ಕರಾವಳಿ

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 25. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೋರ್ವರು ಮೃತಪಟ್ಟು, ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಮಂಗಳೂರು ಪಡೀಲು ಸಮೀಪ ನಡೆದಿದೆ. ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಎಂದು ಗುರುತಿಸಲಾಗಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ […]

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆ ಅಂಗವಾಗಿ ಕಾರಾಗೃಹದೊಳಗಿನ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ‘ಒಬ್ಬರು ಒಬ್ಬರಿಗೆ ಕಲಿಸಿ’ ಎಂಬ ಕಾರ್ಯಕ್ರಮವು ನಗರದ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಕ್ಷರತಾ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಹಿರಿಯ ಸಾಹಿತಿ ಇರಾ  ನೇಮು ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  ಅನಕ್ಷರತೆ ಎಂಬುದು ಚಂದ್ರ ತಾರೆಗಳಿಲ್ಲದ ಕತ್ತಲೆಯ ಬಾನು, ದೇಶದ ಅಭಿವೃದ್ಧಿಗೆ ಅನಕ್ಷರತೆ ಮಾರಕ ಎಂದರು. ಕಾರ್ಯಕ್ರಮದ

ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ Read More »

ಕರಾವಳಿ

ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 25. ಡಿಸೆಂಬರ್ 3ರಂದು ನಡೆಯಲಿರುವ “ವಿಶ್ವ ವಿಕಲಚೇತನರ ದಿನಾಚರಣೆ”ಯಂದು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ/ ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ  ರಾಜ್ಯ  ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಂಬಂಧಿಸಿದ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು  ಅಥವಾ ಇಲಾಖೆಯ ವೆಬ್‍ಸೈಟ್ www.dwdsc.kar.nic.in ನಲ್ಲಿ  ಪಡೆಯಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15

ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅ.02ರಂದು ಗಾಂಧಿ ಜಯಂತಿ ಹಾಗೂ ವರ್ಷದ ವ್ಯಕ್ತಿ ಗೌರವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸೆ. 25. ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನ (ರಿ) ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವರ್ಷದ ವ್ಯಕ್ತಿ ಗೌರವ 2024 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಅಕ್ಟೋಬರ್ 2 ರಂದು ಬುಧವಾರ ನಗರದ ಟಾಗೋರ್ ಪಾರ್ಕಿನಲ್ಲಿರುವ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9:30ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಬೆಳಿಗ್ಗೆ 10.15ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಿಕ್ಷಣ ತಜ್ಞರು ಮತ್ತು ಚಿಂತಕರಾದ ಪ್ರೊಫೆಸರ್ ಕೆ.ಇ ರಾಧಾಕೃಷ್ಣ ಮುಖ್ಯ ಭಾಷಣ

ಅ.02ರಂದು ಗಾಂಧಿ ಜಯಂತಿ ಹಾಗೂ ವರ್ಷದ ವ್ಯಕ್ತಿ ಗೌರವ ಪ್ರಶಸ್ತಿ ಪ್ರದಾನ Read More »

ಕರಾವಳಿ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್

(ನ್ಯೂಸ್ ಕಡಬ) newskadaba.com ಸೆ. 25. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ  ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ -ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್ Read More »

ಕರಾವಳಿ, ಕರ್ನಾಟಕ

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 (ನ್ಯೂಸ್ ಕಡಬ) newskadaba.com ಮಂಗಳೂರು(ಸೆ.25): ಕರಾವಳಿಯ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಬಳಿಕ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಎಸೆಯಲಾಗಿತ್ತು.

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಸೆ. 25. ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ.ಚೌಟ ಅವರು, ಹೈಕೋರ್ಟ್ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ Read More »

ಕರಾವಳಿ
Death, deadbody, Waterfall

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 25. ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ನಾಗೇಂದ್ರ (13) ಹಾಗೂ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ದುಡಿದು ಪರಿಸರದ ಜನರ ಪ್ರೀತಿಗೆ ಪಾತ್ರರಾಗಿ ಇತ್ತೀಚೆಗೆ ನಿಧನರಾದ ಕಡಬ ಅಂಗಣ ಸುಂದರ ಗೌಡ ಅವರಿಗೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಮಹಿಳಾ ವೇದಿಕೆ ವತಿಯಿಂದ ನುಡಿನಮನ ಸಲ್ಲಿಕೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು. ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ Read More »

ಕರಾವಳಿ

ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25): ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ. ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ವಲಯ ನಾಡದೋಣಿ ಮೀನುಗಾರರ

ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ Read More »

ಕರಾವಳಿ
Scroll to Top