ಕರಾವಳಿ

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ – ಚಾಲಕರ ಹುದ್ದೆಗೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕಚೇರಿಯ ಮೊಬೈಲ್ ಐಸಿಟಿಸಿ ವಾಹನ ಚಾಲಕರ ಒಂದು ಹುದ್ದೆಯ ನೇಮಕಾತಿಗಾಗಿ ಅಗಸ್ಟ್ 31ರಂದು ಬೆಳಿಗ್ಗೆ 11:30 ಗಂಟೆಗೆ ಮಂಗಳೂರಿನ ನೆಹರು ಮೈದಾನ ಎದುರು ಇರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇರ ಸಂದರ್ಶನ ನಡೆಯಲಿದೆ. ಹುದ್ದೆಯು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಯಾಗಿದ್ದು, 2025 ಮಾರ್ಚ್ 31ರ ಅವಧಿಯವರೆಗೆ ಮಾಸಿಕ ವೇತನ ರೂ. 18000/- ನಿಗದಿಪಡಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ […]

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ – ಚಾಲಕರ ಹುದ್ದೆಗೆ ನೇರ ಸಂದರ್ಶನ Read More »

ಕರಾವಳಿ, ಕರ್ನಾಟಕ

ಕಾರಾಗೃಹದಲ್ಲಿ ಡಿಪ್ಲೋಮಾ ಕೋರ್ಸಿಗೆ ಚಾಲನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. 2024-25ನೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ಕಾರಾಗೃಹ ನಿವಾಸಿಗಳಿಗೆ ಗಿಡಮೂಲಿಕೆ ಔಷಧಿ ಮತ್ತು ರೋಗ ತಡೆಯುವಿಕೆ ಕುರಿತಾದ ಡಿಪ್ಲೋಮಾ ಕೋರ್ಸ್‍ಗೆ ಮಂಗಳವಾರದಂದು ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ., ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ,

ಕಾರಾಗೃಹದಲ್ಲಿ ಡಿಪ್ಲೋಮಾ ಕೋರ್ಸಿಗೆ ಚಾಲನೆ Read More »

ಕರಾವಳಿ

ಮಂಗಳೂರು ಕಾರಾಗೃಹದಲ್ಲಿ ಸಸಿ ಮಾರಾಟ ಕೇಂದ್ರ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಬೆಳೆಸಿದ ಸಸಿಗಳ ಮಾರಾಟ ಕೇಂದ್ರವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಕೆಲವು ತಿಂಗಳ ಹಿಂದೆ ಕಾರಾಗೃಹದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿಗಳು, ಕೈದಿಗಳು ಬೆಳೆಸಿದ್ದ ವಿವಿಧ ಸಸಿಗಳ ಸಸ್ಯ ಕ್ಷೇತ್ರವನ್ನು ಕಂಡು ಸಂತಸಗೊಂಡಿದ್ದರು. ಇವುಗಳ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿ ಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರಾಗೃಹದ ಮುಂಭಾಗದ ಜಾಗದಲ್ಲಿ ಸಸಿ ಮಾರಾಟ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಮಂಗಳೂರು ಕಾರಾಗೃಹದಲ್ಲಿ ಸಸಿ ಮಾರಾಟ ಕೇಂದ್ರ ಉದ್ಘಾಟನೆ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ/ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು  ವಿಶ್ವವಿದ್ಯಾನಿಲಯದ ಅಧಿಕೃತ

ಮಂಗಳೂರು ವಿಶ್ವವಿದ್ಯಾನಿಲಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪದಕ ಪಡೆದು ಜವಾಬ್ದಾರಿ ಹೆಚ್ಚಿದೆ – ಡಾ ಚೂಂತಾರು ರಾಷ್ಟ್ರಪತಿ ಪದಕ ಪುರಸ್ಕೃತ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಛೇರಿ  ಸಿಬ್ಬಂದಿಗಳು ಹಾಗು ಗೃಹರಕ್ಷಕರಿಂದ 2024ನೇ ಸಾಲಿನ ರಾಷ್ಟ್ರಪತಿ ಪದಕ ಪುರಸ್ಕೃತರಾದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.   ಸನ್ಮಾನವನ್ನು ಸ್ವೀಕರಿಸಿದ ಡಾ|| ಮುರಲೀ ಮೋಹನ ಚೂಂತಾರುರವರು ಮಾತನಾಡಿ, ಈ ಪದಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹೋದರ ಸಹೋದರಿ ಗೃಹರಕ್ಷಕರು ಮತ್ತು ಗೃಹರಕ್ಷಕಿಯರಿಗೆ ಸಲ್ಲುತ್ತದೆ. ಮುಂದೆಯೂ ನಿಮ್ಮ ಸಹಕಾರವನ್ನು

ಪದಕ ಪಡೆದು ಜವಾಬ್ದಾರಿ ಹೆಚ್ಚಿದೆ – ಡಾ ಚೂಂತಾರು ರಾಷ್ಟ್ರಪತಿ ಪದಕ ಪುರಸ್ಕೃತ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್- ಕಡಬದ ಬ್ಯೂಲಾ ಪಿ.ಟಿ ಅವರಿಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಮೈಸೂರು ಎಸ್.ಬಿ.ಆರ್.ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 17 ಮತ್ತು 18ರಂದು ನಡೆದ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮರ್ದಾಳದ ಬ್ಯೂಲಾ ಪಿ ಟಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.   64 ಕೆಜಿ ವಿಭಾಗದಲ್ಲಿ 67 ಕೆಜಿ ಸ್ನ್ಯಾಚ್ ಮತ್ತು 93 ಕೆಜಿ ಕ್ಲೀನ್ ಮತ್ತು ಜರ್ಕಗಳನ್ನು ಎತ್ತಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಈಕೆ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ವರ್ಷದ ಎಂ.ಕಾಂ. ವಿದ್ಯಾರ್ಥಿನಿ ಹಾಗೂ

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್- ಕಡಬದ ಬ್ಯೂಲಾ ಪಿ.ಟಿ ಅವರಿಗೆ ಬೆಳ್ಳಿ ಪದಕ Read More »

ಕರಾವಳಿ

ಮಂಗಳೂರು: ‘ಜುಲೇಖಾ ಯೆನೆಪೋಯ’ ಸಂಸ್ಥೆಯ ಸಾಧನೆ      ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿ 

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ನಗರದಲ್ಲಿ ಇದೇ ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿಯನ್ನು (ಆಟೋಲೋಗಸ್ ಟ್ರಾನ್ಸ್ ಪ್ಲಾಂಟ್) ದೇರಳಕಟ್ಟೆಯ ಜುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಖ್ಯಾತ ರಕ್ತ ಶಾಸ್ತ್ರಜ್ಞ, ಡಾ| ರಾಜೇಶ್ ಕೃಷ್ಣ ಅವರ ನೇತೃತ್ವದಲ್ಲಿ ನಡೆಸಲಾಯಿತು. ಕದ್ರಿ ಮೂಲದ 59 ವಯಸ್ಸಿನ ವ್ಯಕ್ತಿಯೋರ್ವರು ಮೆದುಳಿನ ಲಿಂಪೋಮಾ ಕಾಯಿಲೆಗೆ ಕೀಮೋಥೆರಪಿಯನ್ನು ಪಡೆಯುತ್ತಿದ್ದರು. ಜುಲೇಖಾ ಯೆನೆಪೋಯ ಆಸ್ಪತ್ರೆಗೆ ಬಂದ ಈ ವ್ಯಕ್ತಿಯನ್ನು ಸ್ವಅಸ್ಥಿ ಮಜ್ಜಿ ಕಸಿಗೆ ಒಳಪಡಿಸಲು ನಿರ್ಧರಿಸಲಾಯಿತು. ಅವರ

ಮಂಗಳೂರು: ‘ಜುಲೇಖಾ ಯೆನೆಪೋಯ’ ಸಂಸ್ಥೆಯ ಸಾಧನೆ      ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿ  Read More »

ಕರಾವಳಿ

ಹಿಂದಿನ ನಿಯಮಗಳನ್ನು ಅನುಸರಿಸುವಂತೆ ಆಗ್ರಹ   ಎನ್ ಎಸ್ ಯುಐ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 21.  ಈ ಹಿಂದೆ ಅನುಸರಿದ ನಿಯಮಗಳನ್ನೇ ಕಾಲೇಜಿನಲ್ಲಿ ಮುಂದುವರೆಸುವಂತೆ ಆಗ್ರಹಿಸಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ (ಎನ್‌ ಎಸ್‌ ಯುಐ) ನೇತೃತ್ವದಲ್ಲಿ ಕಾಲೇಜಿನ ಮುಂಭಾಗದ ಗೇಟ್ ಎದುರಿನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿನಿ ಸ್ವಾತಿ ಪೂಜಾರಿ, ಕಾಲೇಜಿನಲ್ಲಿ ಯಾವುದೇ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಬೆಂಬಲ ಸಿಗುತ್ತಿಲ್ಲ. ಅಲ್ಲದೇ ಏನೇ ಮಾಡುವುದಿದ್ದರೂ ವಿದ್ಯಾರ್ಥಿಗಳೇ ಕೈಯಿಂದ ಹಣ ಹಾಕಿ ಮಾಡಬೇಕಾಗಿದೆ. ಕಾಲೇಜಿನಿಂದಲೇ ಹಿಂದಿನಂತೆ

ಹಿಂದಿನ ನಿಯಮಗಳನ್ನು ಅನುಸರಿಸುವಂತೆ ಆಗ್ರಹ   ಎನ್ ಎಸ್ ಯುಐ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಕರಾವಳಿ

ಅಪೆಕ್ಸ್ ಬ್ಯಾಂಕಿನ ಸಿ.ಜಿ.ಎಂ ಹುದ್ದೆಗೇರಿದ ದ.ಕ. ಜಿಲ್ಲೆಯ ಮೊದಲ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಬೆಂಗಳೂರು ಇದರ ಮುಖ್ಯ ಪ್ರಧಾನ ವ್ಯವಸ್ಥಾಪಕ (ಹಣಕಾಸು, ಲೆಕ್ಕ ಪರಿಶೋಧನೆ ವಿಭಾಗ) ಹುದ್ದೆಗೆ ಸುಳ್ಯ ತಾಲೂಕಿನ ಚೊಕ್ಕಾಡಿಯ ವಸಂತ ಕುಮಾರ್ ಪೋನಡ್ಕ ನೇಮಕಗೊಂಡಿದ್ದಾರೆ.   ಇವರು ಭಡ್ತಿಯನ್ನು ಹೊಂದಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕಿನ ಸಿ.ಜಿ.ಎಂ. ಹುದ್ದೆಗೇರಿದ ದ.ಕ. ಜಿಲ್ಲೆಯ ಪ್ರಥಮ ವ್ಯಕ್ತಿ ಇವರಾಗಿದ್ದಾರೆ. ಇವರು ಪೋನಡ್ಕ ದಿ. ಪರಮೇಶ್ವರಯ್ಯ ಮತ್ತು ದಿ. ಸಾವಿತ್ರಿ ದಂಪತಿ ಪುತ್ರ.

ಅಪೆಕ್ಸ್ ಬ್ಯಾಂಕಿನ ಸಿ.ಜಿ.ಎಂ ಹುದ್ದೆಗೇರಿದ ದ.ಕ. ಜಿಲ್ಲೆಯ ಮೊದಲ ವ್ಯಕ್ತಿ..! Read More »

ಕರಾವಳಿ, ಕರ್ನಾಟಕ

ಕಾಡಾನೆ ದಾಳಿ- 150ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 21. ಕಾಡಾನೆ ದಾಳಿ ನಡೆಸಿದ ಪರಿಣಾಮ 150ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶಗೊಂಡಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ತೆಕ್ಕನಾಟ್ ನಿವಾಸಿ ಟಿ.ಎ.ಥಾಮಸ್ ಎಂಬವರಿಗೆ ಸೇರಿದ ಕೃಷಿ ತೋಟಕ್ಕೆ ಕಾಡಾನೆ ನುಗ್ಗಿ 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನಾಶಗೊಳಿಸಿದೆ ಎನ್ನಲಾಗಿದೆ. ಈ ಭಾಗದಲ್ಲಿ ಕಾಡಾನೆಗಳು ಪದೇ ಪದೇ ಕೃಷಿ ತೋಟಕ್ಕೆ ದಾಳಿ ನಡೆಸಿ ಹಾನಿಗೊಳಿಸುತ್ತಿರುವುದು ಕೃಷಿಕರು ಆತಂಕಗೊಳ್ಳುವಂತೆ ಮಾಡಿದೆ. ಶೀಘ್ರವೇ ಆನೆಗಳನ್ನು ಅರಣ್ಯದೊಳಗೆ ಸ್ಥಳಾಂತರಿಸುವ

ಕಾಡಾನೆ ದಾಳಿ- 150ಕ್ಕೂ ಹೆಚ್ಚು ಅಡಿಕೆ ಗಿಡ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top