ಕರಾವಳಿ

ಚಿನ್ನದ ಪದಕ ವಿಜೇತ ಗೃಹರಕ್ಷಕ ಸಂತೋಷ್ ಸಲ್ಡಾನ ರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ವಿಜೇತರಾಗಿರುವ ಶ್ರೀ ಸಂತೋಷ್ ಸಲ್ಡಾನ ಅವರನ್ನು ಗೃಹರಕ್ಷಕದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ ಚೂಂತಾರು ಅವರು ಮೇರಿಹಿಲ್ ನ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಮಾತನಾಡಿ, ರಾಜ್ಯಮಟ್ಟದ ತರಬೇತಿಯಲ್ಲಿ […]

ಚಿನ್ನದ ಪದಕ ವಿಜೇತ ಗೃಹರಕ್ಷಕ ಸಂತೋಷ್ ಸಲ್ಡಾನ ರವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಸೆ. 05ರಂದು ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 29. ಸೆಪ್ಟೆಂಬರ್ 5ರಂದು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 50 ಶಿಕ್ಷಕರಿಗೆ 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೆಹಲಿಯ ವಿಜ್ಞಾನ ಭವನದಲ್ಲಿ ನೀಡಿ ಗೌರವಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2024 ತಮ್ಮ ವಿದ್ಯಾರ್ಥಿಗಳ ಜೀವನ ಮತ್ತು ಭಾರತದ ವಿಶಾಲ ಶೈಕ್ಷಣಿಕ ಭೂದೃಶ್ಯದ ಮೇಲೆ ಪರಿಣಾಮ ಬೀರಿದ ಶಿಕ್ಷಕರ ಕೊಡುಗೆಗಳನ್ನು ಗುರುತಿಸುವ ಮತ್ತು ಆಚರಿಸುವ ಗುರಿಯನ್ನು ಹೊಂದಿದೆ. ಈ ಪ್ರಶಸ್ತಿ ಪುರಸ್ಕೃತರಿಗೆ 50,000 ರೂ. ಗಳ

ಸೆ. 05ರಂದು ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಪುತ್ತೂರು: ಸರಕಾರಿ ITI ಸಂಸ್ಥೆಗೆ ಅನುಮತಿ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ತಾಲೂಕಿನಲ್ಲಿ ಸರಕಾರಿ ಐಟಿಐ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಸರಕಾರಿ ಐಟಿಐ ಸಂಸ್ಥೆಯನ್ನು ಮಂಜೂರು‌ಗೊಳಿಸಿದ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು. ಪುತ್ತೂರು ತಾಲ್ಲೂಕಿನ ಹೊರಭಾಗದಿಂದ ಅನೇಕ ವಿದ್ಯಾರ್ಥಿಗಳು ಕೈಗಾರಿಕಾ ತರಬೇತಿ ಕೋರ್ಸ್‌ಗಳನ್ನು ವಿದ್ಯಾಭ್ಯಾಸ ಮಾಡಲು ಬರುತ್ತಿರುವುದರಿಂದ ಪ್ರಸ್ತುತ ತಾಲೂಕಿನಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಕಾಲೇಜಿನ ಕೊರತೆ ಇದೆ.

ಪುತ್ತೂರು: ಸರಕಾರಿ ITI ಸಂಸ್ಥೆಗೆ ಅನುಮತಿ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ Read More »

ಕರಾವಳಿ

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಎಲ್ಲಾ ರೀತಿಯ ತಂದೂರಿ ಐಟಂಗಳು ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಆ.29. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಎಲ್ಲಾ ತರಹದ ತಂದೂರಿ ಐಟಂಗಳು ಆರಂಭಗೊಂಡಿದೆ. ತಂದೂರಿ ರೊಟ್ಟಿ, ತಂದೂರಿ ಭಟ್ ರೊಟ್ಟಿ, ತಂದೂರಿ‌ ನಾನ್, ಬಟರ್ ನಾನ್, ತಂದೂರಿ ಪರೋಟ, ಕುಲ್ಚ, ಬಟರ್ ಕುಲ್ಚ, ತಂದೂರಿ‌ ಚಿಕನ್, ತಂದೂರಿ ಟಿಕ್ಕಾ, ತಂದೂರಿ ಹರಿಯಾಳಿ ಟಿಕ್ಕಾ, ತಂದೂರಿ ಕಲ್ಮಿ ಕಬಾಬ್, ರೇಷ್ಮಿ ಕಬಾಬ್, ಮಲಾಯಿ‌ ಕಬಾಬ್ ಸೇರಿದಂತೆ ಎಲ್ಲಾ ತರಹದ ತಂದೂರಿ ಐಟಂಗಳು

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಎಲ್ಲಾ ರೀತಿಯ ತಂದೂರಿ ಐಟಂಗಳು ಲಭ್ಯ Read More »

ಕರಾವಳಿ

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸಿರುವ ಪ್ಲಾಸ್ಟಿಕ್‌ ತ್ಯಾಜ್ಯ ಸಮುದ್ರವನ್ನು ಸೇರದಂತೆ ತಡೆಯುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. ಕರ್ನಾಟಕ ಸ್ಟ್ರೆಥನಿಂಗ್ ಆಫ್ ಕೋಸ್ಟಲ್ ರೆಸಿಲಿಯನ್ಸ್ ಎಕಾನಮಿ (ಕೆ-ಶೋರ್) ಯೋಜನೆಯಡಿ ಅನುಮೋದನೆ ನೀಡಿದ್ದು ಅರಣ್ಯ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ Read More »

ಕರಾವಳಿ

ಮಂಗಳೂರು: ಇಲೆಕ್ಟ್ರಿಕ್ ರಿಕ್ಷಾಗಳ ಸಂಚಾರಕ್ಕೆ ಅನುಮತಿ – ಆಟೋ ಚಾಲಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಇಲೆಕ್ಟಿಕ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರೆಗೆ ಮೆರವಣಿಗೆ ನಡೆಸಿ, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸುವಂತೆ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ ರಿಕ್ಷಾ ಚಾಲಕರನ್ನು

ಮಂಗಳೂರು: ಇಲೆಕ್ಟ್ರಿಕ್ ರಿಕ್ಷಾಗಳ ಸಂಚಾರಕ್ಕೆ ಅನುಮತಿ – ಆಟೋ ಚಾಲಕರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ರಾಜ್ಯಪಾಲರಿಗೆ ಬೆದರಿಕೆ ಹಾಕಿದ ಐವನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೆ ಮುಂದೆ ನೋಡುತ್ತಿದ್ದು, ಅಗತ್ಯ ಬಂದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಮುಡಾ ಹಗರಣದ ಹಿನ್ನೆಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮತ್ತು ಎಂಎಲ್.ಸಿ ಐವನ್ ಡಿಸೋಜಾ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಶಾಸಕ

ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ Read More »

ಕರಾವಳಿ, ಕರ್ನಾಟಕ
crime, arrest, suspected

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 29. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲಿಲವಾಗಿ ವರ್ತಿಸಿದ್ದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಬಂಧಿತನನ್ನು ಭಟ್ಕಳ ಮೂಲದ ಶುರೈಮ್ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸಕ್ಕಿದ್ದ ಉಡುಪಿ ಮೂಲದ ಯುವತಿಯೋರ್ವಳು ಬೆಂಗಳೂರಿನಿಂದ ಉಡುಪಿಗೆ 2 ದಿನಗಳ ಹಿಂದೆ ಪ್ರಯಾಣ ಬೆಳೆಸಿದ್ದಳು. ರೈಲು ಮುಲ್ಕಿ ಸಮೀಪಿಸುತ್ತಿದ್ದ ವೇಳೆ ಅದೇ ರೈಲಿನಲ್ಲಿದ್ದ ಶುರೈಮ್ ಎಂಬಾತ ಆಕೆಯ ಜತೆಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಯುವತಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್ Read More »

ಕರಾವಳಿ

ಸಕಾಲ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿಯೂ ತನಿಖಾ ತಂಡ ರಚನೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಮಟ್ಟದ ತಂಡವು ಪ್ರತಿ ತಿಂಗಳು ಸಭೆ ನಡೆಸಿ ಆಯಾ ಇಲಾಖೆಯಲ್ಲಿ ಸಕಾಲ ಅಭಿಯಾನದಡಿ ಸಲ್ಲಿಕೆಯಾಗಿರುವ ಯೋಜನೆಗಳ ಅರ್ಜಿಗಳ ವರದಿ ಪರಿಶೀಲಿಸಬೇಕು. ಈ ಸಂಬಂಧ

ಸಕಾಲ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ Read More »

ಕರಾವಳಿ, ಕರ್ನಾಟಕ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 73 ಅಂಗನವಾಡಿ ಕಾರ್ಯಕರ್ತೆ ಹಾಗೂ 261 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ ಲೈನ್ ನಲ್ಲಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top