ಕರಾವಳಿ

ದೇರಳಕಟ್ಟೆ ಜಿಲ್ಲಾ ಮುಖ್ಯರಸ್ತೆ – ಮಾರ್ಗ ಬದಲಾವಣೆ ವಾಹನಗಳ ಸಂಚಾರ ನಿರ್ಬಂಧ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. ಮಂಗಳೂರು ತಾಲೂಕು, ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ, ಲೋಕೋಪಯೋಗಿ ಇಲಾಖೆಯ ದೇರಳಕಟ್ಟೆ ಬರುವ ಜಿಲ್ಲಾ ಮುಖ್ಯ ರಸ್ತೆಯಲ್ಲಿ (ಕಾನಕೆರೆ – ರೆಂಜಾಡಿ) ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಸದರಿ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ. ದೇರಳಕಟ್ಟೆ – ಬರುವ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳು ಈ […]

ದೇರಳಕಟ್ಟೆ ಜಿಲ್ಲಾ ಮುಖ್ಯರಸ್ತೆ – ಮಾರ್ಗ ಬದಲಾವಣೆ ವಾಹನಗಳ ಸಂಚಾರ ನಿರ್ಬಂಧ Read More »

ಕರಾವಳಿ, ಕರ್ನಾಟಕ

ಪರಾರಿ – ಉಳಾಯಿಬೆಟ್ಟು – ಮಲ್ಲೂರು ರಸ್ತೆ ದುಸ್ಥಿತಿ; ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. ಮಂಗಳೂರು ತಾಲೂಕಿನ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ ಮುಖ್ಯ ರಸ್ತೆಯ 0.95 ಕಿ.ಮೀ. ರಲ್ಲಿ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ.   ಪರಾರಿ – ಉಳಾಯಿಬೆಟ್ಟು ಸೇತುವೆಯ ಮೂಲಕ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ

ಪರಾರಿ – ಉಳಾಯಿಬೆಟ್ಟು – ಮಲ್ಲೂರು ರಸ್ತೆ ದುಸ್ಥಿತಿ; ಘನ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ   ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ,

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸಿಮ್ ಕಾರ್ಡ್ ವಂಚನೆ ಪ್ರಕರಣ: ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಸಿಮ್‌ ಕಾರ್ಡ್‌ಗಳನ್ನು ಸೈಬರ್ ವಂಚಕರಿಗೆ ನೀಡುವ ಸಲುವಾಗಿ ಅವುಗಳನ್ನು ಖರೀದಿಸುತ್ತಿದ್ದ ಇಬ್ಬರನ್ನು ಮಂಗಳೂರಿನ ಸೆನ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಮೂಲತಃ ಬೆಳ್ತಂಗಡಿಯ ಪ್ರಸಕ್ತ ನಗರದ ಮರೋಳಿ ಸಮೀಪದ ಬಜ್ಜೋಡಿಯಲ್ಲಿ ವಾಸವಾಗಿದ್ದ ಸಮದ್ ಮತ್ತು ಅಜೀಂ ಎಂದು ಗುರುತಿಸಲಾಗಿದೆ. ಏರ್‌ಟೆಲ್ ಕಂಪೆನಿಯ 86 ಸಿಮ್ ಕಾರ್ಡ್‌ಗಳು, 2 ಮೊಬೈಲ್ ಪೋನ್ ಮತ್ತು ಕಾರನ್ನು ಇವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಮ್ ಕಾರ್ಡ್ ವಂಚನೆ ಪ್ರಕರಣ: ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ದ್ರವ್ಯ ಸೇವನೆ ಆರೋಪ- ಐವರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 14. ಕಾವೂರು ಠಾಣಾ ವ್ಯಾಪ್ತಿ ಹಾಗು ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಡಿ ಐವರನ್ನು ಬಂಧಿಸಿದ ಕುರಿತು ವರದಿಯಾಗಿದೆ.     ಬಂಧಿತರನ್ನು ಅಮಿರುದ್ದೀನ್ (26), ಜಿಯಾದ್ (25), ಮನ್ಸೂರ್ (25), ಕಾವೂರು ಠಾಣಾ ವ್ಯಾಪ್ತಿಯ ಕೊಂಚಾಡಿಯಲ್ಲಿ ಮೂಡುಶೆಡ್ಡೆಯ ದಿವಿತ್ ಡಿ. ಶೆಟ್ಟಿ (18) ಮತ್ತು ಪಾಂಡೇಶ್ವರ ಠಾಣಾ ವ್ಯಾಪ್ತಿಯ ಪಾಂಡೇಶ್ವರ ಕಟ್ಟೆ ಬಳಿ ಮೂಲತಃ ಚಾಮರಾಜನಗರದ ಪ್ರಸಕ್ತ ಪಾಂಡೇಶ್ವರದಲ್ಲಿ

ಮಾದಕ ದ್ರವ್ಯ ಸೇವನೆ ಆರೋಪ- ಐವರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ರಾಜ್ಯ ಸರಕಾರವು ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿ ಹೊರಡಿಸಿದ್ದಾರೆ. ಖುಷ್ಬೂ ಜಿ.ಚೌಧರಿ ಅವರನ್ನು ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಹಾಗೂ ಡಾ.ವೆಂಕಟೇಶ್ ಎಂ.ವಿ. ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಹಟ್ಟಿ ಚಿನ್ನದ ಗಣಿ ಕಂಪೆನಿಯ ವ್ಯವಸ್ಥಾಪಕ ನಿದೇಶಕ ಶೆಟ್ಟೆಣ್ಣನವರ್ ಎಸ್.ಬಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ, ರಾಜ್ಯ ಕೈಗಾರಿಕಾ

ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಡಾ ಮುರಲೀಮೋಹನ್ ಚೂಂತಾರುರವರಿಗೆ ರಾಷ್ಟ್ರಪತಿ ಪದಕ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 14.  ಕಳೆದ ಒಂಬತ್ತೂವರೆ ವರ್ಷಗಳಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಸೇವೆ ಸಲ್ಲಿಸುತ್ತಿರುವ ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಡಾ. ಮುರಲೀಮೋಹನ್ ಚೂಂತಾರುರವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.   ಇವರು ಸಲ್ಲಿಸಿದ ಪ್ರಾಮಾಣಿಕ, ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ  ಗೃಹ ಮಂತ್ರಾಲಯದ ಶಿಫಾರಸಿನಂತೆ ಪ್ರತಿಷ್ಟಿತ ರಾಷ್ಟ್ರಪತಿಗಳ  ವಿಶಿಷ್ಟ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಇವರ ತಾಯಿ ಸರೋಜಿನಿ ಭಟ್ಟ್ ಸ್ಮರಣಾರ್ಥ ಚೂಂತಾರು ಸರೋಜಿನಿ

ಡಾ ಮುರಲೀಮೋಹನ್ ಚೂಂತಾರುರವರಿಗೆ ರಾಷ್ಟ್ರಪತಿ ಪದಕ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 14. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ.   ಬಂಧಿತನನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಹೇಳಿ ಅಲ್ಲಿ ಮೂವರು ಆರೋಪಿಗಳು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪೋಕ್ಸೋ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಆನೆ ದಂತ ಕಳ್ಳ ಸಾಗಣೆ ದಂತ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಚಾಮರಾಜನಗರ, ಆ. 14. ಆನೆ ದಂತವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ವೇಳೆ ಕಳ್ಳರು ಸಿಕ್ಕಿಬಿದ್ದ ಘಟನೆ ಕರ್ನಾಟಕ ತಮಿಳುನಾಡು ರಾಜ್ಯದ ಗಡಿಭಾಗವಾದ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಿಂದ ವರದಿಯಾಗಿದೆ.   ಬಂಧಿತನನ್ನು ದುರೈಸ್ವಾಮಿ ಎಂದು ಗುರುತಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶವಾದ ಸತ್ಯಮಂಗಲಂ ಪರಿಸರದಲ್ಲಿ ಗಸ್ತು ನಿರತ ಅರಣ್ಯಾಧಿಕಾರಿಗಳು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾಗ ದುರೈಸ್ವಾಮಿ ಎಂಬಾತನನ್ನು ಹಿಡಿದು ವಿಚಾರಣೆ ನಡೆಸಿದಾಗ ಆತನ ಬಳಿ ಎರಡು ಆನೆಗಳನ್ನು ಬಚ್ಚಿಟ್ಟುಕೊಂಡಿರುವ

ಆನೆ ದಂತ ಕಳ್ಳ ಸಾಗಣೆ ದಂತ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ

ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ- ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba ಉಳ್ಳಾಲ. ಆ. 14. ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತವಾಗಿ ಚಾಲಕನೋರ್ವ ಮೃತಪಟ್ಟು ರಸ್ತೆಗೆಸೆಯಲ್ಪಟ್ಟಿದ್ದು, ಪರಿಣಾಮ ಚಾಲಕನಿಲ್ಲದೇ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿಂಗ್ ನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ಮೂವರು ಅಪಾಯದಿಂದ ಪಾರಾದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ ಎಂದು ಗುರುತಿಸಲಾಗಿದೆ. ಇವರು ಧರ್ಮನಗರದಿಂದ ತನ್ನ ರಿಕ್ಷಾದಲ್ಲಿ ಇಬ್ಬರು ಮಹಿಳೆಯರನ್ನು ಕೂರಿಸಿಕೊಂಡು ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.

ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ- ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top