ಕರಾವಳಿ

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 07. ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. […]

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ – ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 07. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರಾರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ನ 2024-27ನೇ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು. ನೂತನ ಸಮಿತಿ ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ, ಕೋಶಾಧಿಕಾರಿಯಾಗಿ ಸಿದ್ದೀಕ್ ಕೊಡಿಯಮ್ಮೆ, ಉಪಾಧ್ಯಕ್ಷರಾಗಿ ಸಲೀಂ ಗೂನಡ್ಕ, ಜೊತೆ

SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ – ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ Read More »

ಕರಾವಳಿ, ಕರ್ನಾಟಕ

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 07. ಗಣಪತಿ ತರಲು ಹೋಗುತ್ತಿದ್ದ ಸಂದರ್ಭ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.    ಮೃತಪಟ್ಟವರನ್ನು 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ. ಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದಾಗ ಭೈರಾಪುರ ಗೇಟ್ ಬಳಿ ಚಾಲಕನ

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
crime, arrest, suspected

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್ ಸಹಿತ ಯುವಕನೋರ್ವನನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಅಶೋಕ ನಗರದ ಹಿಮಾನಿಷ್ (27) ಎಂದು ಗುರುತಿಸಲಾಗಿದೆ.  ಪೊಲೀಸರು ಸೆ. 03ರಂದು ಪಡೀಲ್ ಜಂಕ್ಷನ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭ ಅನುಮಾನಗೊಂಡ ಕಾರನ್ನು ನಿಲ್ಲಿಸಿ ಅದರ ಚಾಲಕನನ್ನು ವಿಚಾರಿಸಿದಾಗ ಆತ ಕೇರಳ ಕಡೆಯಿಂದ ಬಂದಿದ್ದು ಡ್ರಗ್ಸ್ ಸೇವಿಸಿರುವುದಾಗಿ ತಿಳಿಸಿದ್ದಾನೆ. ಅದರಂತೆ ಕಾರನ್ನು ತಪಾಸಣೆ ನಡೆಸಿದ ಪೊಲೀಸರಿಗೆ ಕಾರಿನಲ್ಲಿ

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಗಣೇಶ ಚತುರ್ಥಿ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭ ಬಾರ್ ಮತ್ತು ವೈನ್‌ ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನೀಯರು ಮದ್ಯ ಸೇವಿಸಿ ಗಲಭೆಮಾಡುವ ಸಾಧ್ಯತೆ ಇದ್ದು, ಹೀಗಾಗಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಡೆಗೆ ಅಪ್ಪಳಿಸಿ ಮಗುಚಿಬಿದ್ದ ದೋಣಿ- ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಆಳಸಮುದ್ರ ಮೀನುಗಾರಿಕೆಯ ಬೋಟೊಂದು ಮಲ್ಪೆ ಬಂದರಿನಿಂದ ಹೊರಟು ತೆಂಗಿನಗುಂಡಿ ಬಂದರಿನ ಬಳಿ ಬಂಡೆಗೆ ಬಡಿದು ಸಮುದ್ರದಲ್ಲಿ ಮುಳುಗಿದ ಘಟನೆ ಭಟ್ಕಳ ಸಮೀಪ ನಡೆದಿದೆ. ಕೊಡವೂರಿನ ಸವಿತಾ ಎಸ್ ಸಾಲಿಯಾನ್ ಒಡೆತನದ ಶ್ರೀ ಕುಲಮಹಾಸ್ತ್ರೀ ಫಿಶರೀಸ್ ಎಂಬ ಬೋಟ್, ಸೆಪ್ಟೆಂಬರ್ 5 ರಂದು ಮುಂಜಾನೆ 4 ಗಂಟೆಯ ಸುಮಾರಿಗೆ ಮಲ್ಪೆ ಬಂದರಿನಿಂದ ಹೊರಟು, ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲಿ ದೂರದಲ್ಲಿ, ಒಂದು ಟ್ರಾಲ್ ಮುಗಿಸಿ ಸೆಕೆಂಡ್ ಟ್ರಾಲ್ ಆರಂಭಿಸಿದ

ಬಂಡೆಗೆ ಅಪ್ಪಳಿಸಿ ಮಗುಚಿಬಿದ್ದ ದೋಣಿ- ಮೀನುಗಾರರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ನಡೆದಿದೆ.   ಮೃತರನ್ನು ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಎಂದು ಗುರುತಿಸಲಾಗಿದೆ. ಮೃತ ಚಂದ್ರಹಾಸ ಶೆಟ್ಟಿಯವರು ಹರೇಕಲ್ ದೆಬ್ಬೇಲಿಯಲ್ಲಿರುವ ತಮ್ಮ ಪತ್ನಿಯ ಮನೆಯಿಂದ ಕಲ್ಲೇಕರುಗುತ್ತು ಕಡೆಗೆ ಹೋಗುತ್ತಿದ್ದಾಗ ಅವರ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಈ ಕುರಿತು ಮಂಗಳೂರು

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗಾವಕಾಶ- ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07.  ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನವನ್ನು ಸೆಪ್ಟೆಂಬರ್ 11ರಂದು ಮಧ್ಯಾಹ್ನ 1:30ರ ವರೆಗೆ ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್, ರಾಣಿಪುರ ಉಳ್ಳಿಯ, ಕಾವೂರು ಇಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ.ಇ, ಬಿ.ಟೆಕ್, ಬಿಎಸ್‍ಸಿ, ಎಂಸಿಎ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ ಬಯೋಡೇಟಾದೊಂದಿಗೆ ನೇರ

ಉದ್ಯೋಗಾವಕಾಶ- ನೇರ ಸಂದರ್ಶನ Read More »

ಕರಾವಳಿ

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 07. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಸಲ್ಲಿಸಲು ಮೂಲ ದಾಖಲಾತಿಗಳೊಂದಿಗೆ ಶಿಶು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಲು ಸೆಪ್ಟೆಂಬರ್ 25 ರವರೆಗೆ ಅವಧಿ ವಿಸ್ತರಿಸಲಾಗಿದೆ. ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ, ವಿಭಾಗೀಯ ನಿಯಂತ್ರಣ ಅಧಿಕಾರಿ

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಜಿಲ್ಲೆಯಲ್ಲಿ ಎಚ್‍.ಐವಿ, ಏಡ್ಸ್ ಬಗ್ಗೆ ಅರಿವು ಸೇವಾ ಸೌಲಭ್ಯಗಳ ಮಾಹಿತಿ ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 17 ರಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ  ಸೆಪ್ಟೆಂಬರ್ 8ರಂದು ಭಾನುವಾರ ಬೆಳಿಗ್ಗೆ 6:00ಗೆ ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮಂಗಳ ಕ್ರೀಡಾಂಗಣದಿಂದ ಮ್ಯಾರಥಾನ್ ಸ್ಪರ್ಧೆಯನ್ನು ಆರಂಭಿಸಿ ಕುದ್ರೋಳಿ ಮಾರ್ಗವಾಗಿ ಹಳೆ ಚಿತ್ರಮಂದಿರ ಮುಂಭಾಗದಿಂದ ಡೊಂಗರಕೇರಿ ಮಾರ್ಗವಾಗಿ ಪಿವಿಎಸ್ ವೃತ್ತದಿಂದ ಎಂಜಿ ರೋಡ್ ಮಾರ್ಗವಾಗಿ ಮಹಾನಗರ ಪಾಲಿಕೆ

ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ Read More »

ಕರಾವಳಿ, ಕರ್ನಾಟಕ
Scroll to Top