ಕರಾವಳಿ

ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್, ಕಡಬ ಝೋನ್, SYS, SSF, KCF ಸುನ್ನೀ ಸಂಘ ಕುಟುಂಬದ ಸಹಯೋಗದಲ್ಲಿ ಮೀಲಾದ್ ಸಂದೇಶ ಭಾಷಣ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮವು ಕಡಬ ಜಂಕ್ಷನ್ ನಲ್ಲಿ ನಡೆಯಿತು. ಡಾ| MSM ಝೈನಿ ಕಾಮಿಲ್ ಸಖಾಫಿ ಮೀಲಾದ್ ಸಂದೇಶ ಭಾಷಣ ಮಾಡಿದರು. ಸೈಯದ್ ಶಾಹುಲ್ ಹಮೀದ್ ತಂಙಳ್ ಮರ್ಧಾಳ ದುವಾ ನೆರವೇರಿಸಿದರು. ವೇದಿಕೆಯಲ್ಲಿ ಪ್ರಮುಖರಾದ ಪಿ.ಪಿ.ವರ್ಗೀಸ್, ಮೀರಾ ಸಾಹೇಬ್, ಡಾ.ತ್ರಿಮೂರ್ತಿ, ಸತೀಶ್ […]

ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ Read More »

ಕರಾವಳಿ

ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೆ. 24. ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ಎಂಬಾತ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸೇವಂತ್ ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸೇವಂತ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ತಲೆಗೆ ವಿಪರೀತ ಪೆಟ್ಟಾಗಿದ್ದರಿಂದ ಆಸ್ಪತ್ರೆಯಲ್ಲಿ

ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ ಸೆ. 24. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read More »

ಕರಾವಳಿ, ಕ್ರೈಮ್ ನ್ಯೂಸ್

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಕಾನೂನು ಸೇವೆಗಳ ಸಮಿತಿ ಸುಳ್ಯ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯ ಹಾಗೂ ವಕೀಲರ ಸಂಘ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಸೋಮವಾರದಂದು ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಬಿ.ಮೋಹನ್

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ Read More »

ಕರಾವಳಿ
Death, deadbody, Waterfall

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ. ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 24. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ ಅವರನ್ನು ಕಾರ್ಕಳ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಕರೆತಂದು ಸೋಮವಾರ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಕಾರ್ಕಳ ಡಿವೈಎಸ್ಪಿ ಅರವಿಂದ್‌ ಎನ್‌. ಕಲಗುಜ್ಜಿ ನೇತೃತ್ವದ ತಂಡ ಇವರಿಬ್ಬರನ್ನು ತೀವ್ರ ವಿಚಾರಣೆ ನಡೆಸಿತು.  

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಖಿಲ್ ಕುಮಾರಸ್ವಾಮಿ ಕುಕ್ಕೇಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 24. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದೂವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಈಗಾಗಲೇ ನಮ್ಮ

ನಿಖಿಲ್ ಕುಮಾರಸ್ವಾಮಿ ಕುಕ್ಕೇಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ Read More »

ಕರಾವಳಿ

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24.  ಮಂಗಳೂರು ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ರಾಜ್ಯಾಧ್ಯಕ್ಷರಾಗಿದ್ದಇವರು ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮದ ವಿರುದ್ಧ ಧ್ವನಿ ಎತ್ತಿದವರಾಗಿದ್ದರು. ಅದರಲ್ಲೂ ಪೊಲೀಸರ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಮಾಡುವಲ್ಲಿ‌ ಮುಂಚೂಣಿಯಲ್ಲಿದ್ದರು. ಯಾವುದೇ ಧಾರ್ಮಿಕ ಕ್ರಿಯೆ ನಡೆಸದೆ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ನಾಳೆ ಹಸ್ತಾಂತರ ಮಾಡಲಾಗುವುದು ಎಂದು

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ Read More »

ಕರಾವಳಿ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸೆ. 24. ಸ್ಕೂಟರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ. ಗಾಯಗೊಂಡ ಸವಾರನನ್ನು ಕಾಸರಗೋಡು ಮೂಲದ ಜುನೈದ್ ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ ಎಮ್ಮೆಮಾಡಿಗೆ ತೆರಳಿ ವಾಪಾಸು ಬರುತ್ತಿದ್ದ ಸ್ಕೂಟರ್ ಹಾಗೂ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನ ಸುಳ್ಯದ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 24. ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ನಾಜೀರ್ ರವರು ಕುಟುಂಬದೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಿ ಬಳಿಕ ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿ ಬಸ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ.

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top