ಕರಾವಳಿ

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಸುರಿದ ಭಾರಿ ಮಳೆಗೆ ತಡರಾತ್ರಿ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಅಗತ್ಯ ಕಾರ್ಯಾಚರಣೆಗೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. ಮರ ಬಿದ್ದ ಪರಿಣಾಮ ಗುಜ್ಜರ ಕೆರೆಯ ಸುತ್ತಲೂ ಮಕ್ಕಳು ಹಾಗೂ ಹಿರಿಯರ ಸುರಕ್ಷತೆಯ ದೃಷ್ಟಿಯಿಂದ ಹಾಕಲಾಗಿದ್ದ ಸ್ಟಿಲ್ ರೇಲಿಂಗ್ ಮುರಿದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…! Read More »

ಕರಾವಳಿ, ಕ್ರೈಮ್ ನ್ಯೂಸ್

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ    

(ನ್ಯೂಸ್ ಕಡಬ)newskadaba.com ಕೇರಳ, ಜು.31. ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ ಈವರೆಗೆ ಅನೇಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ಅಂತಿಮ ಅಂಕಿ-ಅಂಶವಲ್ಲ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ಪ್ರಕೋಪ ಆಗಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಮೊದಲ ಜಲ ಸ್ಫೋಟ ಸಂಭವಿಸಿತ್ತು. 4.10ಕ್ಕೆ ಎರಡನೇ ಸ್ಫೋಟ ಉಂಟಾಗಿತ್ತು. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ     Read More »

ಕರಾವಳಿ

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್‌ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…!

(ನ್ಯೂಸ್ ಕಡಬ)newskadaba.com ಕೊಡಗು, ಜು.30. ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.30. ಅರ್ಧದಷ್ಟು ದ್ವೀಪವನ್ನೇ ನುಂಗಿರುವ ಪಾವೂರು- ಉಳಿಯ ಅಕ್ರಮ ಮರಳುಗಾರಿಕೆ ಕುರಿತು ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತ ಮಂಗಳೂರು ಉಪ ವಿಭಾಗ ದಂಡಾಧಿಕಾರಿ ನೇತೃತ್ವದಲ್ಲಿ ಪೊಲೀಸ್‌ ಇಲಾಖೆ ಹಾಗೂ ಏಳು ಸದಸ್ಯರನ್ನು ಒಳಗೊಂಡ ಸಮಿತಿಗೆ ವಾರದೊಳಗೆ ಸರಕಾರಕ್ಕೆ ವರದಿ ಸಲ್ಲಿಸಲು ಆದೇಶ ನೀಡಿದ್ದರೂ, ವಾರ ಕಳೆದು ತಿಂಗಳಾದರೂ ಸಮಿತಿಯ ವರದಿ ಮಾತ್ರ ಜಿಲ್ಲಾಡಳಿತ ಕೈಸೇರಿಲ್ಲ ಎನ್ನಲಾಗಿದೆ. ಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳು ಜನಗಾಗೃತಿ ಹಿನ್ನೆಲೆಯಲ್ಲಿ ನಿರಂತರವಾಗಿ ವರದಿ ಪ್ರಕಟಿಸಿದ ಪರಿಣಾಮವಾಗಿ ತನಿಖೆಗೆ ಒತ್ತಾಯಿಸಿದ್ದ

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ‘ಆಪರೇಷನ್ ಟೈಗರ್’ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದ್ದು, ಇದನ್ನು ಖಂಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕು ಮತ್ತು ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಯುಕ್ತರ ಕಚೇರಿ ಮುಂದೆ ಧರಣಿ ಆರಂಭಿಸಿದ್ದಾರೆ. ನಿನ್ನೆ ನಡೆದ ಟೈಗರ್ ಕಾರ್ಯಾಚರಣೆಯಲ್ಲಿ ತಳ್ಳುಗಾಡಿ, ಗೂಡಂಗಡಿಗಳು, ಸಾಮಗ್ರಿಗಳಿಗೆ ಹಾನಿ ಮಾಡಿದ್ದಲ್ಲದೆ ಆಹಾರ, ತಿಂಡಿತಿನಿಸುಗಳನ್ನು ನಾಶಪಡಿಸಿರುವುದರ ವಿರುದ್ಧ ಪ್ರತಿಭಟನಾಕಾರರು

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ Read More »

ಕರಾವಳಿ

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.30. ಪೊಲೀಸರು ಮನೆಗೆ ನುಗ್ಗಿ ವಿನಾಕಾರಣ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಈಶ್ವರಮಂಗಲ ಪಂಚೋಡಿಯಲ್ಲಿ ನಡೆದಿದೆ. ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ. ರಾತ್ರಿ 11 ಗಂಟೆ ಸುಮಾರಿಗೆ ತಾನು ಮನೆಯಲ್ಲಿ ಮಲಗಿದ್ದಾಗ ಬಾಗಿಲು ತಟ್ಟುವ ಶಬ್ದ ಕೇಳಿಸಿತು. ಬಾಗಿಲು ತೆರೆದಾಗ ನಾಲ್ವರು ಪೊಲೀಸರು ಮನೆಯಲ್ಲಿ ಬೇರೆ ಯಾರಾದರೂ ಇದ್ದಾರೆಯೇ ಎಂದು ಕೇಳಿದರು.

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು Read More »

ಕರಾವಳಿ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್  

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.30. ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ. ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್   Read More »

ಕರಾವಳಿ

ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ    ಹಲವಾರು ಮಂದಿ ಸಿಲುಕಿರುವ ಶಂಕೆ ರಕ್ಷಣಾ ಕಾರ್ಯ ಮುಂದುವರಿಕೆ    

(ನ್ಯೂಸ್ ಕಡಬ)newskadaba.com  ಕೇರಳ, ಜು.30. ಉತ್ತರ ಕನ್ನಡ ಶಿರೂರು ಬಳಿ ಭೂಕುಸಿತದ ಕಹಿ ಘಟನೆ ಮಾಸುವ ಮುನ್ನವೇ ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ನೂರಾರು ಮಂದಿ ಮಣ್ಣಿನೊಳಗೆ ಸಿಲುಕಿ ಹಾಕಿಕೊಂಡಿರುವ ಶಂಕೆಯಿದ್ದು ಹದಿನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ನಸುಕಿನ ಜಾವ ದುರ್ಘಟನೆ ಸಂಭವಿಸಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಭೂಕುಸಿತವಾದ ಪ್ರದೇಶಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ ಗೆ

ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ    ಹಲವಾರು ಮಂದಿ ಸಿಲುಕಿರುವ ಶಂಕೆ ರಕ್ಷಣಾ ಕಾರ್ಯ ಮುಂದುವರಿಕೆ     Read More »

ಕರಾವಳಿ
Scroll to Top