ಕರಾವಳಿ

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ ಕ್ಯಾ. ಚೌಟ ಅವರು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು […]

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ

ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಇಂಗ್ಲಿಷ್ ಸ್ಕೂಲ್ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮುಹಮ್ಮದ್ ರಿಫಾಯ್ ಕಾಟಿಪಳ್ಳ ಅವರಿಗೆ ಲಕ್ನೋದ ಸಿಟಿ ಮಾಂಟೆಸ್ಸರಿ ಸ್ಕೂಲ್ (ಸಿಎಂಎಸ್)ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಶಿಕ್ಷಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕೇರಳ, ಕರ್ನಾಟಕ, ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ಪರಿವರ್ತನಾಶೀಲ ಶಿಕ್ಷಣ ಮತ್ತು ವಿದ್ಯಾರ್ಥಿ ನಾಯಕತ್ವವನ್ನು ಸಶಕ್ತಗೊಳಿಸುವಲ್ಲಿ ರಿಫಾಯ್ ಅವರ ದಣಿವರಿಯದ ಪ್ರಯತ್ನಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.  

ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಸೆ. 25. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರನ್ನು ಚಲಾಯಿಸುತ್ತಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ವೇಗವಾಗಿ ಕಾರಿನ ಮುಂಭಾಗಕ್ಕೆ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಕಾರಿನ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 26ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ. ಕ. ಜಿಲ್ಲೆ, ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 26ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಘಟಿಸಲಾದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ,

ಸೆಪ್ಟೆಂಬರ್ 26ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು. ಸೆಪ್ಟೆಂಬರ್ 19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28ರ ವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮಗಳನ್ನು ಮತ್ತು ಪ್ರಚಾರ ಕಾರ್ಯವನ್ನು ಆಯೋಜಿಸುವಾಗ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರದಲ್ಲಿ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ Read More »

ಕರಾವಳಿ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೋಮವಾರದಂದು ನಡೆಯಿತು. ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಸುಧಾಕರ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್, ಮಂಗಳೂರು ಉತ್ತರ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course),  ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಸೆ. 24. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಆಯ್ಕೆಗಾಗಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ www.sw.kar.nic.in ನಲ್ಲಿ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಬಂಧನೆಗಳು: ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಕರಾವಳಿ

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ

(ನ್ಯೂಸ್ ಕಡಬ) newskadaba.com ಸೆ. 24. ಐತಿಹಾಸಿಕ ಹಿನ್ನೆಲೆಯುಳ್ಳ ಮೂಡುಬಿದಿರೆ ಅರಮನೆಯ ಹೆಬ್ಬಾಗಿಲು ಘನ ವಾಹನವೊಂದರ ಚಾಲಕನ ನಿರ್ಲಕ್ಷ್ಯಕ್ಕೆ ಹಾನಿಗೊಳಗಾಗಿದೆ. ತಮಿಳುನಾಡು ನೋಂದಣಿಯ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಮಾರಕವು ಭಾಗಶಃ ಹಾನಿಗೊಳಗಾಗಿದೆ. ಚಾಲಕನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. 700 ವರ್ಷಗಳ ಇತಿಹಾಸ ಹೊಂದಿರುವ ಮೂಡುಬಿದಿರೆ ಅರಮನೆಯು ಜೈನರ ಪರಂಪರೆಯ ಚೌಟರ ಮನೆತನದ ಆಧೀನದಲ್ಲಿದೆ.    

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ Read More »

ಕರಾವಳಿ
Scroll to Top