ಕರಾವಳಿ

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್     

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದ್ದು, ತಲಪಾಡಿಯಿಂದ […]

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್      Read More »

ಕರಾವಳಿ, ಕ್ರೈಮ್ ನ್ಯೂಸ್

ಪಹಣಿಗೆ ಆಧಾರ್ ಜೋಡಣೆ – ರೈತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧಾರ್ ಜೋಡಣೆಯು ಅವಶ್ಯಕವಾಗಿರುತ್ತದೆ. ಆದ್ದರಿಂದ, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿರುವ ಭೂಮಾಲೀಕರು, ಅವರ ಕುಟುಂಬಸ್ಥರು/ಸಂಬಂಧಿಕರು

ಪಹಣಿಗೆ ಆಧಾರ್ ಜೋಡಣೆ – ರೈತರಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಬೆಳೆಹಾನಿ- ರೈತರ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಉಪ ವಿಭಾಗ ಅಧಿಕಾರಿಗಳು, ತಹಶೀಲ್ದಾರ್, ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ವೆಬ್‍ ಸೈಟ್ www.dk.nic.in ನಲ್ಲಿ ಸೆಪ್ಟೆಂಬರ್ 4 ರಂದು ಪ್ರಕಟಿಸಲಾಗಿದೆ. ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್, ಕೃಷಿ ಅಥವಾ ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿಗಳಲ್ಲಿ

ಬೆಳೆಹಾನಿ- ರೈತರ ಪಟ್ಟಿ ಪ್ರಕಟ Read More »

ಕರಾವಳಿ

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಯು.ಆರ್ ರಾವ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಸಚಿವ ರಾಜು ಕೆ. ಮೊಗವೀರ, ವಿಶ್ವದ ಯಾವುದೇ ವಿಶ್ವ ವಿದ್ಯಾಲಯಗಳ ನಿಜವಾದ ನಿರ್ಮಾತೃರು ಅಲ್ಲಿನ ಶಿಕ್ಷಕರು. ಪ್ರಸಕ್ತ ಶಿಕ್ಷಣವು, ವಿದ್ಯಾರ್ಥಿಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಕಲ್ಪನೆಗೂ ಮೀರಿದ ಉತ್ತರಗಳನ್ನು ಕಂಡುಕೊಳ್ಳಲು ಹೊಸ ಸಾಧ್ಯತೆಗಳನ್ನು ತರೆದಿಡುವ ಮೂಲಕ ವ್ಯಕ್ತಿತ್ವ ವಿಕಾಸದೆಡೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ, ಪಿ.ಎಲ್ ಧರ್ಮ ಅವರು ತಮ್ಮ ವಿದ್ಯಾರ್ಥಿ

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 6. ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »

ಕರಾವಳಿ

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸಲು 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ಸದರಿ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದೆ. ಅಸಂಘಟಿತ ವಲಯದ ಕಾರ್ಮಿಕರು: ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕ್ಯಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು,

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 6. ಸರಕಾರಿ ಶಾಲೆಯ ಶಿಕ್ಷಕನಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಮತ್ತೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶನ, ತರಬೇತಿ, ಪ್ರೇರಣಾ ತರಗತಿಗಳನ್ನು ನೀಡುತ್ತಿರುವ ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರನ್ನು ನಮ್ಮ ನಾಡ ಒಕ್ಕೂಟ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎನ್ ಎನ್ ಒ ಜಿಲ್ಲಾಧ್ಯಕ್ಷ ಡಾ ಆರಿಫ್ ಮಸೂದ್, ಎನ್ ಎನ್ ಒ ಟ್ರಸ್ಟಿ ಗಳಾದ ಹಮೀದ್ ರಾಯಲ್ ಮೂಡುಬಿದಿರೆ,

ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ Read More »

ಕರಾವಳಿ

ಐಟಿಐ ಖಾಲಿ ಸೀಟುಗಳಿಗೆ ಪ್ರವೇಶ – ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಯಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಆಗಸ್ಟ್ 2024ನೇ ಸಾಲಿನ ಪ್ರವೇಶ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ನೀಡಲಾಗುತ್ತದೆ. 10ನೇ ತರಗತಿ ಉತ್ತೀರ್ಣ, ಅನ್ನುತ್ತೀರ್ಣ ಅಭ್ಯರ್ಥಿಗಳು ಸೆಪ್ಟೆಂಬರ್ 30ರ ಒಳಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಪ್ರವೇಶ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಐಟಿಐ ಕದ್ರಿ ಹೀಲ್ಸ್ ಮಂಗಳೂರು ಅಥವಾ ದೂರವಾಣಿ ಸಂಖ್ಯೆ 0824- 2211285

ಐಟಿಐ ಖಾಲಿ ಸೀಟುಗಳಿಗೆ ಪ್ರವೇಶ – ದಿನಾಂಕ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿತೆಯಾಗಿ ಆಚರಿಸುವ ಕುರಿತು ಮಂಡಳಿ ಹಲವು ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಗಣೇಶ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವುದು ಮಂಡಳಿಯ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಲಮಾಲಿನ್ಯ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣಕ್ಕಾಗಿ ಜೇಡಿಮಣ್ಣು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಲು ಶಾಲೆಗಳಲ್ಲಿ ಹೆಚ್ಚು ಪ್ರೋತ್ಸಾಹ ನೀಡಬೇಕು. ಶಾಲಾ ಮಕ್ಕಳಲ್ಲಿ ಮುಂಜಾನೆ ಪ್ರಾರ್ಥನೆಯಲ್ಲಿ ಘೋಷಣೆ ಮಾಡುವ ಮೂಲಕ ಪರಿಸರಸ್ನೇಹಿ ಗಣೇಶ

ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಉರುಳಿಗೆ ಬಿದ್ದ ಬೃಹತ್ ಗಾತ್ರದ ‘ಉಡ’ – ಉರಗತಜ್ಞರಿಂದ ರಕ್ಷಣೆ

(ನ್ಯೂಸ್ ಕಡಬ) newsksdaba.com ಪುತ್ತೂರು, ಸೆ. 06. ನೈಲಾನ್‌ ಹಗ್ಗ ಕುತ್ತಿಗೆಗೆ ಬಿಗಿದು ಒದ್ದಾಡುತ್ತಾ ಪ್ರಾಣಾಪಾಯದಲ್ಲಿದ್ದ ಉಡವೊಂದನ್ನು ಪುತ್ತೂರಿನ ಖ್ಯಾತ ಉರಗತಜ್ಞ ಡಾ. ರವೀಂದ್ರನಾಥ್ ಐತಾಳ ರಕ್ಷಿಸಿರುವ ಘಟನೆ ನಡೆದಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಪುತ್ತೂರು ನಗರದ ಸೂತ್ರಬೆಟ್ಟುವಿನಲ್ಲಿ ಯಾರೋ ಇಟ್ಟ ನೈಲಾನ್‌ ಹಗ್ಗದ ಉರುಳಿಗೆ ಉಡ ಸಿಕ್ಕಿಬಿದ್ದಿದ್ದು, ಅದು ಹೇಗೂ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಕುತ್ತಿಗೆಯಲ್ಲಿ ಹಗ್ಗ ಬಿಗಿದುಕೊಂಡ ಪರಿಣಾಮ ಉಸಿರಾಡಲು ಕಷ್ಟಪಡುತ್ತಿದ್ದ ಉಡವನ್ನು ಕಂಡ ಸ್ಥಳೀಯರು ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ

ಉರುಳಿಗೆ ಬಿದ್ದ ಬೃಹತ್ ಗಾತ್ರದ ‘ಉಡ’ – ಉರಗತಜ್ಞರಿಂದ ರಕ್ಷಣೆ Read More »

ಕರಾವಳಿ
Scroll to Top