ಕರಾವಳಿ

Death, deadbody, Waterfall

ಕಡಬ: ವಿಷಸೇವಿಸಿ ಅಸ್ವಸ್ಥರಾಗಿದ್ದ ವೃದ್ದ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಸೆ. 13. ವಿಷ ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧರೋರ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಬಲ್ಯ ಗ್ರಾಮದಿಂದ ವರದಿಯಾಗಿದೆ. ಮೃತರನ್ನು ಬಲ್ಯ ಗ್ರಾಮದ ದೇರಾಜೆ ಮಾದೇರಿಕೆ ನಿವಾಸಿ ಕುಶಾಲಪ್ಪ ಗೌಡ(75) ಎಂದು ಗುರುತಿಸಲಾಗಿದೆ. ಇವರು ಕಳೆದ 2 ವರ್ಷಗಳಿಂದ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದು ಈ ಬಗ್ಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರೂ ಸರಿಯಾಗಿ ಗುಣಮುಖವಾಗದ ಕಾರಣ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಸೆ.12ರ ಗುರುವಾರದಂದು ಇವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಯಾವುದೋ ವಿಷ ಪದಾರ್ಥ ಸೇವಿಸಿದ್ದು, […]

ಕಡಬ: ವಿಷಸೇವಿಸಿ ಅಸ್ವಸ್ಥರಾಗಿದ್ದ ವೃದ್ದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದು ಯುವಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ

ನೇಣು ಬಿಗಿದು ಯುವಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಪುತ್ತೂರು ಬಾಲನ್ಯಾಯ ಕಾಯ್ದೆ ಮಂಡಳಿ ಇದರ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ನೋಟರಿ ಸಾಯಿರಾ ಝುಬೇರ್‌ರವರು ನೇಮಕಗೊಂಡಿದ್ದಾರೆ. ಪುತ್ತೂರು ದರ್ಬೆ ನಿವಾಸಿಯಾಗಿರುವ ಸಾಯಿರಾ ಝುಬೇರ್‌ ಪ್ರಸ್ತುತ ಹೈಕೋರ್ಟ್ ನ ವಕೀಲೆಯಾಗಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿಯ ಪದಾಧಿಕಾರಿಯಾಗಿದ್ದ ಇವರು, ಪ್ರಸ್ತುತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ದರ್ಬೆ ನಿವಾಸಿ, ಪ್ರಕಾಶ್

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ Read More »

ಕರಾವಳಿ

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 13. ಪಶ್ಚಿಮವಲಯಕ್ಕೆ ಸಂಬಂಧ ಪಟ್ಟ 4 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಕ್ಷಣ ನಮ್ಮ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಸ್ಪಂದಿಸುತ್ತಾ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕರ್ತವ್ಯ ನಿಷ್ಠೆಯನ್ನು ಮೆರೆದಿದ್ದಾರೆ. ಯಾವುದೇ ಘಟನೆಗಳು ಸಂಭವಿಸಿದಲ್ಲಿ ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅತೀ ವೇಗವಾಗಿ ಸುದ್ದಿಗಳು ತಿಳಿಯುತ್ತವೆ. ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜ ಸೇವೆಯುಳ್ಳವರಾಗಿರುತ್ತಾರೆ ಎಂದು ಪೊಲೀಸ್

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..! Read More »

ಕರಾವಳಿ

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ನಾಗಮಂಗಲದ ಕೋಮುಗಲಬೆ ಖಂಡಿಸಿ ಬಿಸಿರೋಡ್‌ನಲ್ಲಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ  ಬೃಹತ್ ಪ್ರತಿಭಟನೆ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ – ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು 

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೇಜ್ರಿವಾಲ್ ಗೆ ಜಾಮೀನು ಮಂಜೂರುಗೊಳಿಸಿದ ಸುಪ್ರೀಂ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್,

ಕೇಜ್ರಿವಾಲ್ ಗೆ ಜಾಮೀನು ಮಂಜೂರುಗೊಳಿಸಿದ ಸುಪ್ರೀಂ..! Read More »

ಕರಾವಳಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಶಪಡಿಸಿಕೊಂಡ ಲಾರಿ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಅಕ್ರಮವಾಗಿ ಡಾಂಬರು ದಾಸ್ತಾನು ಪ್ರಕರಣದಲ್ಲಿ ವಶಪಡಿಸಿದ್ದ ಲಾರಿಯನ್ನು (ಏಐ-10 ಎಂಆ-148 ನೇ ನಂಬ್ರದ ಟಾಟಾ ಎಸ್‍ಎಫ್‍ಸಿ 407) ಸೆಪ್ಟೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಹರಾಜಿನಲ್ಲಿ ಸೊತ್ತನ್ನು ಪಡೆಯಲು ಇಚ್ಚಿಸುವವರು ಹರಾಜು ಸಮಯದ 1ಗಂಟೆ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಹರಾಜಿನಲ್ಲಿ ಭಾಗವಹಿಸಬೇಕು. ಹರಾಜು ಪ್ರಕ್ರಿಯೆಯನ್ನು ರದ್ದುಪಡಿಸುವ/ಮಾರ್ಪಡಿಸುವ ಸಂಪೂರ್ಣ ಅಧಿಕಾರವು ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಅವರದ್ದಾಗಿರುತ್ತದೆ. ಹರಾಜಿನಲ್ಲಿ ಭಾಗವಹಿಸುವವರು ಸೊತ್ತನ್ನು

ವಶಪಡಿಸಿಕೊಂಡ ಲಾರಿ ಬಹಿರಂಗ ಹರಾಜು Read More »

ಕರಾವಳಿ

ಸೆ.17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವು ಸೆಪ್ಟೆಂಬರ್ 17ರಂದು ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು

ಸೆ.17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ Read More »

ಕರಾವಳಿ
Scroll to Top