ಕರಾವಳಿ

ಫೆಬ್ರವರಿ 17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.15. ರಾಜ್ಯದ ಜನರಿಗೆ ಚುನಾವಣೋತ್ತರದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ  ಗ್ಯಾರಂಟಿಗಳನ್ನು ಅಧಿಕಾರ ವಹಿಸಿಕೊಂಡ ಬಳಿಕ ಚಾಚೂ ತಪ್ಪದೆ ಅನುಷ್ಠಾನಿಸಿ ಜನರ ಮನಗೆದ್ದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಸಾಧನೆಯನ್ನು ಜನರ ಮುಂದೆ ಪ್ರಸ್ತುತಪಡಿಸಲು ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಪರಿವರ್ತಿಸಲು ಜನರು ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಸುರಾಜ್ ಹೆಗ್ಡೆ ಹೇಳಿದರು. ಅವರು ಕಡಬದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ […]

ಫೆಬ್ರವರಿ 17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ Read More »

ಕರಾವಳಿ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರಿನ  ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತುಮಕೂರು ಜಿಲ್ಲೆಯ ನಯನ ಎಂ.ಜಿ. ಎಂದು ಆಕೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ರೈಲ್ವೇ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಇಂದು ಮೂಡಬಿದ್ರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಫೆಬ್ರವರಿ 15ರಂದು  ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧೀಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420.

ಇಂದು ಮೂಡಬಿದ್ರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 15. ಸಂವಿಧಾನ ಪೀಠಿಕೆಯ ಆಶಯ ಮತ್ತು ಮೌಲ್ಯಗಳನ್ನು ಸ್ತಬ್ದ ಚಿತ್ರದ ಮೂಲಕ ಜನರಿಗೆ ತಿಳಿಸಲು ಸಂವಿಧಾನ ಜಾಥಾವು ಫೆ. 17 ರಂದು ಅಪರಾಹ್ನ 3 ಗಂಟೆಗೆ ಆಗಮಿಸುವ ಸಂದರ್ಭದಲ್ಲಿ ಜಾಥಾವನ್ನು ಅದ್ಧೂರಿಯಾಗಿ ಸ್ವಾಗತಿಸುವ ಸಲುವಾಗಿ ರೂಪು ರೇಶೆಗಳ ಬಗ್ಗೆ ಚರ್ಚಿಸಲು ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಪೂರ್ವಭಾವಿ ಸಭೆಯು ಬುಧವಾರದಂದು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆ Read More »

ಕರಾವಳಿ

ಕಡಬ: ವಾರಿಸುದಾರರಿಲ್ಲದ ದಲಿತ ಕುಟುಂಬದ ಭೂಮಿ ಅತಿಕ್ರಮಣ ಆರೋಪ – ದಲಿತ ಹಾಗೂ ಹಿಂದೂ ಪರ ಸಂಘಟನಾ ಸದಸ್ಯರ ಜಮಾವಣೆ – ಅಧಿಕಾರಿಗಳಿಗೆ ದೂರು

ಕಡಬ, ಫೆ.14. ಕಡಬ ಗ್ರಾಮದ ಪಿಜಕಳ ಎಂಬಲ್ಲಿ ದಲಿತರೋರ್ವರ ಹೆಸರಿನಲ್ಲಿರುವ ಸ್ಥಿರಾಸ್ಥಿಯನ್ನು ವ್ಯಕ್ತಿಯೋರ್ವರು ಅತಿಕ್ರಮಿಸಿಕೊಂಡು ಜೆಸಿಬಿ ಮೂಲಕ ಸಮತಟ್ಟುಗೊಳಿಸಿದ್ದಾರೆ ಎಂದು ಆರೋಪಿಸಿ ಬುಧವಾರ ಕಡಬದ ದಲಿತ ಸಂಘಟನೆ ಮತ್ತು ಹಿಂದೂಪರ ಸಂಘಟನೆಗಳು ಸ್ಥಳದಲ್ಲಿ ಪ್ರತಿಭಟಿಸಿದರು. ಬಳಿಕ ಸ್ಥಳಕ್ಕೆ ಬಂದ ಕಂದಾಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ನೀಡಿದರು. ಈ ವೇಳೆ ಮಾತನಾಡಿದ ಭೀಮ್ ಆರ್ಮಿ ಕಡಬ ತಾಲೂಕು ಅಧ್ಯಕ್ಷ ರಾಘವ ಕಳಾರ, ಪರಿಶಿಷ್ಟ ಜಾತಿಗೆ ಸೇರಿದ ಕುಂಞ ಮೇರ ಎಂಬುವವರಿಗೆ ಸೇರಿದ ಸರ್ವೆ ನಂಬ್ರ

ಕಡಬ: ವಾರಿಸುದಾರರಿಲ್ಲದ ದಲಿತ ಕುಟುಂಬದ ಭೂಮಿ ಅತಿಕ್ರಮಣ ಆರೋಪ – ದಲಿತ ಹಾಗೂ ಹಿಂದೂ ಪರ ಸಂಘಟನಾ ಸದಸ್ಯರ ಜಮಾವಣೆ – ಅಧಿಕಾರಿಗಳಿಗೆ ದೂರು Read More »

ಕರಾವಳಿ

ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 14. ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರದಂದು ರಾತ್ರಿ 11.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಡಾಂಬರು ಸಾಗಿಸುತ್ತಿದ್ದ ಲಾರಿ ಉದನೆ ತಲುಪುತ್ತಿದ್ದಂತೆಯೇ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವು ಸಿಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿದಿದ್ದು, ತಕ್ಷಣವೇ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಕಾರ್ಮಿಕರು

ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಟೆಲಿಗ್ರಾಮ್ ಮೂಲಕ ಡಾಟಾ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಂಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂ. ವಂಚನೆಯಾದ ಘಟನೆ ನಡೆದಿರುವ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಡಾಟ ರೇಡ್‌ ಎಂಬ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋರ್ವ ತಾನು ಕೆಲಸ ನಿರ್ವಹಿಸುವ ವೇಳೆ 900 ರೂ. ಅನ್ನು ಅವರ ಖಾತೆಗೆ ವರ್ಗಾಯಿಸಿರುತ್ತಾರೆ. ಬಳಿಕ ಫೆಬ್ರವರಿ

ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಭೂಮಾಪಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತಪಟ್ಟವರನ್ನು ವಿಶ್ವನಾಥ ರಾವ್ (45) ಎಂದು ಗರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಅವರು, ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕರಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು

ಹೃದಯಾಘಾತ- ಭೂಮಾಪಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಬದಿ ಸ್ಕೂಟರ್‌ ನಿಲ್ಲಿಸಿ ನಿದ್ದೆಗೆ ಜಾರಿದ ಸವಾರ – ಎದ್ದು ನೋಡಿದಾಗ ಸ್ಕೂಟರ್‌ ಕಳ್ಳತನ

(ನ್ಯೂಸ್ ಕಡಬ) newskadaba.com ಕಾಪು, ಫೆ. 14. ರಸ್ತೆ ಬದಿಯಲ್ಲಿ ಸ್ಕೂಟರ್‌ ನಿಲ್ಲಿಸಿ ಪಕ್ಕದಲ್ಲಿ ಮಲಗಿ ನಿದ್ರಿಸಿದ್ದ ಸವಾರನಿಗೆ ತಿಳಿಯದಂತೆ ಸ್ಕೂಟರ್‌ ಸಹಿತ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಎಂಬಲ್ಲಿ ನಡೆದಿದೆ. ಸ್ಕೂಟರ್ ಸವಾರ ಕಾರ್ಕಳ ಮುಡಾರು ಗ್ರಾಮದ ಚೇತನ್‌ ಎಂಬಾತ ಫೆ. 11ರಂದು ಮಧ್ಯರಾತ್ರಿ 12 ಗಂಟೆಯ ವೇಳೆಗೆ ರಾ.ಹೆ. 66ರ ಮೂಲಕ ಸುರತ್ಕಲ್‌ಗೆ ಹೋಗುತ್ತಿದ್ದಾಗ ಕೊಪ್ಪಲಂಗಡಿ ಬಳಿ ಬರುತ್ತಿದ್ದಂತೆ ನಿದ್ದೆ ಬಂದು ಸ್ಕೂಟರ್‌ ಸವಾರಿ ಮಾಡಲು

ರಸ್ತೆ ಬದಿ ಸ್ಕೂಟರ್‌ ನಿಲ್ಲಿಸಿ ನಿದ್ದೆಗೆ ಜಾರಿದ ಸವಾರ – ಎದ್ದು ನೋಡಿದಾಗ ಸ್ಕೂಟರ್‌ ಕಳ್ಳತನ Read More »

ಕರಾವಳಿ

ಫೆ. 25ರಂದು 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ ಹಾಗೂ ಸೇವಾನಿರತ ಮತ್ತು ಬ್ಯಾಕ್‍ ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ ಕರೆ ಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್ ಲೋಡ್

ಫೆ. 25ರಂದು 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ Read More »

ಕರಾವಳಿ
Scroll to Top