ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ  ಪ್ರವರ್ಗ -1, ಎಸ್.ಸಿ, ಎಸ್.ಟಿ ರೂ. 2.50 ಲಕ್ಷ ಮೀರಿರಬಾರದು. ಪ್ರವರ್ಗ -2ಎ, 2ಬಿ, 3ಎ, 3ಬಿ, ಗಳಲ್ಲಿ […]

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಬಾಲಯೇಸು ದೇವಾಲಯದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 13. ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಇಲ್ಲಿನ ಬಾಲಯೇಸು ದೇವಾಲಯದಲ್ಲಿ ನಡೆದ ದಿವ್ಯ ಬಲಿಪೂಜೆಯಲ್ಲಿ ಯುವ ಜನರಿಗೋಸ್ಕರ ವಿಶೇಷವಾಗಿ ಪ್ರಾರ್ಥಿಸಲಾಯಿತು. ನಂತರ ದೇವಾಲಯದ ವಂದನೀಯ ಗುರುಗಳಾದ ಫಾ| ಗ್ರೇಶನ್ ಅಲ್ವಾರಿಸ್ ರವರು ಯುವಜನರನ್ನು ಕುರಿತು ಮಾತನಾಡಿದರು ಹಾಗೂ ಆ ದಿನದ ಮಹತ್ವವನ್ನು ತಿಳಿಸಿದರು.‌ ಒಂದು ಗಂಟೆಗಳ ಕಾಲ ಅವರೊಂದಿಗೆ ಸೇರಿ ಮುಂದಿನ ದಿನಗಳಲ್ಲಿ ಮಾಡುವ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿ ಒಂದು ಪಟ್ಟಿಯನ್ನು ತಯಾರಿಸಲಾಯಿತು. ಯುವ ಸಮುದಾಯವು ಸಂಘಟಿತವಾಗಿದ್ದರೆ

ನೆಲ್ಯಾಡಿ: ಬಾಲಯೇಸು ದೇವಾಲಯದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ Read More »

ಕರಾವಳಿ, ಕರ್ನಾಟಕ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ವಿವಿಧ ಸಂಘ ಸಂಸ್ಥೆಗಳು, ಹಿರಿಯ ವಿದ್ಯಾರ್ಥಿಗಳು ಭಾಗಿ

(ನ್ಯೂಸ್ ಕಡಬ) newskadaba.com ಕೆಮ್ಮಾರ, ಆ. 13. ಇಲ್ಲಿನ ಕೆಮ್ಮಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರಯೋತ್ಸವ ಪೂರ್ವಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಒಕ್ಕೂಟ ಕೊಯಿಲ ಅಧ್ಯಕ್ಷೆ ಶ್ರೀಮತಿ ಸೆಲಿಕತ್, ವಲಕಡಮ ಒಕ್ಕೂಟ ಅಧ್ಯಕ್ಷ ಸುದೀಶ್, ಕೆಮ್ಮಾರ ಒಕ್ಕೂಟ ಅಧ್ಯಕ್ಷ ರವಿಕಾಂತ ಬಡ್ಡಮೆ, ಸೇವಾಪ್ರತಿನಿಧಿಗಳಾದ ಕವಿತಾ ಮತ್ತು ಗೀತಾ ಹಾಗೂ ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃಧ್ದಿ ಸಮಿತಿ ಸದಸ್ಯರು ಸೇರಿ ಸ್ವಚ್ಚತಾ ಕಾರ್ಯಕ್ರಮ ನಿರ್ವಹಿಸುವ ಮೂಲಕ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ತಯಾರಿ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ವಿವಿಧ ಸಂಘ ಸಂಸ್ಥೆಗಳು, ಹಿರಿಯ ವಿದ್ಯಾರ್ಥಿಗಳು ಭಾಗಿ Read More »

ಕರಾವಳಿ

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ- ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13. ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ  ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನವು ಆಗಸ್ಟ್ 14ರ ಬುಧವಾರದಂದು ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯಾ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ. ಬಿ.ಇ/ ಬಿ.ಟೆಕ್/ ಬಿ.ಸಿ.ಎ/ ಎಂ.ಸಿ.ಎ/ ಬಿ.ಎಸ್.ಸಿ/ ಎಂ.ಎಸ್.ಸಿ/ ಡಿಪ್ಲೋಮಾ ಇನ್‍ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ  ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.  ಹೆಚ್ಚಿನ ಮಾಹಿತಿಗೆ ಮಂಗಳೂರಿನ ಜಿಲ್ಲಾ

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ- ನೇರ ಸಂದರ್ಶನ Read More »

ಕರಾವಳಿ

 ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 13.  ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರ ಅಡಿ ಎಲ್ಲಾ ಸರ್ಕಾರಿ

 ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ Read More »

ಕರಾವಳಿ

ಬೈಂದೂರು: ತಾಲೂಕು ಕಚೇರಿ ಎದುರು ನ್ಯಾಯಕ್ಕಾಗಿ ಧರಣಿ

(ನ್ಯೂಸ್ ಕಡಬ) newskadaba.com ಬೈಂದೂರು, ಆ. 13.  ಒಂದು ಕಡೆ ಕಾಂಗ್ರೆಸ್ ಆಡಳಿತದ ವಿರುದ್ಧ ಬಿಜೆಪಿ, ಜೆಡಿಎಸ್ ಮೈಸೂರು ‘ಛಲೋ ಯಾತ್ರೆ’ ನಡೆಸುತ್ತಿದ್ದರೆ, ಇನ್ನೊಂದು ಕಡೆ ವಿಧಾನಸಭಾ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎನ್ನುವ ಆರೋಪ ಪಡೆದುಕೊಳ್ಳುತ್ತಿದೆ. ಶಾಸಕರ ಜನತಾ ಕಾರ್ಯಾಲಯಗಳಲ್ಲಿ ಅಧಿಕಾರಿಗಳ ಸಭೆ ಕರೆದರೆ ಅಧಿಕಾರಿಗಳು ಭಾಗವಹಿಸಬಾರದು ಎಂದು ಉಡುಪಿ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಇದರಿಂದಾಗಿ ಬೈಂದೂರಿನಲ್ಲಿ ಶಾಸಕಾಂಗ ಮತ್ತು ಕಾರ್ಯಾಂಗದ ನಡುವಿನ ಸಂಘರ್ಷ

ಬೈಂದೂರು: ತಾಲೂಕು ಕಚೇರಿ ಎದುರು ನ್ಯಾಯಕ್ಕಾಗಿ ಧರಣಿ Read More »

ಕರಾವಳಿ

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13.  ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ ನಲ್ಲಿ ‘ನಾಥು’ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ (53) ಮೃತಪಟ್ಟ ಕುರಿತು ವರದಿಯಾಗಿದೆ. ಇವರು ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅರಂತೋಡು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 12. ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಸರ್ಕಾರದ ಆದೇಶ ಪ್ರಕಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ 700 ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ

ಅರಂತೋಡು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ Read More »

ಕರಾವಳಿ, ಕರ್ನಾಟಕ

ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 12. ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಸವಾರ ಮುಝಮ್ಮಿಲ್ ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಟ್ಲದಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ.

ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 12. ಸಕಲೇಶಪುರ- ಬಾಳುಪೇಟೆ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ ಈ ಮಾರ್ಗದ 10 ರೈಲುಗಳ ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ.   ಆಗಸ್ಟ್ 12, 13ರಂದು ಕೆಎಸ್‌ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್, ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ಸ್ಪೆಷಲ್ ರೈಲು ಸಂಚಾರ ರದ್ದಾಗಿದೆ. ಆಗಸ್ಟ್ 13 ರಂದು ಕಾರವಾರ -ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಆಗಸ್ಟ್ 13,

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!! Read More »

ಕರಾವಳಿ, ಕರ್ನಾಟಕ
Scroll to Top