ಕರಾವಳಿ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.26. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಅಟೋ ರಿಕ್ಷಾ ಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22)  ಎಂದು ಗುರುತಿಸಲಾಗಿದೆ. ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ […]

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌ ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಪುತ್ತೂರು ಎಂಪಿಎಂಸಿ ರಸ್ತೆಯ ನಿವಾಸಿ ಜೋಸ್ವಿನ್‌ ಮಸ್ಕರೇನ್ಹಸ್‌ (24)  ಎಂದು ಗುರುತಿಸಲಾಗಿದೆ. ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಜೊತೆಗೆ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಯುವಕ ಟೆಟ್ರಾ ಹೆಡ್ರಾಕೆನಬಿನಾಯ್ಡ ಎಂಬ

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

(ನ್ಯೂಸ್ ಕಡಬ)newskadaba.com ಉಡುಪಿ, ಜು.25. ಮತ್ಸ್ಯಗಂಧ ಎಕ್ಸ್‌ ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿಗಳ ಮೇಲೆ ಬೃಹತ್ ಮರ ಬಿದ್ದಿರುವುದನ್ನು ಗಮನಿಸಿದ ಅವರು ಸರಿಯಾದ ಸಮಯಕ್ಕೆ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.    

ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ Read More »

ಕರಾವಳಿ

ಮಂಗಳೂರು: ವಾಹನಗಳಲ್ಲಿ ಪ್ರಖರ ಎಲ್ಐಡಿ ಲೈಟ್ ಬಳಕೆ 1170 ಪ್ರಕರಣ ದಾಖಲು, 5.86 ಲಕ್ಷ ರೂ. ದಂಡ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಹೆಚ್ಚು ಪ್ರಖರ ಬೆಳಕು ಹೊರಸೂಸುವ ಹಾಗೂ ಕಣ್ಣು ಕುಕ್ಕುವಂತಹ ದೀಪಗಳನ್ನು ಅಳವಡಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಲಾಯಿಸಿರುವ ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು ಒಟ್ಟು 1,170 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 5,86,500 ಲಕ್ಷ ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದೆ. ಪಡಿಸಿದ ಹೆಡ್‌ಲೈಟ್‌ ಗಳನ್ನು ಮಾತ್ರ ಅಳವಡಿಸಬೇಕು, ಹೆಚ್ಚುವರಿಯಾಗಿ ಆಲಂಕಾರಿಕ ದೀಪ ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್‌.ಇ.ಡಿ. ಬಲ್ಬ್ ಗಳನ್ನು ಅಳವಡಿಸುವಂತಿಲ್ಲ. ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ

ಮಂಗಳೂರು: ವಾಹನಗಳಲ್ಲಿ ಪ್ರಖರ ಎಲ್ಐಡಿ ಲೈಟ್ ಬಳಕೆ 1170 ಪ್ರಕರಣ ದಾಖಲು, 5.86 ಲಕ್ಷ ರೂ. ದಂಡ.! Read More »

ಕರಾವಳಿ
crime, arrest, suspected

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 25. ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಪಿಲಿಕುಳದಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕರಾದ ಯುಜಿನ್ ವಿಲ್ಫ್ರೆಡ್ ಪಿಂಟೋ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. 2020 ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು GM ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು ಎನ್ನಲಾಗಿದೆ. ಮಂಗಳೂರಿನ

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ Read More »

ಕರಾವಳಿ

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು !

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.25. ಭಾರೀ ಮಳೆಯಿಂದಾಗಿ ಮತ್ತೊಂದು ಅವಘಡ ಸಂಭವಿಸಿದ್ದು, ಗಾಳಿ-ಮಳೆಗೆ ಮಂಗಳೂರು ಹೊರವಲಯದ ಸುರತ್ಕಲ್‌ ಸಮೀಪವಿರುವ ಜೋಕಟ್ಟೆಯಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಶೈಲೇಶ್ (17) ಎಂದು ಗುರುತಿಸಲಾಗಿದೆ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಜೈಲಿನ ಮೇಲೆ ಪೊಲೀಸರ ದಾಳಿ ! 25 ಮೊಬೈಲ್,ಡ್ರಗ್ಸ್ ಸೇರಿ ಹಲವು ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಕಾರಾಗೃಹದ ಮೇಲೆ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದು, ಮೊಬೈಲ್‌ ಸೇರಿ ಹಲವು ನಿಷೇಧಿತ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಕೋಡಿಯಾಲ್ ಬೈಲ್ ನಲ್ಲಿರುವ ಜೈಲಿನಲ್ಲಿರುವ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪೊಲೀಸ್‌ ಇನ್ಸ್‌ ಪೆಕ್ಟರ್‌ಗಳ ನೇತೃತ್ವದಲ್ಲಿ ಸುಮಾರು 150 ಮಂದಿ ಸಿಬ್ಬಂದಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಲಾಗಿದೆ. ಹಲವು ವಿಚಾರಣಾಧೀನ ಕೈದಿಗಳ ಬಳಿ 25 ಮೊಬೈಲ್ ಫೋನ್‌ಗಳು, ಒಂದು ಬ್ಲೂಟೂತ್ ಸಾಧನ, 5 ಇಯರ್‌ಫೋನ್‌, ಒಂದು ಪೆನ್ ಡ್ರೈವ್, 5

ಮಂಗಳೂರು : ಜೈಲಿನ ಮೇಲೆ ಪೊಲೀಸರ ದಾಳಿ ! 25 ಮೊಬೈಲ್,ಡ್ರಗ್ಸ್ ಸೇರಿ ಹಲವು ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದೆ. ಜುಲೈ 26 ಮತ್ತು 28ರಂದು ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು (06567) ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯರಾತ್ರಿ 12.30 ಗಂಟೆಗೆ ಹೊರಟು, ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ

ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !   Read More »

ಕರಾವಳಿ, ಕರ್ನಾಟಕ
Scroll to Top