ಕರಾವಳಿ

ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು – ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅವ್ಯವಸ್ಥೆಯ ವಿರುದ್ಧ ಹೋರಾಡಿದವರು ಶೂದ್ರರನ್ನು ಅಸ್ಪೃಶ್ಯರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಶ್ರಮಿಸಿದವರು ಎಂದು  ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಮಂಗಳವಾರದಂದು  ಗೋಕರ್ಣನಾಥ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ, ಗೋಕರ್ಣನಾಥೇಶ್ವರ  ಕಾಲೇಜು ಇವರ ಸಹಯೋಗದೊಂದಿಗೆ ನಡೆದ ನಾರಾಯಣ […]

ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು – ಶಾಸಕ ಕಾಮತ್ Read More »

ಕರಾವಳಿ, ಕರ್ನಾಟಕ

ಮಹಾತ್ಮಾ ಗಾಂಧೀಜಿ 155ನೇ ಜಯಂತಿ -ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ

ಮಹಾತ್ಮಾ ಗಾಂಧೀಜಿ 155ನೇ ಜಯಂತಿ -ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರೀಕೃತ ಉಚಿತ ಕಣ್ಣಿನ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 21. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಯಿಲ ಮತ್ತು ಕೆಮ್ಮಾರ ಒಕ್ಕೂಟ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಸದಸ್ಯೆ ಶ್ರೀಮತಿ ವಾರಿಜಾಕ್ಷಿಯವರು

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರೀಕೃತ ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇಂದು (ಬುಧವಾರ) ಕಡಬ ತಾಲೂಕಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ

ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಯ್ಯೂರು ಉದ್ದೋಳೆ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಸಚಿನ್ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪ್ರಥಮ ಪಿಯುಸಿಯ ಪ್ರಥಮೇಶ್ ಎಂದು ಗುರುತಿಸಲಾಗಿದೆ. ಪ್ರಥಮೇಶ್ ಸೋಮವಾರದಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಗ್ಗೆ ಆತನ ಮೃತದೇಹ ಅವರ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಲಂಕಾರು: ಕುಳಿತ ಸ್ಥಿತಿಯಲ್ಲೇ ಭದ್ರತಾ ಸಿಬ್ಬಂದಿ ಮೃತ್ಯು…!!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕರ್ತವ್ಯದಲ್ಲಿದ್ದಾಗಲೇ ಕುಳಿತ ಸ್ಥಿತಿಯಲ್ಲಿ ಭದ್ರತಾ ಸಿಬ್ಬಂದಿಯೋರ್ವರು ಮೃತಪಟ್ಟಿರುವ ಘಟನೆ ಅಲಂಕಾರಿನಲ್ಲಿ ನಡೆದಿದೆ.   ಮೃತಪಟ್ಟವರನ್ನು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಆಗಸ್ಟ್ 17ರಂದು ರಾತ್ರಿ 8 ಗಂಟೆಯ ವೇಳೆ ನೈಟ್ ಡ್ಯೂಟಿಗೆ ಹಾಜರಾಗಿದ್ದರು. ಆದರೆ ಮರುದಿನ ಸ್ಥಳೀಯರು ಬಂದು ನೋಡಿದಾಗ ಅವರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ

ಆಲಂಕಾರು: ಕುಳಿತ ಸ್ಥಿತಿಯಲ್ಲೇ ಭದ್ರತಾ ಸಿಬ್ಬಂದಿ ಮೃತ್ಯು…!! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ದೇವರಾಜ್ ಅರಸ್ 109ನೇ ಜನ್ಮದಿನ ಆಚರಣೆ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 20. ದೇವರಾಜ್ ಅರಸ್ 109 ನೇ ಜನ್ಮದಿನಾಚರಣೆಯನ್ನು ಬಂಟ್ವಾಳ ತಾಲೂಕು ಪಂಚಾಯತ್, ಬಂಟ್ವಾಳ ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಂಟ್ವಾಳ ಇವರ ಆಶ್ರಯದಲ್ಲಿ ಇಂದು ಬಿ.ಸಿ.ರೋಡಿನ ತಾ.ಪಂ. ಎಸ್ ಜೆ ಎಸ್ ಆರ್ ವೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರು, ವಿದ್ಯಾರ್ಥಿಗಳು ದೇವರಾಜು ಅರಸು ಅವರ ದೂರದೃಷ್ಟಿಯ ಚಿಂತನೆಗಳ ಬಗ್ಗೆ ಅಧ್ಯಯನ ನಡೆಸಿ, ಅದನ್ನು ತಮ್ಮ

ಬಂಟ್ವಾಳ: ದೇವರಾಜ್ ಅರಸ್ 109ನೇ ಜನ್ಮದಿನ ಆಚರಣೆ Read More »

ಕರಾವಳಿ

ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ -ದ.ಕ. ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ರಿಕ್ಷಾ ಚಾಲಕರ ಸಂಘಟನೆ ಸ್ಥಾಪನೆಯಾಗಿರುವುದೇ ನಮ್ಮ ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ, ಸಂಘಟನೆ ಈ ಹಿಂದೆಯೂ ರಿಕ್ಷಾ ಚಾಲಕರ ಹಲವು ಸಮಸ್ಯೆಗಳಿಗಾಗಿ ಹೋರಾಟ ನಡೆಸಿ ಯಶಸ್ವಿಯಾಗಿದೆ ಮುಂದಿನ ದಿನಗಳಲ್ಲೂ ನಮ್ಮವರ ಏಳಿಗೆಗಾಗಿ ನಮ್ಮ ಸಂಘ ಬದ್ದ ಎಂದು ದಕ್ಷಿಣ ಕನ್ನಡ ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸ ನೀಡಿದ್ದಾರೆ. ಅವರು ಆಗಸ್ಟ್ 18ರ ಭಾನುವಾರದಂದು ಬಿಜೈ ಸಂತ ಫ್ರಾನ್ಸಿಸ್ ಕ್ಷೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದ್ ಕುಷ್ಟ್ ನಿವಾರನ್

ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ -ದ.ಕ. ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸೆ Read More »

ಕರಾವಳಿ, ಕರ್ನಾಟಕ

ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣ ಕಳ್ಳತನ      ಸಮೀಪದ ಶಾಲೆಯಲ್ಲಿ ಪತ್ತೆ..!                           

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 20.  ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣವನ್ನು ಕದ್ದ ಕಳ್ಳ, ಅದನ್ನು ಸಮೀಪದ ಶಾಲೆಯೊಂದರಲ್ಲಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ. ದೇಗುಲದಲ್ಲಿ ಸತ್ಯನಾರಾಯಣ ಪೂಜೆ ನಡೆದಿದ್ದು, ಹಣ ಪತ್ತೆಯಾದ ಪವಾಡ ಎಂದು ಸ್ಥಳೀಯರು ತಿಳಿಸಿದ್ದಾರೆ. ದೇವಸ್ಥಾನದ ಅರ್ಚಕರ ಕಚೇರಿಯಿಂದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಜೊತೆಗೆ ಪಕ್ಕದ ಮೂರು ಮನೆಗಳಲ್ಲಿ ಅಲ್ಪಸ್ವಲ್ಪ ಹಣವನ್ನೂ ಕದ್ದಿದ್ದಾನೆ ಎನ್ನಲಾಗಿದೆ.  

ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣ ಕಳ್ಳತನ      ಸಮೀಪದ ಶಾಲೆಯಲ್ಲಿ ಪತ್ತೆ..!                            Read More »

ಕರಾವಳಿ
Scroll to Top