ಕರಾವಳಿ

ಸುಬ್ರಹ್ಮಣ್ಯ: ಜಿಲ್ಲಾ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 14. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್ ಪಿಯು ಕಾಲೇಜಿನ ಸಂಸ್ಕೃತ ಶಿಕ್ಷಕ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭವು ಶನಿವಾರ ನಡೆಯಿತು. ಕಾಲೇಜಿನ ಬೆಳ್ಳಿಹಬ್ಬ ಸಮಾರಂಭದಲ್ಲಿ ರಘು ಬಿಜೂರು ಅವರನ್ನು ಗೌರವಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ವತಿಯಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಅಭಿನಂದಿಸಿದರು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್, […]

ಸುಬ್ರಹ್ಮಣ್ಯ: ಜಿಲ್ಲಾ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ Read More »

ಕರಾವಳಿ

ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ ಆರೋಪ – ಶಿಕ್ಷಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 14. ಶಾಲೆಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ದ್ವೇಷದ ಭಾವನೆಯಿಂದ ಸತತ ಮೂರು ದಿನ ಶಿಕ್ಷಕರೋರ್ವರು ಬೆತ್ತದಿಂದ ಹಲ್ಲೆ ನಡೆಸಿದ ಪರಿಣಾಮ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕು ಉರುವಾಲು ನಿವಾಸಿಯಾಗಿದ್ದು, ಪದ್ಮುಂಜ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಹಲ್ಲೆ ನಡೆಸಿರುವ ಆರೋಪಿ ಇಂಗ್ಲೀಷ್ ಶಿಕ್ಷಕ ಅನಂತ ಕುಮಾರ್ ಎಂದು ಆಪಾದಿಸಲಾಗಿದೆ. ದೂರಿನ ಪ್ರಕಾರ ಆರೋಪಿ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸೆ. 9,10,11ರ

ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ ಆರೋಪ – ಶಿಕ್ಷಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
pilikula

ಪಿಲಿಕುಳ: ಸೆ.16 ಸೋಮವಾರದಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಸೆಪ್ಟೆಂಬರ್ 16ರಂದು ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪಿಲಿಕುಳ: ಸೆ.16 ಸೋಮವಾರದಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ Read More »

ಕರಾವಳಿ

ನಾಳೆ (ಸೆ.15) ಬೃಹತ್ ಮಾನವ ಸರಪಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ನಾಳೆ (ಸೆಪ್ಟೆಂಬರ್ 15) ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ ನಿಂದ ಸುಳ್ಯ ಸಂಪಾಜೆ ಗೇಟ್‍ ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ–ಸುರತ್ಕಲ್–ಬೈಕಂಪಾಡಿ–ನಂತೂರು–ಪಡೀಲ್–ಬಿ.ಸಿ.ರೋಡು–ಪುತ್ತೂರು–ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.  ಭಾನುವಾರ ಬೆಳಿಗ್ಗೆ 9.30 ರಿಂದ 9:37 ರವರೆಗೆ ಮಾನವ

ನಾಳೆ (ಸೆ.15) ಬೃಹತ್ ಮಾನವ ಸರಪಳಿ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2024- 25ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆಯು ಆನ್‍ ಲೈನ್ ಮೂಲಕ ಸೆಪ್ಟೆಂಬರ್ 18ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ Read More »

ಕರಾವಳಿ

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 14.  ಸಮುದ್ರದಲ್ಲಿ ಮೀನುಗಾರಿಕೆ ಮಾಡುತಿದ್ದ ವೇಳೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಶೇಷು (61) ಎಂದು ಗುರುತಿಸಲಾಗಿದೆ. ಶೇಷು ಅವರು ಕೋಡಿಯ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಮಾಡುತಿದ್ದಾಗ 8.15ರ ಸುಮಾರಿಗೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದರು. ತಕ್ಷಣ ಬೋಟಿನಲ್ಲಿದ್ದ ಇತರರು ಅವರನ್ನು ಎತ್ತಿ ಅಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭತ್ತದ ಪೋಷಕಾಂಶಗಳ ನಿರ್ವಹಣೆಯ ವಿಧಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ನಾಟಿ ಮಾಡುವ 2-3 ವಾರಗಳ ಮೊದಲು 2-3 ಟನ್ ಕೊಟ್ಟಿಗೆ ಗೊಬ್ಬರ/ಕಾಂಪೋಸ್ಟ್ ಗೊಬ್ಬರವನ್ನು ಮಣ್ಣಿಗೆ ಸೇರಿಸಬೇಕು. ಪ್ರತಿ ಎಕರೆಗೆ 200 ಕಿ.ಗ್ರಾಂ ಕೃಷಿ ಸುಣ್ಣವನ್ನು ಕೆಸರು ಗದ್ದೆ ಮಾಡುವ ಸಮಯದಲ್ಲಿ ಮಣ್ಣಿಗೆ ಸೇರಿಸಬೇಕು. ಪ್ರತಿ ಎಕರೆಗೆ ಶಿಫಾರಸ್ಸು ಮಾಡಿದ ಗೊಬ್ಬರ- 24 ಕಿ.ಗ್ರಾಂ. – ಸಾರಜನಕ, 12 ಕಿ.ಗ್ರಾಂ– ರಂಜಕ, 24 ಕಿ.ಗ್ರಾಂ –ಪೋಟ್ಯಾಷ್ ಮತ್ತು 10 ಕಿ.ಗ್ರಾಂ – ಜಿಂಕ್ ಸಲ್ಫೇಟ್. ಶೇ.50 ಸಾರಜನಕ (25 ಕಿ.ಗ್ರಾಂ

ಭತ್ತದ ಪೋಷಕಾಂಶಗಳ ನಿರ್ವಹಣೆಯ ವಿಧಾನ Read More »

ಕರಾವಳಿ

ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಗೆ ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಯು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭತ್ತದ ಗದ್ದೆಗಳಲ್ಲಿ ಕಂಡುಬಂದಿದ್ದು, ಇವುಗಳ ಸಮಗ್ರ ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ಎಲೆ ಸುರುಳಿ ಕೀಟದ ಮರಿ ಹುಳುಗಳು ಗರಿಗಳನ್ನು ಸುರುಳಿ ಮಾಡಿ ಅದರ ಒಳಗಡೆ ಇದ್ದು, ಹಸಿರು ಭಾಗವನ್ನು ತಿನ್ನುವುದರಿಂದ ಎಲೆಗಳ ಮೇಲೆ ಬಿಳಿ ಬಣ್ಣದ ಪಟ್ಟೆಗಳು ಕಾಣುತ್ತವೆ ಮತ್ತು ಕೊಳವೆ ಕೀಟದ ಮರಿ ಹುಳುಗಳು ಎಲೆಗಳನ್ನು ತುಂಡು-ತುಂಡಾಗಿ ಕತ್ತರಿಸಿ ಕೊಳವೆಗಳನ್ನು

ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಗೆ ಪರಿಹಾರ Read More »

ಕರಾವಳಿ

ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗೆ ಡಾ: ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃಧ್ದಿ ನಿಗಮಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ

ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top