ಕರಾವಳಿ

ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್  

(ನ್ಯೂಸ್ ಕಡಬ) newskadaba.com ಪುತ್ತೂರು, ಆ.02. ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಮುಂಜಾನೆ ನಡೆದಿದೆ. ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ. ಗುಡ್ಡ ಕುಸಿತ ಸಂಭವಿಸುವ ಸಮಯ ಯಾವುದೇ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ […]

ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್   Read More »

ಕರಾವಳಿ, ಕ್ರೈಮ್ ನ್ಯೂಸ್

   ದಕ್ಷಿಣ ಕನ್ನಡಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ನೆರೆ, ಸಾಕಷ್ಟು ಹಾನಿ ಉಂಟಾಗಿದೆ. ಈ ಹಿನ್ನೆಲೆ ಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಳೆ ಹಾನಿ ಪ್ರದೇಶಗಳ ಭೇಟಿ ನೀಡಿದ ನಂತರ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

   ದಕ್ಷಿಣ ಕನ್ನಡಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ Read More »

ಕರಾವಳಿ

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆಗಸ್ಟ್ 02ರ ಶುಕ್ರವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

 ವ್ಯಕ್ತಿ ನಾಪತ್ತೆ….!!        ದೂರು ದಾಖಲು                              

(ನ್ಯೂಸ್ ಕಡಬ)newskadaba.com ಉಡುಪಿ, ಆ.01. ಪೆರ್ಡೂರು ಗ್ರಾಮದ ಕಲ್ಲುಬೆಟ್ಟು ನಿವಾಸಿ ರವಿಕುಮಾರ್ (34) ಮನೆಯಿಂದ ಹೋದವರು ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಅವನು 5 ಅಡಿ 4 ಇಂಚು ಎತ್ತರ, ಎಣ್ಣೆಯುಕ್ತ ಕಂದು ಮೈಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಅವರು ಕನ್ನಡ, ತುಳು, ಹಿಂದಿ ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ ಎಂದು ವರದಿ ತಿಳಿಸಿದೆ.    

 ವ್ಯಕ್ತಿ ನಾಪತ್ತೆ….!!        ದೂರು ದಾಖಲು                               Read More »

ಕರಾವಳಿ

‘ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು’ ಸ್ಪೀಕರ್ ಯು ಟಿ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು ಜುಲೈ 31 ರಂದು ಬುಧವಾರ ಒತ್ತಾಯಿಸಿದರು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಖಾದರ್, ತುಳುವಿನ ಸಾಂಸ್ಕೃತಿಕ ಮತ್ತು ಭಾಷಿಕ ಮಹತ್ವವನ್ನು ಒತ್ತಿ ಹೇಳಿದರು, “ಕಲಾವಿದರು, ನಾಟಕಕಾರರು ಮತ್ತು ಚಲನಚಿತ್ರ ನಿರ್ಮಾಪಕರು ಭಾಷೆಯನ್ನು ಜಾಗತಿಕವಾಗಿ ಗಮನಾರ್ಹವಾಗಿ ಪ್ರಚಾರ ಮಾಡಿದ್ದಾರೆ. ತುಳು ಲೇಖಕರು ಅದರ ಖ್ಯಾತಿಯನ್ನು ಬಹಳವಾಗಿ ಹೆಚ್ಚಿಸಿದ್ದಾರೆ. ತುಳುವಿನ ಪ್ರೀತಿ, ಸಂಪ್ರದಾಯ, ಪರಂಪರೆಯನ್ನು

‘ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು’ ಸ್ಪೀಕರ್ ಯು ಟಿ ಖಾದರ್ Read More »

ಕರಾವಳಿ

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.01. ಮಳೆಯ ಆರ್ಭಟ ಮುಂದುವರಿದಿದ್ದು, ನೆರೆಯಿಂದ ಆವೃತವಾದ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌             Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.31. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲ ಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿಯ ಮೇಲೇರಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ Read More »

ಕರಾವಳಿ

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಜು.31. ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top