ಕರಾವಳಿ

ಮಾರ್ಚ್ 12ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ಮಾರ್ಚ್ 12ರಂದು ಬೆಳಿಗ್ಗೆ 8ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಸ್ಪರ್ಧೆಗಳು ಮಾರ್ಚ್ 13ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು […]

ಮಾರ್ಚ್ 12ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ Read More »

ಕರಾವಳಿ

ನಮ್ಮ ನಾಡು ಶ್ರೀಗಂಧದ ನಾಡಾಗಲಿ- ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ಕೆ. ಅಮರನಾರಾಯಣ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ವಿಶ್ವಸಂಸ್ಥೆ ವರದಿ ಪ್ರಕಾರ  ನಮ್ಮ ದೇಶದಲ್ಲಿ ಕಾಡಿನ  ಪ್ರಮಾಣ 33 ಶೇಕಡಾ  ಇರಬೇಕಾಗಿದ್ದು, ಸದ್ಯ  ನಮ್ಮ ಭಾರತದಲ್ಲಿ  ಇದು 23 ಶೇಕಡಾ  ಅರಣ್ಯ ಇದೆ. ನಮ್ಮ ರಾಜ್ಯ ಕರ್ನಾಟಕದಲ್ಲಿ  21 ಶೇಕಡಾ  ಅರಣ್ಯ  ಅದೆ.  ನೈಸರ್ಗಿಕ  ಕಾಡು  ಹೋಗಿ  ಕಾಂಕ್ರೀಟ್  ಕಾಡು  ಬೆಳೆದು  ನಿಂತಿದೆ. 2019ರಲ್ಲಿ ದ.ಕ. ಜಿಲ್ಲೆಯಲ್ಲಿ  44 ಶೇಕಡಾ  ಕಾಡು ಇತ್ತು. ಅದು ಈಗ 26 ಶೇಕಡಾಕ್ಕೆ ಇಳಿದಿದೆ. ದೇಶದೆಲ್ಲೆಡೆ ಅರಣ್ಯಗಳ ಅನುಪಾತ ಇಳಿಮುಖವಾಗುತ್ತಿದೆ.  ಈ

ನಮ್ಮ ನಾಡು ಶ್ರೀಗಂಧದ ನಾಡಾಗಲಿ- ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ಕೆ. ಅಮರನಾರಾಯಣ Read More »

ಕರಾವಳಿ

Data Room Software For Due Diligence Processes

Data room software is utilized to conduct due diligence of M&A deals, fundraising, and legal processes. It permits business information to be shared with other parties while controlling access and ensuring confidential information like financial performance, patents, or intellectual property are not seen by anyone else. When choosing a virtual data room, look for one

Data Room Software For Due Diligence Processes Read More »

ಕರಾವಳಿ

1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ವರ್ಲ್ಡ್ ರೆಕಾರ್ಡ್ ಮಾಡಿದ ಕಡಬದ ಗ್ರೀಷ್ಮಾ ರೈ

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮಾ ರೈ ಅವರು 1 ಗಂಟೆಯಲ್ಲಿ 81 ಬಾರಿ ನಿರಂತರವಾಗಿ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಮಾಡಿದ್ದಾರೆ. ಇವರು ಶಾಸ್ತ್ರೀಯ ಸಂಗೀತವನ್ನು ವಿದುಷಿ ಪಾರ್ವತಿ ಭಟ್ ಮತ್ತು ಸುಗಮ ಸಂಗೀತವನ್ನು ಡಾ. ಕಿರಣ್ ಕುಮಾರ್ ಗಾನಸಿರಿ ಮತ್ತು ಶ್ರೀ ಲಕ್ಷ್ಮಿ. ಎಸ್ ಪುತ್ತೂರು ಇವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಇವರು ಬೆಳಂದೂರು ಗ್ರಾಮ,

1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ವರ್ಲ್ಡ್ ರೆಕಾರ್ಡ್ ಮಾಡಿದ ಕಡಬದ ಗ್ರೀಷ್ಮಾ ರೈ Read More »

ಕರಾವಳಿ

ಮಾಸ್ಟರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್’ ನಲ್ಲಿ ಸನಾ ಶಮೀಮ್ ಗೆ 4 ನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. 2023 ಡಿಸೆಂಬರ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ನಡೆಸಿದ ಪರೀಕ್ಷೆಯಲ್ಲಿ ಮಾಸ್ಟರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ನಲ್ಲಿ ಸನಾ ಶಮೀಮ್ ರವರು 4 ನೇ ರ‍್ಯಾಂಕ್ ಪಡೆದಿದ್ದಾರೆ. A. J. Institute of Hospital Administration ನಿಂದ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಶಮೀಂ ಅಹ್ಮದ್ ಮತ್ತು ಸಮೀರಾ ಬಾನು ದಂಪತಿಯ ಪುತ್ರಿ.

ಮಾಸ್ಟರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್’ ನಲ್ಲಿ ಸನಾ ಶಮೀಮ್ ಗೆ 4 ನೇ ರ್ಯಾಂಕ್ Read More »

ಕರಾವಳಿ

MBA ಪರಿಕ್ಷೆಯಲ್ಲಿ ಉಷಾ ನಾಯಕ್ ಗೆ ಪ್ರಥಮ ರ್ಯಾಂಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಕಳೆದ 2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಯೆನೆಪೋಯ ಕಾಲೇಜಿನ ನಿರ್ವಹಣಾ ವಿಭಾಗದ ಉಪನ್ಯಾಸಕ ಡಾ. ಪ್ರಶಾಂತ್ ಅವರ ಪತ್ನಿಯಾಗಿರುವ ಉಷಾ ನಾಯಕ್ ಅವರು ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಕೆನರಾ ಕಾಲೇಜು ಹಾಗೂ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಉಪನ್ಯಾಸಕಿಯಾಗಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಷಾ ನಾಯಕ್, ಮೂಡಬಿದ್ರೆ ಒಂಟಿಕಟ್ಟೆ ರವೀಂದ್ರ ನಾಯಕ್ ಹಾಗೂ ಜಯಶ್ರೀ

MBA ಪರಿಕ್ಷೆಯಲ್ಲಿ ಉಷಾ ನಾಯಕ್ ಗೆ ಪ್ರಥಮ ರ್ಯಾಂಕ್‌ Read More »

ಕರಾವಳಿ

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮೋಹಿತ್ ಪೂಜಾರಿ ಅವರು ಮಂಗಳೂರಿನ ಮನೆಯೊಂದರಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಏಣಿ ಜಾರಿದ ಪರಿಣಾಮ ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಗೆ ತೆರಳಿದ್ದ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆಗೆ ಬಂದಿದ್ದು, ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತು, ಮಗುವು

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮಾದಕ ದ್ರವ್ಯ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರ ತಂಡ ಕೇರಳದಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಟಿ.ಇ.ಜೋಸೆಫ್ ಎಂದು ಗುರುತಿಸಲಾಗಿದೆ. ಈತನ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಈತನು 16 ವರ್ಷಗಳಿಂದ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದು, ಈತನ ವಿರುದ್ದ ನ್ಯಾಯಾಲಯವು ದಸ್ತಗಿರಿ

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರ್ಚ್ 1ರಿಂದ ಜಾನಪದ ಕಡಲೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮವು ಪಣಂಬೂರು ಬೀಚ್‍ ನಲ್ಲಿ ಮಾರ್ಚ್ 1ರಿಂದ 3ರ ವರೆಗೆ ನಡೆಯಲಿದೆ. ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮಾರ್ಚ್ 1ರಿಂದ ಜಾನಪದ ಕಡಲೋತ್ಸವ Read More »

ಕರಾವಳಿ
Scroll to Top