ಕರಾವಳಿ

ಕಡಬ: ಸೆ.17ರಂದು ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆಪ್ಟೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ […]

ಕಡಬ: ಸೆ.17ರಂದು ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಜೆಸಿಐ ಕಡಬ ಕದಂಬ, ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.)  ಇದರ ಸಹಯೋಗದೊಂದಿಗೆ ಜೆಸಿಐ ಸಪ್ತಾಹದ ಅಂಗವಾಗಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪರಿಸರ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣಾ ಕಾರ್ಯಕ್ರಮ ಎ.ಸಿ.ಎಫ್ ಶ್ರೀ ಸದಾಶಿವ ಭಟ್ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ ರಾವ್ ಮಂಕುಡೆ ದೀಪ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸುತ್ತ-ಮುತ್ತ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ Read More »

ಕರಾವಳಿ

ಮೂಡಬಿದ್ರಿ ಘಟಕದ ನಿವೃತ್ತ ಗೃಹರಕ್ಷಕ ನಾರಾಯಣ ಗೌಡ ಇವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಇತ್ತೀಚೆಗೆ ಇಲಾಖೆಯಿಂದ ನಿವೃತ್ತರಾದ ಮೂಡಬಿದ್ರಿ ಘಟಕದ ಗೃಹರಕ್ಷಕ ಶ್ರೀ ನಾರಾಯಣ ಗೌಡ ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಮೇರಿಹಿಲ್ ನಲ್ಲಿ ಜರಗಿತು. 1964 ಏಪ್ರಿಲ್ 20ರಂದು ಜನಿಸಿದ ಶ್ರೀ ನಾರಾಯಣ ಗೌಡರವರು, 2014 ರ ಏಪ್ರಿಲ್ 28 ರಂದು ಗೃಹರಕ್ಷಕ ಇಲಾಖೆಗೆ ಸೇರಿಕೊಂಡು ಸುಮಾರು 10 ವರ್ಷಗಳ ಕಾಲ ಗೃಹರಕ್ಷಕ ಇಲಾಖೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸಿ 2024ರ ಎಪ್ರಿಲ್ 20ರಂದು ಸೇವಾ ನಿವೃತ್ತಿ ಪಡೆದರು. ಜಿಲ್ಲಾ

ಮೂಡಬಿದ್ರಿ ಘಟಕದ ನಿವೃತ್ತ ಗೃಹರಕ್ಷಕ ನಾರಾಯಣ ಗೌಡ ಇವರಿಗೆ ಸನ್ಮಾನ Read More »

ಕರಾವಳಿ

ಸಾರ್ವಜನಿಕ ಗಣೇಶೋತ್ಸವದಿಂದ ಹಿಂದೂ ಸಮಾಜ ಒಗ್ಗೂಡಿಸುವ ಕೆಲಸ- ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಗಣೇಶೋತ್ಸವ ಆಚರಣೆಗಳು ಸಮಸ್ತ ಹಿಂದೂ ಸಮಾಜವನ್ನು ಒಟ್ಟುಗೂಡಿಸುವ ಸುಸಂದರ್ಭವಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಹಿಂದೂ ಯುವ ಸೇನಾ ಆಶ್ರಯದಲ್ಲಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ 32ನೇ ವರ್ಷದ ಮಂಗಳೂರು ಗಣೇಶೋತ್ಸವದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾರ್ವಜನಿಕ ಗಣೇಶೋತ್ಸವ ಆಯೋಜನೆಯಿಂದ ಹಿಂದೂ ಸಮಾಜ ಒಟ್ಟಾಗಿ ಒಂದೆಡೆ ಸೇರುವಂತಾಗುತ್ತದೆ. ಈ ಗಣಪತಿ ಉತ್ಸವದ ಮೂಲಕ ಸಮಾಜದಲ್ಲಿ ಧರ್ಮದ ಕಾರ್ಯ, ಹಿಂದುತ್ವ ಹಾಗೂ

ಸಾರ್ವಜನಿಕ ಗಣೇಶೋತ್ಸವದಿಂದ ಹಿಂದೂ ಸಮಾಜ ಒಗ್ಗೂಡಿಸುವ ಕೆಲಸ- ಕ್ಯಾ. ಚೌಟ Read More »

ಕರಾವಳಿ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಓರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಉರ್ಕುಂಜ ಎಂಬಲ್ಲಿ ಮನೆಯೊಂದರ ವೈರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ ನಿಧನ + ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ಪಣೆ

ಕಡಬ, ಸೆ.14. ನಿವೃತ್ತ ಸೈನಿಕ ಅಂಗಣ ಸುಂದರ ಗೌಡ(60ವ.) ಅವರು ಸೆ.13ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ಸೆ.12ರಂದು ಹೃದಯಾಘಾತವಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇವರು ಪಿಜಕ್ಕಳ‌ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸಕ್ರೀಯ ಸದಸ್ಯರಾಗಿ ಕಡಬದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಶನಿವಾರ ಬೆಳಿಗ್ಗೆ 9 ಗಂಟೆಗೆ ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ವಪಣೆ ನಡೆಯಲಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ ನಿಧನ + ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ಪಣೆ Read More »

ಕರಾವಳಿ

ಈದ್ ಮಿಲಾದ್- ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಮುಸಲ್ಮಾನರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಸುರಕ್ಷತಾ ದೃಷ್ಟಿಯಿಂದ ಬೆಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೇ ಹರಿತವಾದ ವಸ್ತುಗಳನ್ನು ಹೊಂದಿರಬಾರದು. ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು. ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು. ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚ್ ಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು. ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್

ಈದ್ ಮಿಲಾದ್- ಮಾರ್ಗಸೂಚಿ ಬಿಡುಗಡೆ Read More »

ಕರಾವಳಿ

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ – ಪರ್ಯಾಯ ಮಾರ್ಗ ಬಳಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಸೆಪ್ಟೆಂಬರ್ 15 ರಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಮಂಗಳೂರು ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ-ಹೆಜಮಾಡಿ ಗಡಿಯಿಂದ ನಂತೂರು ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ 73 ರ ಅರ್ಕುಳ- ಫರಂಗಿಪೇಟೆವರೆಗೆ ಶಾಲಾ ಮಕ್ಕಳು ಬೆಳಿಗ್ಗೆ ಸುಮಾರು 07.30 ಗಂಟೆಯಿಂದ 11.00 ರವರರೆಗೆ ಮಾನವ ಸರಪಳಿಯನ್ನು

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ – ಪರ್ಯಾಯ ಮಾರ್ಗ ಬಳಸಲು ಸೂಚನೆ Read More »

ಕರಾವಳಿ

ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮಿರಾಜ್ ಆಳ್ವಗೆ ಬೆಳ್ಳಿಯ ಪದಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 13.  ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’ ಕರಾಟೆ ಸ್ಪರ್ಧೆಯ 13 ವರ್ಷದ ವಿಭಾಗದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಶಮಿರಾಜ್ ಆಳ್ವ ಕಟಾದಲ್ಲಿ ಬೆಳ್ಳಿಪದಕವನ್ನು ಪಡೆದಿದ್ದಾನೆ. ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರದ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ಈ ಚಾಂಪಿಯನ್ ಶಿಪ್ ನಡೆಯಿತು. ಪೆರ್ನೆ ನಿವಾಸಿಯಾಗಿರುವ ಈತ ಪ್ರಮೋದ್ ಆಳ್ವ ಮತ್ತು

ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮಿರಾಜ್ ಆಳ್ವಗೆ ಬೆಳ್ಳಿಯ ಪದಕ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top