ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ‌ ಚೂರಿಯಿರಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ‌ ಚೂರಿಯಿರಿತ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 20.  ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೋಕಲದ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಎಂದು ಗುರುತಿಸಲಾಗಿದೆ. ಮುಂಜಾನೆ 5 ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು  ಎನ್ನಲಾಗಿದೆ.  

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಐವಾನ್ ಡಿಸೋಜಾ ಸಂವಿಧಾನ ವಿರೋಧಿ ಹೇಳಿಕೆ ಆರೋಪ – ದೂರು ಸ್ವೀಕರಿಸದ ಬರ್ಕೆ ಠಾಣೆಯೆದುರು ಬಿಜೆಪಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ತನಿಖೆ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಎಂಎಲ್.ಸಿ ಐವನ್ ಡಿಸೋಜಾ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದು, ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.   ಮಂಗಳೂರಿನ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ವೇಳೆ ಐವನ್

ಐವಾನ್ ಡಿಸೋಜಾ ಸಂವಿಧಾನ ವಿರೋಧಿ ಹೇಳಿಕೆ ಆರೋಪ – ದೂರು ಸ್ವೀಕರಿಸದ ಬರ್ಕೆ ಠಾಣೆಯೆದುರು ಬಿಜೆಪಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ಸಮೀಪದ ಶಾಲಾ ಬಾವಿಯಲ್ಲಿ ಪತ್ತೆಯಾದ ಕುರಿತು ತಾಲೂಕಿನ ಕೇನ್ಯ ಗ್ರಾಮದಿಂದ ವರದಿಯಾಗಿದೆ. ಮೃತರನ್ನು ಬೀದಿಗುಡ್ಡೆ ಸಮೀಪ ಕೇನ್ಯ ಶಾಲೆ ಬಳಿಯ ನಿವಾಸಿ ಬಾಬು ಪೂಜಾರಿ ಎಂದು ಗುರುತಿಸಲಾಗಿದೆ. ಆ. 19ರ ಮುಂಜಾನೆ ಮನೆಯಿಂದ ನಾಪತ್ತೆಯಾಗಿದ್ದ ಬಾಬು ಪೂಜಾರಿಯನ್ನು ಮನೆಯವರು ಹುಡುಕಾಟ ನಡೆಸಿದಾಗ ಶಾಲಾ ಬಾವಿಯ ಕಟ್ಟೆಯಲ್ಲಿ ಲುಂಗಿ, ಟಾರ್ಚ್ ಮತ್ತು ಚಪ್ಪಲಿ ಪತ್ತೆಯಾಗಿತ್ತು. ಹೀಗಾಗಿ ಬಾವಿಗೆ ಹಾರಿರಬಹುದೆಂಬ ಶಂಕೆಯಿಂದ ಸ್ಥಳೀಯರು ಬಾವಿ ಶೋಧ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಐವನ್ ಡಿಸೋಜಾ ವಿರುದ್ದ ಯುವಮೋರ್ಚಾದಿಂದ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ವೇಳೆ ಐವನ್ ಡಿ ಸೋಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ

ಐವನ್ ಡಿಸೋಜಾ ವಿರುದ್ದ ಯುವಮೋರ್ಚಾದಿಂದ ಪೊಲೀಸರಿಗೆ ದೂರು Read More »

ಕರಾವಳಿ, ಕರ್ನಾಟಕ
Crime

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ನೆಹರೂ ಮೈದಾನದಲ್ಲಿ ಇತ್ತೀಚೆಗೆ ಫುಟ್ಬಾಲ್ ಪಂದ್ಯದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ. ದಿಯಾನ್, ತಸ್ಲೀಮ್, ಸಲ್ಮಾನ್ ಎಂಬವರ ಸಹಿತ ಅಪ್ರಾಪ್ತ ವಯಸ್ಸಿನ ಇನ್ನಿಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಹಲ್ಲೆಗೈದಿರುವ

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಡಿಪ್ಲೋಮಾ ಕೋರ್ಸನ್ನು ಪ್ರಾರಂಭಿಸಿದ್ದು ನೇರ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 31ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಕೋರ್ಸ್ ಮುಗಿಸಿದ ಬಳಿಕ ಪ್ರತಿಷ್ಟಿತ ಕಂಪನಿಗಳಾದ ಇನ್ಫೋಸಿಸ್, ವಿಪ್ರೋ, ಟಿ.ಸಿ.ಎಸ್. ಮುಂತಾದ ಕಂಪನಿಗಳಲ್ಲಿ 100% ಉದ್ಯೋಗಾವಕಾಶವಿರುತ್ತದೆ. ಹಾಗೆಯೇ ಇತರ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್

ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯಶವಂತ (21) ಎಂದು ಗುರುತಿಸಲಾಗಿದೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದ ದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ  ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕಾಪು, ಆ. 20.  ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. 2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top