ಕರಾವಳಿ

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ಮಂಗಳೂರಿನ ಪಂಜಿಮೊಗರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಾಣಿ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಭಿನಂದಿಸಿದೆ.

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ Read More »

ಕರಾವಳಿ

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿಯಮಿತ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24ರಂದು ಮಂಗಳವಾರ ಮಧ್ಯಾಹ್ನ 3ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ Read More »

ಕರಾವಳಿ

ಉಡುಪಿ: ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13.  ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.    

ಉಡುಪಿ: ಯುವಕ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಬಸ್ಸಿನ ಫುಟ್ ಬೋರ್ಡಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆಗೆಸೆಯಲ್ಪಟ್ಟ ಘಟನೆ ತೊಕ್ಕೊಟ್ಟು ಮೇಲ್ಸೆತುವೆ ಬಳಿ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಸಿಟಿ ಬಸ್ಸೊಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದಾಗ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಚಾಲಕ ದಿಢೀರ್‌ ಬ್ರೇಕ್‌ ಹಾಕಿದ ಪರಿಣಾಮ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 13. ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಜೀವ ಬೆದರಿಕೆಯೊಡ್ಡಿರುವ ಆರೋಪಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸತೀಶ ಎಂದು ಗುರುತಿಸಲಾಗಿದೆ. ಪಿಯುಸಿ ವಿದ್ಯಾರ್ಥಿನಿಯು ಕಳೆದ ಜೂನ್ 14ರಂದು ತಾಯಿಯೊಂದಿಗೆ ಪುತ್ತೂರಿನ ಕ್ಲಿನಿಕ್ ಗೆ ಹೋಗುತ್ತಿದ್ದಾಗ ಅಲ್ಲಿಗೆ ಬಂದಿದ್ದ ಆರೋಪಿಯು ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು ಆಕೆಯ ತಾಯಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದು, ಅದೇ ದಿನ ಆರೋಪಿಯು ಮೆಸೇಜ್ ಮಾಡಿ ವಿದ್ಯಾರ್ಥಿನಿಯ ಸಂಪರ್ಕಿಸಿ

ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

Types of Corporate Governance

A well-defined corporate governance system promotes fairness and transparency as well as helping your business develop a a https://boardroomdirect.blog/saas-companies-acquisitions-best-practices-of-deal-management/ strong relationship with its shareholders and the community. It helps identify roles and responsibilities, ensures accountability, and allows for compliance with the law and regulations. It also aids in the long-term growth of a business by

Types of Corporate Governance Read More »

ಕರಾವಳಿ

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ನಗರದ ಜೈಲು‌ ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ದುರ್ದೈವಿಗಳನ್ನು ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಜೆಸಿಬಿ ಮೂಲಕ ಮನೆಯನ್ನು ಕೆಡವುತ್ತಿದ್ದ ವೇಳೆ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ವಾಹನ ಹರಿದು ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 12. ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗುವೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ

ಶಾಲಾ ವಾಹನ ಹರಿದು ಮಗು ಮೃತ್ಯು..! Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 12.  ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಜಿ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಲ್ ಅವರು ತಿಳಿಸಿದರು. ಕಾರ್ಕಳದ

ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 12. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ ಕಾರ್ಯಕ್ರಮವು ಗುರುವಾರದಂದು ನಡೆಯಿತು. ಈ ನಿಮಿತ್ತ ಪ್ರಾತ:ಕಾಲ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ವಿವಿಧ ಧಾರ್ಮಿಕ ಕಾರ್ಯಕ್ರಮ, ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಿತು. ಬಳಿಕ ಭಕ್ತರಿಗೆ ಕದಿರು ವಿತರಣೆ ನಡೆಯಿತು.  

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ Read More »

ಕರಾವಳಿ
Scroll to Top