ಕರಾವಳಿ

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ

(ನ್ಯೂಸ್ ಕಡಬ)newskadaba.com. ಉಡುಪಿ, ಜು.24. ಮತ್ಸ್ಯಗಂಧ ಎಕ್ಸ್ ಪ್ರೆಸ್ ನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದ್ದು, ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನಗದು ಬಹುಮಾನ ನೀಡಿ ಪ್ರಶಂಸೆ ವ್ಯಕ್ತಪಡಿಸಲಾಯಿತು. ದೊಡ್ಡ ಅನಾಹುತವನ್ನು ತಪ್ಪಿಸಿ, ಸಮಯಪ್ರಜ್ಞೆಯಿಂದ ನಿರ್ಣಾಯಕ ಕ್ರಮವನ್ನು ಕೈಗೊಂಡಿರುವ ಸಿಬ್ಬಂದಿಯನ್ನು ಗುರುತಿಸಿ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ನ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನೀಡಿದರು. ಬಾರ್ಕೂರು-ಉಡುಪಿ ವಿಭಾಗದ ನಡುವೆ ಬರುತ್ತಿದ್ದಾಗ ಲೊಕೊ […]

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ Read More »

ಕರಾವಳಿ, ಕರ್ನಾಟಕ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ)newskadaba.com. ಬೆಂಗಳೂರು, ಜು.24. ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ ಮಾಡಿದ್ದೇನೆ. ದೇಶದ ಹಲವು ರಾಜ್ಯಗಳಲ್ಲಿ ಅಧಿಕೃತವಾಗಿ ಎರಡನೇ ಭಾಷೆಯನ್ನಾಗಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com. ಬಂಟ್ವಾಳ, ಜು.24. ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ, ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ ಎರಡು ಬಾರಿ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಸಂತ್ರಸ್ತ ಯುವತಿ ಠಾಣೆಗೆ ದೂರು‌ ನೀಡಿದ್ದಾರೆ. ಆರೋಪಿಗೆ ಈಗಾಗಲೇ ‌ಮದುವೆಯಾಗಿದ್ದು, ಸಂತ್ರಸ್ತ ಯುವತಿಗೆ ಅನ್ಯಾಯ ಎಸಗಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಲ್ಲದೆ

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ . ಮೃತರನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ‌ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ.ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಲಾರಿಯೊಂದು ಸ್ಕೂಟರ್‌ ಗೆ ಢಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ವಿಕಲಚೇತನ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಏಮಾಜೆ ಶಿವರಾಮ ನಾಯ್ಕ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಮೂರು ಚಕ್ರದ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಶಿವರಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರ ಠಾಣೆಯ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ವ್ಯಕ್ತಿ ನಾಪತ್ತೆ.! ಪತ್ತೆಗಾಗಿ ಕುಟುಂಬಸ್ಥರ ಮನವಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.24. ಕಳೆದ ಐದು ದಿನದಿಂದ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮಾಣಿಮಜಲು ಗ್ರಾಮದಿಂದ ಯುವಕನೊಬ್ಬ ಕಾಣೆಯಾಗಿದ್ದಾನೆ ಎಂದು ವರದಿಯಾಗಿದ್ದು, ನಾಪತ್ತೆಯಾದ ಯುವಕನನ್ನು ಸಮದ್ ಎಂದು ಗುರುತಿಸಲಾಗಿದೆ. ಸಮದ್ ಮೂರು ಮಕ್ಕಳ ತಂದೆಯಾಗಿದ್ದು, ಆತ ಎಲ್ಲಿಯಾದರೂ ಕಂಡು ಬಂದಲ್ಲಿ ತಕ್ಷಣ ಬಂಟ್ವಾಳ ಟೌನ್ ಪೋಲಿಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಥವಾ +91 90082 18612, +91 9901090586 ನಂಬರಿಗೆ ತಿಳಿಸಬೇಕಾಗಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ವ್ಯಕ್ತಿ ನಾಪತ್ತೆ.! ಪತ್ತೆಗಾಗಿ ಕುಟುಂಬಸ್ಥರ ಮನವಿ Read More »

ಕರಾವಳಿ, ಕರ್ನಾಟಕ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ.  ಮೃತ ಯುವತಿಯನ್ನು ನಯನಾ (17) ಎಂದು ಗುರುತಿಸಲಾಗಿದೆ. ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.  

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ 

(ನ್ಯೂಸ್ ಕಡಬ)newskadaba.com ಉಡುಪಿ, ಜು.24. 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು ಎನ್ನಲಾಗಿದೆ. ಮೃತರನ್ನು ವೃದ್ಧ ನಾಗಪ್ಪ ನಾಡಾರ್(85) ಎಂದು ಗುರುತಿಸಲಾಗಿದೆ. ಸಂಬಂಧಿಕರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಿದರೂ ಸಂಬಂಧಿಕರು ಪತ್ತೆ ಆಗಲಿಲ್ಲ. ಶವ ಸಂಸ್ಕಾರದಲ್ಲಿ ಆಶ್ರಮದ ಮುಖ್ಯಸ್ಥರಾದ ಶ್ರೀಮತಿ ತನುಲ ಹಾಗೂ ಆಶ್ರಮ ವಾಸಿಗಳು ಸಹಕರಿಸಿದರು. ಅಂಬಲಪಾಡಿ ಕೃಷ್ಣ ರವರು ಜೆ

ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ  Read More »

ಕರಾವಳಿ

ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿದ್ದು, ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.  ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ

ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ Read More »

ಕರಾವಳಿ

ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.24. ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ಉರುಳಿಬಿದ್ದ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಏಕಾಏಕಿ ವಿದ್ಯುತ್ ಕಂಬ ಉರುಳಿಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗಿದ್ದು, ಈಗಾಗಲೇ ಬಿ.ಸಿ.ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸುತ್ತಲೂ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂದರ್ಭ ಸವಾರರಿಗೆ ಚಾಲಕರಿಗೆ ಗೊಂದಲಗಳು ಉಂಟಾಗುತ್ತಿತ್ತು. ಇನ್ನು ಈ ಘಟನೆಯಿಂದಾಗಿ ವಾಹನ

ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ Read More »

ಕರಾವಳಿ
Scroll to Top