ಕರಾವಳಿ

ದ.ಕ. ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧ ವಾಪಸ್ – ಡಿಸಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಇಲ್ಲಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ವ್ಯಾಪ್ತಿಯ ‘ನೇತ್ರಾವತಿ ಪೀಕ್‌ ಪ್ರದೇಶ’ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧವನ್ನು ಜಿಲ್ಲಾ ಆಡಳಿತ ವಾಪಸ್‌ ಪಡೆದಿದೆ. ಜಿಲ್ಲೆಯ ಗಿರಿತಾಣಗಳ ಚಾರಣವನ್ನು ಹೋಂ ಸ್ಟೇ, ರೆಸಾರ್ಟ್‌ ಹಾಗೂ ಅರಣ್ಯ ಇಲಾಖೆಯಿಂದ ಕೈಗೊಳ್ಳುವ ಚಾರಣ-ಸಾಹಸ ಚಟುವಟಿಕೆಗಳನ್ನು ಅಗತ್ಯ ಮುಂಜಾಗೃತಾ ಕ್ರಮಗಳೊಂದಿಗೆ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ. ವ್ಯಾಪಕ ಮಳೆಯ ಹಿನ್ನೆಲೆ ಭೂಕುಸಿತ, ಗುಡ್ಡ ಕುಸಿತ, […]

ದ.ಕ. ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧ ವಾಪಸ್ – ಡಿಸಿ ಮುಲ್ಲೈ ಮುಹಿಲನ್ Read More »

ಕರಾವಳಿ, ಕರ್ನಾಟಕ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 17. ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯರವರು ತಕ್ಷಣವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ತನಿಖೆ ನಡೆಯುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವಂತೆ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.     ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವನ್ನೂ ಕೂಡಾ ಪ್ರಶ್ನಿಸುವ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ

ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 17.  ಇತ್ತೀಚೆಗಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದ, ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ ದೇವಸ್ಥಾನದ ಜೀರ್ಣೋದ್ಧಾರ ಮಾಡಲಾಗಿತ್ತು. ಅಂದಾಜು 40 ಸಾವಿರಕ್ಕೂ ಅಧಿಕ ನಗದನ್ನು ಕಳ್ಳ ಕಳವು ಮಾಡಿದ್ದು, ಈ ಹಣವನ್ನು ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳ ಪರಾರಿಯಾಗಿದ್ದು, ಈತನ ಕಳ್ಳತನದ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..! Read More »

ಕರಾವಳಿ

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕೋಲ್ಕತ್ತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೋರ್ವಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರದ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಶಾಂತಿಯುತ ಮೆರವಣಿಗೆ ನಡೆಯಿತು.   ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಭಾಗವಹಿಸಿದ್ದರು.

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ Read More »

ಕರಾವಳಿ, ಕರ್ನಾಟಕ

ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 17. ಇಲ್ಲಿನ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ನೆರವೇರಿಸಿ ಭಕ್ತರಿಂದ ಹೆಚ್ಚಿನ ದಕ್ಷಿಣೆಗೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿ ದೇವಳದ ಅರ್ಚಕ ಶಿವ ಪ್ರಕಾಶ್ ಪಾಂಡೇಲು ಎಂಬವರನ್ನು ಅಮಾನತುಗೊಳಿಸಿದ ಕುರಿತು ವರದಿಯಾಗಿದೆ. ಇತ್ತೀಚಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶದ ಭಕ್ತರ ತಂಡವೊಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿಕೊಂಡು ತಮ್ಮ ಇಷ್ಟಾರ್ಥ ದಕ್ಷಿಣೆಯನ್ನೂ ಅರ್ಚಕರಿಗೆ ನೀಡಿದ್ದಾರೆ. ಆದರೆ ಭಕ್ತರು ನೀಡಿರುವ ದಕ್ಷಿಣೆ ಕಡಿಮೆಯಾಯಿತೆಂದು ಸಿಟ್ಟಿಗೆದ್ದ ಅರ್ಚಕ ಭಕ್ತರು

ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ರಕ್ಷಿತಾರಣ್ಯದಲ್ಲಿ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಸಂಪೂರ್ಣ ಕೊಳೆತುಹೋದ ಮೃತದೇಹದ ಅಸ್ಥಪಂಜರವೊಂದು ಪತ್ತೆಯಾಗಿರುವ ಕುರಿತು ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೊಟ್ಟಡ್ಕ ಬಳಿಯ ಕೊಂಬಾರು ರಕ್ಷಿತಾರಣ್ಯದ ಪ್ರದೇಶದ ಉಡೆಂಜಿಪಲ್ಲ ತೋಡು ಪ್ರದೇಶದಿಂದ ವರದಿಯಾಗಿದೆ. ಸ್ಥಳೀಯರ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಪೊಲೀಸರಿಗೆ ತಲೆ ಬುರುಡೆ, ಎದೆ ಮೂಳೆಗಳು ಹಾಗೂ ಕಾಲಿನ ಮೂಳೆಗಳು ಮಾತ್ರ ಕಂಡುಬಂದಿದ್ದು, ಮಾಂಸಖಂಡಗಳು ಮತ್ತು ಚರ್ಮ ಇಲ್ಲದೇ ಇದ್ದು, ಮೃತದೇಹವು ಪುರುಷನದ್ದೋ ಅಥವಾ ಮಹಿಳೆಯದ್ದೋ ಎನ್ನುವುದು ತಿಳಿದುಬಂದಿಲ್ಲ. ಸುಮಾರು 4ರಿಂದ 6 ತಿಂಗಳ ಹಿಂದೆ

ಕಡಬ ರಕ್ಷಿತಾರಣ್ಯದಲ್ಲಿ ಅಸ್ಥಿಪಂಜರ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                            

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17.  ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ನಗರದ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳ್ಳಾಲ ಎಎಸ್‌ಐ ಪತ್ನಿ, ಶಿಕ್ಷಕಿ ಶಾಹಿದಾ (47) ಎಂದು ಗುರುತಿಸಲಾಗಿದೆ. ಶಾಹಿದಾ ತನ್ನ ಸ್ಕೂಟಿಯಲ್ಲಿ ಶಾಲೆಯ ಕಡೆಗೆ ಹೋಗುತ್ತಿದ್ದಳು. ಈ ವೇಳೆ ಆಕೆಗೆ ಕಾರೊಂದು ಢಿಕ್ಕಿ ಹೊಡೆದಿದ್ದು, ತಕ್ಷಣ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                             Read More »

ಕರಾವಳಿ, ಕ್ರೈಮ್ ನ್ಯೂಸ್

ಗುರುಪುರ ಅಡ್ಡೂರು ಸೇತುವೆ: ಸಂಚಾರ ಮಾರ್ಗದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ  101ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ  ಹಾಗೂ ಸಂಚಾರ ಮಾರ್ಗ ಬದಲಾವಣೆ ಮಾಡುವಂತೆ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ  ಆದೇಶಿಸಿದ್ದಾರೆ. ಅಡ್ಡೂರು ಸೇತುವೆಯ ಮೂಲಕ ಸುರತ್ಕಲ್ – ಕಬಕ ರಾಜ್ಯ ಹೆದ್ದಾರಿ  101ರ ರಸ್ತೆಯಲ್ಲಿ

ಗುರುಪುರ ಅಡ್ಡೂರು ಸೇತುವೆ: ಸಂಚಾರ ಮಾರ್ಗದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ಕೆಎಸ್ಆರ್ಟಿಸಿ; ಉತ್ತಮ ಸೇವಾ ನೌಕರರಿಗೆ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು ಬಸ್ ನಿಲ್ದಾಣದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಿರಿಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಧ್ವಜಾರೋಹಣಗೈದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ನೌಕರರಿಗೆ ಶ್ಲಾಘನೀಯ ಮತ್ತು ವಿಶೇಷ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ದರೋಡೆಕೋರರನ್ನು ಪತ್ತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೆ.ಎಸ್.ಆರ್.ಟಿ.ಸಿ ಡಿಪೋ 3 ಕಂಡಕ್ಟರ್ ಸೀನಪ್ಪ ಮತ್ತು ಹನುಮಂತ್ ಹಟಗಲ್ ಅವರನ್ನು

ಕೆಎಸ್ಆರ್ಟಿಸಿ; ಉತ್ತಮ ಸೇವಾ ನೌಕರರಿಗೆ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗಣೇಶ ಚತುರ್ಥಿ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಬಾವಿ ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು

ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »

ಕರಾವಳಿ
Scroll to Top