ಕರಾವಳಿ

ಗೋಕುಲನಗರ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಶಿಷ್ಟರ ರಕ್ಷಣೆ ಮಾಡಲು,  ದುಷ್ಟರಿಗೆ  ಶಿಕ್ಷೆ ನೀಡಲು ನಾನಾ ಆವಾತರಗಳನ್ನು ಎತ್ತಿದ ಶ್ರೀ ಕೃಷ್ಣ ಪರಮಾತ್ಮನ ಸಾತ್ಬಿಕ ಗುಣಗಳು ಅಧುನಿಕ ಕಾಲಘಟದಲ್ಲಿನ ನಮಗೆಲ್ಲ ಆದರ್ಶವಾಗಬೇಕು ಎಂದು ನಿವೃತ್ತ ಶಿಕ್ಷಕ ಬಾಲಚಂದ್ರ ಮುಂಚಿತ್ತಾಯ ಹೇಳಿದರು. ಅವರು  ಕಡಬ ತಾಲೂಕಿನ ಕೊಯಿಲ-ರಾಮಕುಂಜ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ಗೋಕುಲನಗರದಲ್ಲಿ ಭಾನುವಾರ ಸಾಯಂಕಾಲ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮರೋಪದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಹಿಂದೂ ಸಮಾಜದ ಸುಭಿಕ್ಷೆಗಾಗಿ ನಾನಾ […]

ಗೋಕುಲನಗರ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ Read More »

ಕರಾವಳಿ

ಕಡಬ: ವಿ.ಹಿಂ.ಪ. ವತಿಯಿಂದ ಮೊಸರು ಕುಡಿಕೆ ಉತ್ಸವ- ಶೋಭಾಯಾತ್ರೆ ಧಾರ್ಮಿಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ವಿಶ್ವಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ, ದುರ್ಗಾವಾಹಿನಿ ಕಡಬ ಪ್ರಖಂಡ ವತಿಯಿಂದ ವಿಹಿಂಪ ಸ್ಥಾಪನಾ ದಿನಾಚರಣೆಯ ಅಂಗವಾಗಿ ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ, ಧಾರ್ಮಿಕ ಸಭೆಯು ಭಾನುವಾರದಂದು  ನಡೆಯಿತು. ಶ್ರೀ ದುರ್ಗಾಂಬಿಕಾ ದೇವಸ್ಥಾನದ ಆಡಳಿತ ಅಧಿಕಾರಿ ಗೋಪಾಲ್ ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಡಬ ಶ್ರೀಕಂಠ ಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಅಧ್ಯಕ್ಷ ಸತೀಶ್ ನ್ಯಾಕ್ ಮೇಲಿನಮನೆ ಅತಿಥಿಯಾಗಿದ್ದರು. ವಿಹಿಂಪ ಕಡಬ ಪ್ರಖಂಡ ಗೌರವಾಧ್ಯಕ್ಷ ವಾಸುದೇವ ಭಟ್

ಕಡಬ: ವಿ.ಹಿಂ.ಪ. ವತಿಯಿಂದ ಮೊಸರು ಕುಡಿಕೆ ಉತ್ಸವ- ಶೋಭಾಯಾತ್ರೆ ಧಾರ್ಮಿಕ ಸಭೆ Read More »

ಕರಾವಳಿ

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಆಲಂಕಾರು ಗ್ರಾಮದ ಹಿಂದೂ ಜಾಗರಣ ವೇದಿಕೆ ಘಟಕ ಹಾಗೂ ಆಲಂಕಾರು ಮೊಸರು ಕುಡಿಕೆ ಉತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಟಾಷ್ಟಮಿ ಅಟ್ಟಿ ಮಡಿಕೆ ಒಡೆಯುವ ಉತ್ಸವವು ಆಲಂಕಾರಿನಲ್ಲಿ ಸೆಪ್ಟೆಂಬರ್ 1ರಂದು ನಡೆಯಿತು. ಆಲಂಕಾರು ಪೇಟೆಯಲ್ಲಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ದೀಪ ಬೆಳಗಿಸಿ ಉದ್ಟಾಟಿಸಿದರು. ಬಳಿಕ  ಆಲಂಕಾರು ಪೇಟೆಯ ವಿವಿದೆಡೆ  ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸುಮಾರು 12 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ Read More »

ಕರಾವಳಿ

ಬೆಂಕಿ ಆಕಸ್ಮಿಕ- ಸುಟ್ಟು ಭಸ್ಮವಾದ ಕಾರು

(ನ್ಯೂಸ್ ಕಡಬ) newskadaba.com  ಸುರತ್ಕಲ್, ಸೆ. 5. ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಬೆಳಿಗ್ಗೆ ನಡೆದಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಅವಘಡದಲ್ಲಿ ಯಾವುದೇ ಪ್ರಾಣಹಾನಿಯುಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಬೆಂಕಿ ಆಕಸ್ಮಿಕ- ಸುಟ್ಟು ಭಸ್ಮವಾದ ಕಾರು Read More »

ಕರಾವಳಿ

ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 05. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಎನ್ಎಸ್ಎಸ್ ಘಟಕದ ವತಿಯಿಂದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬದ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಶಿಕ್ಷಕ ದಿನಾಚರಣೆಯ ಸಂದೇಶವನ್ನು ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಲಿಂಗಪ್ಪ ಎಂ.ಮತ್ತು ಭಾಗ್ಯಶ್ರೀ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್ಎಸ್ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ

ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಆರೋಪಿಯನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೋಟಗಿ ತಾನದ ಮೂಲದ ಸಂದೀಪ್ ರಾಥೋಡ್ (23)  ಎಂದು ಗುರುತಿಸಲಾಗಿದೆ. ಮೃತ ಅಂಜನಾ ವಸಿಷ್ಟ ಎಂಬಾಕೆಯನ್ನು 2018ರಲ್ಲಿ ಫೇಸ್‌ಬುಕ್ ಮೂಲಕ ಭೇಟಿಯಾಗಿದ್ದ.ಅವರ ಸ್ನೇಹ ಅಂತಿಮವಾಗಿ ಪ್ರಣಯ ಸಂಬಂಧವಾಗಿ ಬೆಳೆದು ನಂತರ ಇಬ್ಬರೂ ಮದುವೆಯಾಗಲು ಯೋಜಿಸಿದ್ದರು. ಈ ವೇಳೆ ರಾಥೋಡ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಲಿಖಿತ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇಂದು ಆಟೋರಿಕ್ಷಾ ಚಾಲಕ-ಮಾಲಕರ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕ-ಮಾಲಕರ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಸೆ. 05 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ 2ನೇ ಮಹಡಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮಂಗಳೂರು: ಇಂದು ಆಟೋರಿಕ್ಷಾ ಚಾಲಕ-ಮಾಲಕರ ಸಭೆ Read More »

ಕರಾವಳಿ, ಕರ್ನಾಟಕ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಲ್ಲಿ ಪಡೆದು ಸೆಪ್ಟೆಂಬರ್ 20 ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಗಣೇಶ ಚತುರ್ಥಿ ಹಬ್ಬದ ವೇಳೆ ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 5. ಪ್ರಯಾಣಿಕರ ದಟ್ಟಣೆಯನ್ನು ಸರಿಹೊಂದಿಸಲು, ಕೊಂಕಣ ರೈಲ್ವೆಯು ಗಣೇಶ ಚತುರ್ಥಿ ಹಬ್ಬದ ಸೀಸನ್‌ ನಲ್ಲಿ ಕೇಂದ್ರ ರೈಲ್ವೆ, ಪಶ್ಚಿಮ ರೈಲ್ವೆ ಮತ್ತು ದಕ್ಷಿಣ ರೈಲ್ವೆಯ ಸಮನ್ವಯದಲ್ಲಿ 310 ವಿಶೇಷ ರೈಲುಗಳನ್ನು ಓಡಿಸಲಿದೆ ಎನ್ನಲಾಗಿದೆ. 16ನೇ ಸೆಪ್ಟೆಂಬರ್, 2024 ರವರೆಗೆ ಪ್ರಥಮ ಚಿಕಿತ್ಸಾ ಪೋಸ್ಟ್ ಗಳನ್ನು ಪ್ಯಾರಾ-ಮೆಡಿಕಲ್ ಸಿಬ್ಬಂದಿ 24 ಗಂಟೆಗಳ ಕಾಲ ನಿರ್ವಹಿಸುತ್ತಾರೆ. ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್ ಮತ್ತು ವಿವಿಧ ಉದ್ದೇಶದ ಆರೋಗ್ಯ ಕಾರ್ಯಕರ್ತರು ಚಿಪ್ಲುನ್ ಮತ್ತು ರತ್ನಗಿರಿ

ಗಣೇಶ ಚತುರ್ಥಿ ಹಬ್ಬದ ವೇಳೆ ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ Read More »

ಕರಾವಳಿ
Scroll to Top