ಕರಾವಳಿ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 19. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉದ್ಯಮಿ ಮತ್ತು ಪ್ರಗತಿಪರ ಕೃಷಿಕರೂ ಆದ ಶ್ರೀಯುತ ಪದ್ಮನಾಭ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರಾದ ಶ್ರೀಮತಿ ನಂದನಾ ಪಿ ಶೆಟ್ಟಿ ಇವರು ಕಲರ್ ಪ್ರಿಂಟರನ್ನು ಕೊಡುಗೆಯಾಗಿ ನೀಡಿರುತ್ತಾರೆ.   ದಕ್ಷಿಣ ಕನ್ನಡ ಎಸ್‌.ಡಿ.ಎಂ.ಸಿ ಜಿಲ್ಲಾ ಸಮನ್ವಯ ವೇದಿಕೆ ಕಾರ್ಯದರ್ಶಿಯೂ, ಕೆಮ್ಮಾರ ಎಸ್‌.ಡಿ.ಎಂ.ಸಿ ಸದಸ್ಯರೂ […]

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ Read More »

ಕರಾವಳಿ, ಕರ್ನಾಟಕ

ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಸೋಮವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ಸಮೂಹ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರೂ, ಪ್ರಾಥಮಿಕ ವಿಭಾಗದ ಮೇಲ್ವಿಚಾರಕಿ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಪುರಾಣ ಮಹಾಭಾರತ ಇತಿಹಾಸಗಳಲ್ಲಿ ರಕ್ಷಾಬಂಧನ ಆಚರಣೆಯಲ್ಲಿತ್ತು. ಪ್ರಸ್ತುತ ಸಮಾಜದಲ್ಲಿ ಇಂತಹ ರಕ್ಷೆಯನ್ನು ಕಟ್ಟಿ ಸಹೋದರ-ಸಹೋದರಿಯರು ಎಂಬ ಭ್ರಾತೃತ್ವದ ಭಾವವನ್ನು ಮೂಡಿಸಿ ನಮ್ಮ ಹಿಂದೂ ಸಮಾಜದ ರಕ್ಷಣೆಯಲ್ಲಿ ನಾವು ಕೈಜೋಡಿಸುವುದರ ಮೂಲಕ ಭಾರತಮಾತೆಯ ರಕ್ಷಣೆ ಮಾಡೋಣ ಎಂದು

ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ Read More »

ಕರಾವಳಿ, ಕರ್ನಾಟಕ

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ  ಕಾರ್ಯಕ್ರಮವನ್ನು ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಸಮಿತಿ ಕೋಶಾಧಿಕಾರಿಯಾದ ಶ್ರೀ ಲಿಂಗಪ್ಪ ಜೆ. ಇವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಹಿನ್ನೆಲೆ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು. ತದನಂತರ ಶಾಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಮಾತಾಜಿ ಶ್ವೇತಾ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ Read More »

ಕರಾವಳಿ

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.   ಮೃತಪಟ್ಟವರನ್ನು ವೃತ್ತಿಯಲ್ಲಿ ಕ್ಷೌರಿಕರಾಗಿದ್ದ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ಸುರೇಶ್‌ ಭಂಡಾರಿ(45) ಎಂದು ಗುರುತಿಸಲಾಗಿದೆ. ಸುರೇಶ್ ರವರು ಬೈಕಿನಲ್ಲಿ ಅಮ್ಚಿನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್‌ ನಡುವೆ ಅಪಾಘಾತ ನಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರದಂದು ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಮಾಡಿರುವ ಘಟನೆ ಲಾಲ್ ಭಾಗ್ ಜಂಕ್ಷನ್ ಬಳಿ ನಡೆದಿದೆ.   ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲೆಸೆದಿದ್ದಾರೆ. ಪರಿಣಾಮ ಬಸ್‌ ನ ಎದುರಿನ ಗಾಜು

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 19.  ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 19. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್ ಎಂಬಾತನನ್ನು ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ವರದಿಯಾಗಿದೆ.   ಈತ ಹರೇಕಳ ಗ್ರಾಮದ ಕಡೆಂಜತೋಟ ನಿವಾಸಿ ಆಗಿದ್ದು, ಈತನ ವಿರುದ್ದ ಕೊಣಾಜೆ, ಉಳ್ಳಾಲ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣಾ

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…! Read More »

ಕರಾವಳಿ, ಕ್ರೈಮ್ ನ್ಯೂಸ್

ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 19.  ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸ್ಪೀಕರ್ ಯು.ಟಿ.ಖಾದರ್ ಅವರು, “ಹಿಂದೆ ತುಳು ಭಾಷೆ ನಮ್ಮ ಜಿಲ್ಲೆಗೆ ಮಾತ್ರ ಸೀಮಿತ ಎಂಬ ಮಾತಿತ್ತು.

ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ Read More »

ಕರಾವಳಿ

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 19. ಇಲ್ಲಿನ ಉರಿಮಜಲು ಎಂಬಲ್ಲಿ ಭಾನುವಾರದಂದು ಬೆಳಗ್ಗೆ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಎಂಬವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರೀಫ್ ರವರು ಉರಿಮಜಲು ಎಂಬಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಹಾಫೀಲ್ ಮಾತಿಗೆ ಇಳಿದಿದ್ದು

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!! Read More »

ಕರಾವಳಿ

ಕೋಡಿಂಬಾಳ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ರಹ್ಮಾನಿಯ ಜುಮ್ಮಾ ಮಸೀದಿ ಕೋಡಿಂಬಾಳ ಇದರ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಮಸೀದಿಯ ವಠಾರದಲ್ಲಿ  ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಫಝಲ್ ಕೋಡಿಂಬಾಳರವರು ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಬಾಷಣವನ್ನು ಜಮಾತ್ ಖತೀಬರಾದ ಅಬೂಬಕ್ಕರ್ ಮದನಿ ಉಸ್ತಾದ್ ರವರು ಸವಿಸ್ತಾರವಾಗಿ ನುಡಿದರು.  ಈ ಸಂದರ್ಭದಲ್ಲಿ ಮದ್ರಾಸ ಅಧ್ಯಾಪಕರು ವಿದ್ಯಾರ್ಥಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು.  ಇದೇ ಸಂದರ್ಭದಲ್ಲಿ SSF, SYS, KJM ಕೋಡಿಂಬಾಳ ಇದರ ವತಿಯಿಂದ ಮದ್ರಸಾ ವಿದ್ಯಾರ್ಥಿಗಳಿಗೆ ಮತ್ತು ಓಂತ್ರಡ್ಕ

ಕೋಡಿಂಬಾಳ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top