಕ್ಷರಾಗಿ ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಆಯ್ಕೆಯಾಗಿದ್ದಾರೆ. CASK 111ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಉಪಾಧ್ಯಕ್ಷರಾಗಿ ಮಾರ್ಜೋರಿ ಟೆಕ್ಸೀರಾ ಮತ್ತು ಡಾ.ರೋಹನ್ ಮೋನಿಸ್, ಕಾರ್ಯದರ್ಶಿಯಾಗಿ ಪೀಟರ್ ಪಿಂಟೋ, ಜೊತೆ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಮತ್ತು ಕೋಶಾಧಿಕಾರಿಯಾಗಿ ರೊನಾಲ್ಡ್ ಮೆಂಡೋನ್ಸಾ ಆಯ್ಕೆಯಾದರು. ಆಡಳಿತ ಮಂಡಳಿಯ ಸದಸ್ಯರಾಗಿ ಇಯಾನ್ ಲೋಬೊ, ಇರ್ವಿನ್ ಲೋಬೊ, ಡಾರಿಲ್

ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ನೂತನ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ Read More »

ಕರಾವಳಿ

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಈ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ.

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ Read More »

ಕರಾವಳಿ

ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸೆ. 25. ISTE, ನವದೆಹಲಿ ಮತ್ತು ISTE ಕರ್ನಾಟಕ ಶಾಖೆ ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 27ರಂದು “4th ISTE State Level Student Convention for Polytechnics 2024” ಎಂಬ ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನವು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನಕ್ಕೆ ISTE ಕಾರ್ಯಕಾರಿ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಆಗಮಿಸುತ್ತಿದ್ದು, ರಾಜ್ಯದ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪಾಲಿಟೆಕ್ನಿಕ್ ಗಳ  ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು ಎಂದು ಕರ್ನಾಟಕ (ಸರ್ಕಾರಿ)

ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ Read More »

ಉದ್ಯೋಗ, ಕರಾವಳಿ

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 26. ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ

(ನ್ಯೂಸ್ ಕಡಬ) newskadaba.com ಸೆ. 25. ಹಾಸನದ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಪಾಲನಾ ಚಟುವಟಿಕೆಗಳ ಕುರಿತು ವಿವಿಧ ತರಬೇತಿಯನ್ನು ಅಕ್ಟೋಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯ ವಿವರ ಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಅಕ್ಟೋಬರ್ 3ರಿಂದ 4ರವರೆಗೆ ನಡೆಯಲಿದೆ. ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಅಕ್ಟೋಬರ್ 8 ರಿಂದ 9ರ ವರೆಗೆ, ಕೋಳಿ ಸಾಕಾಣಿಕೆ ತರಬೇತಿ 18ರಿಂದ 19ರ ವರೆಗೆ, ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ Read More »

ಕರಾವಳಿ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಪುತ್ತೂರಿನಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆ ತರುತ್ತಿದ್ದ ಆ್ಯಂಬುಲೆನ್ಸ್ ಪಡೀಲು ಸಮೀಪ ಪಲ್ಟಿಯಾಗಿ ಗಂಭೀರ ಗಾಯಗೊಂಡ ರೋಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ. ಮೃತರನ್ನು ಕಡಬ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ. ದಾಸಪ್ಪ ರೈ ಅವರ ಪತ್ನಿ ನಳಿನಿ ರೈ (54), ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ.24ರಂದು ತಡರಾತ್ರಿ 1:30ರ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪರಿಷತ್ ಚುನಾವಣೆ- ಇಂದು ಅಧಿಸೂಚನೆ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆಪ್ಟೆಂಬರ್ 26ರಂದು ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅಕ್ಟೋಬರ್ 4 ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಪರಿಷತ್ ಚುನಾವಣೆ- ಇಂದು ಅಧಿಸೂಚನೆ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ. ನಾಮಪತ್ರ

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕೇಂದ್ರ ಪೆಟ್ರೋಲಿಯಂ ಸಚಿವರಿಂದ ದ.ಕ. ಸಂಸದ ಕ್ಯಾ. ಚೌಟ ಅವರ JBF-GMPL ಸಮಸ್ಯೆ ಬಗೆಹರಿಸಿದ ಅವಿರತ ಪ್ರಯತ್ನಕ್ಕೆ ಶ್ಲಾಘನೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರಿನ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝೆಡ್‌) ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಪಿಡಿಎಫ್‌ ಉದ್ಯೋಗಸ್ಥರನ್ನು ಜಿಎಂಪಿಎಲ್‌ (ಗೈಲ್‌) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಶ್ಲಾಘಿಸಿದ್ದಾರೆ. ಜೆಬಿಎಫ್‌-ಜಿಎಂಪಿಎಲ್‌(ಗೈಲ್‌) ಸಮಸ್ಯೆಯನ್ನು ಕೇಂದ್ರ ಸರ್ಕಾರವು ಕೇವಲ 40 ದಿನಗಳಲ್ಲಿ

ಕೇಂದ್ರ ಪೆಟ್ರೋಲಿಯಂ ಸಚಿವರಿಂದ ದ.ಕ. ಸಂಸದ ಕ್ಯಾ. ಚೌಟ ಅವರ JBF-GMPL ಸಮಸ್ಯೆ ಬಗೆಹರಿಸಿದ ಅವಿರತ ಪ್ರಯತ್ನಕ್ಕೆ ಶ್ಲಾಘನೆ Read More »

ಕರಾವಳಿ
Scroll to Top