ಕರಾವಳಿ

ಮಹಿಳೆ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಗಳೂರಿಗೆ ಹೋದ ಭಾರತಿ ಎಂಬವರು ವಾಪಸ್ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆಯಲ್ಲಿ  ಮನೆ ರಿಪೇರಿಗಾಗಿ ಸಾಲ ಪಡೆದುಕೊಂಡಿದ್ದ ಇವರು, ಮರುಪಾವತಿಸಲು ಜುಲೈ 7ರಂದು ಮಂಗಳೂರಿಗೆ ಹೋದವರು ಮನೆಗೆ ಪಾಪಸ್ ಬಾರದೇ ಕಾಣೆಯಾಗಿದ್ದಾರೆ ಎನ್ನಲಾಗಿದೆ. ನಾಪತ್ತೆಯಾದ ಮಹಿಳೆಯ ಚಹರೆ: ಎತ್ತರ 5.4 ಅಡಿ, ಉರುಟು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ. ಮಾತನಾಡುವ ಭಾಷೆ ಕನ್ನಡ, ತುಳು,. […]

ಮಹಿಳೆ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. 2024-25ನೇ ಸಾಲಿನ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆಮಾಡಿ ಆಯ್ಕೆಯಾದ ಪ್ರತಿ ಮಗುವಿಗೆ ರೂ. 10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 8ರಿಂದ 18 ವರ್ಷದೊಳಗಿರಬೇಕು. ಜನನ

ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ ಅವರಿಗೆ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಶ್ರೇಣಿ ಉಪನಿರ್ದೇಶಕರಾಗಿ (ಡಿಡಿಪಿಐ) ಬಡ್ತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪನಿರ್ದೇಶಕರು (ಸಾರ್ವಜನಿಕ ಶಿಕ್ಷಣ) ಹುದ್ದೆಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. 2008ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲೋಕೇಶ ಅವರು  ಜಿಲ್ಲೆಯ ಐದು ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಸಮಗ್ರ ಶಿಕ್ಷಣ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ Read More »

ಕರಾವಳಿ

ಸೆ.15 ರಂದು ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ- 1ಲಕ್ಷಕ್ಕೂ ಅಧಿಕ ಜನ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಸೆಪ್ಟೆಂಬರ್ 15ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ ತಾಲೂಕಿನ ಹೆಜಮಾಡಿ ಟೋಲ್‍ಗೇಟ್ ನಿಂದ ಸುಳ್ಯ ತಾಲೂಕಿನ ಸಂಪಾಜೆಗೇಟ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ 130 ಕಿ.ಮೀ ವರೆಗೆ 1 ಲಕ್ಷಕ್ಕೂ ಹೆಚ್ಚು

ಸೆ.15 ರಂದು ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ- 1ಲಕ್ಷಕ್ಕೂ ಅಧಿಕ ಜನ ಭಾಗಿ Read More »

ಕರಾವಳಿ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೆ.14 ರಿಂದ ಅ. 02ರ ವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು. ಅವರು “ಸ್ವಚ್ಛತಾ ಹಿ ಸೇವಾ”

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ Read More »

ಕರಾವಳಿ

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್‌ಎಂಸಿಒಪಿ)ಆಶ್ರಯದಲ್ಲಿ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ ನಡೆಯಿತು. ಅಧ್ಯಕ್ಷತೆಯನ್ನು ಸೈಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ.ಫಾದರ್ ಕ್ಲಿಫರ್ಡ್ ಸಿಕ್ವೇರಾ ಎಸ್.ಜೆ ವಹಿಸಿದ್ದರು. ಎಫ್‌ಎಂಸಿಒಪಿಯ ಪ್ರಾಂಶುಪಾಲೆ ಪ್ರೊ.ಚೆರಿಶ್ಮಾ ಡಿ ಸಿಲ್ವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ಲೇಡಿಸ್ ಸರ್ಕಲ್ 82ರ ಅಧ್ಯಕ್ಷೆ ನಂದಿತಾ ಪಾಯಸ್ ಮತ್ತು ಮಂಗಳೂರು ರೌಂಡ್ ಟೇಬಲ್ 115ರ ಹಿಂದಿನ ಅಧ್ಯಕ್ಷ ಹಾರೋನ್ ಫೆನಾರ್ಂಡಿಸ್

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ Read More »

ಕರಾವಳಿ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದ್ರೆಯ ವಕೀಲರಾದ ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಅಧ್ಯಕ್ಷರು ಹಾಗೂ ನಾಲ್ವರು ಸದಸ್ಯರನ್ನು ಮೂರು ವರ್ಷಗಳ ಅವಧಿಗೆ ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಅಬೂಬಕರ್ ಜಿ.ಎನ್ ಮಂಗಳೂರು, ಹರಿಣಿ ಬಿಕರ್ನಕಟ್ಟೆ, ಕಿಶೋರ್ ಕುಂದರ್ ಎಕ್ಕೂರ್, ಹರೀಶ ಎಂ. ನಾಗರಿ ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತುಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಅಧೀನ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ Read More »

ಕರಾವಳಿ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 12. ಬುಧವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್‌ ಕಂಬಗಳು ಮುರಿದುಬಿದ್ದ ಘಟನೆ ನೆಲ್ಯಾಡಿ ಜನತಾ ಕಾಲನಿಯಲ್ಲಿ ನಡೆದಿದೆ. ನೆಲ್ಯಾಡಿ ಸಂತ ಜಾರ್ಜ್‌ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗಳಾದ ಐತ್ತಪ್ಪ, ಇಸುಬು, ಬಾಬು ಆಚಾರಿ ಹಾಗೂ ಲೋಕೇಶ್‌ ಎಂಬವರ ಮನೆ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಿಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಘಟನಾ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಆ್ಯಕ್ಟೀವಾ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ತಿಳಿದು ಬಂದಿದೆ. ಮೃತ ಯುವಕನನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಕೀರ್ತನ್ ಸೆ. 10ರಂದು ರಾತ್ರಿ ವೇಳೆ ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕೆದಂಬಾಡಿ ಗ್ರಾಮದ ತ್ಯಾಗರಾಜ ನಗರದಲ್ಲಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ
Scroll to Top